Homeಮುಖಪುಟ10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

- Advertisement -
- Advertisement -

ಆರ್ಥಿಕ ದುರ್ಬಲ ವರ್ಗ (ಇಡಬ್ಲ್ಯೂಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡಿದ್ದ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸೋಮವಾರ ಎತ್ತಿ ಹಿಡಿದಿದೆ. ಆದರೆ ಸುಪ್ರೀಂಕೋರ್ಟಿನ ಈ ತೀರ್ಪಿನ ವಿರುದ್ಧ ಜಾಲತಾಣಗಳಲ್ಲಿ ಹಲವರು ಧ್ವನಿ ಎತ್ತಿದ್ದು, ‘ಬ್ಯಾನ್‌_ಇಡಬ್ಲ್ಯೂಎಸ್‌’ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿ ಟ್ವೀಟ್‌ ಮಾಡುತ್ತಿದ್ದಾರೆ.

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮನೋಜ್ ಥಂಡಿ ಎಂಬವರು,“ಸಾಮಾಜಿಕವಾಗಿ ಹಿಂದುಳಿದವರಿಗೆ ಸಂವಿಧಾನದಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ, ಆರ್ಥಿಕ ದುರ್ಬಲ ವರ್ಗದ ಮೀಸಲಾತಿಯು ಸಾಂವಿಧಾನಿಕ ರಚನೆಗೆ ಧಕ್ಕೆ ತರುತ್ತದೆ. ಇದು ಅಸಾಂವಿಧಾನಿಕ” ಎಂದು ಮನೋಜ್ ಥಂಡಿ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

“ಮೇಲ್ಜಾತಿಯ ಬಡವರನ್ನು ಯಾರೂ ದೇವಸ್ಥಾನದಿಂದ ಹೊರಗೆ ಓಡಿಸಲ್ಲ. ಬಾವಿಯಿಂದ ನೀರು ಸೇದುವುದಕ್ಕೆ ಅವರಿಗೆ ನಿರ್ಬಂಧವಿಲ್ಲ. ಅವರಿಗೆ ಪ್ರತ್ಯೇಕವಾಗಿ ಊಟ ನೀಡಲ್ಲ. ಆದರೆ, ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದ ಜನತೆ ಈ ಅವಮಾನಗಳನ್ನು ಇಂದಿಗೂ ಅನುಭವಿಸುತ್ತಿದೆ. ಬ್ಯಾನ್‌_ಇಡಬ್ಲ್ಯೂಎಸ್‌” ಎಂದು ಪತ್ರಕರ್ತ ಹನ್ಸ್‌ರಾಜ್‌ ಮೀನಾ ಟ್ವೀಟ್‌ ಮಾಡಿದ್ದಾರೆ.

“ವಾಸ್ತವವಾಗಿ ಇಡಬ್ಲ್ಯೂಎಸ್‌ ಮೀಸಲಾತಿ ಅಸಾಂವಿಧಾನಿಕ. ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಆಧಾರದ ಮೇಲೆ ಮೀಸಲಾತಿ ಕೊಡಬೇಕೇ ಹೊರತು ಆರ್ಥಿಕ ಸ್ಥಿತಿಯ ಆಧಾರದಲ್ಲಿ ಅಲ್ಲ. ಬ್ಯಾನ್‌_ಇಡಬ್ಲ್ಯೂಎಸ್‌” ಎಂದು ‘ರಾಜಸ್ಥಾನ ಟ್ರೈಬಲ್‌ ಆರ್ಮಿ’ ಟ್ವೀಟ್‌ ಮಾಡಿದೆ.

“ಇಡಬ್ಲ್ಯೂಎಸ್‌ ಮೀಸಲಾತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಹೊರಗಿಡಲಾಗಿದೆ. ಇಡಬ್ಲ್ಯೂಎಸ್‌ ಮೀಸಲಾತಿ ಕೇವಲ ಸಾಮಾನ್ಯ ವರ್ಗಕ್ಕೆ ಮಾತ್ರ. ಇದು ಸಂವಿಧಾನದ ಸಮಾನತೆ ತತ್ವಕ್ಕೆ ವಿರುದ್ಧವಾಗಿದ್ದು, ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಅಂಥ ತಾರತಮ್ಯ ಏಕೆ” ಎಂದು ಸ್ನೇಹ ಸೋನಾಲಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇನ್ನೂ ಹಲವರು ಯು.ಯು. ಲಲಿತ್‌ ಅವರು ಸಿಜೆಐ ಹುದ್ದೆಯಿಂದ ಹೊರ ನಡೆಯುವ ಮುನ್ನ ಉತ್ತಮ ತೀರ್ಪು ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಅಂಕಣದಲ್ಲಿ scst ಮತ್ತು obc ಸಮುದಾಯಗಳ ಮೀಸಲಾತಿ ವಿರೋದವಾಗಿ ಬರೆಯುವವರು ಒಂದೋ ಸಂವಿಧಾನ ವಿರೋಧಿಗಳು ಇಲ್ಲವೇ ಮನು ಶಾಸನದಲ್ಲಿದ್ದoತೆ ,ದಲಿತರು ಹಿಂದುಳಿದ ಸಮುದಾಯಗಳು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾವಿರಾರು ವರ್ಷಗಳಿಂದ ಹೇಗೆ ಶೋಚನೀಯ ವಾಗಿದ್ದರು ಅದೇ ಸ್ಥಿತಿಯಲ್ಲಿ ಮುಂದುವರೆಯಲು ಆಶಿಸುವ ಮನೋವಿಕಾರಿ ಜಾತಿವಾದಿ ಕ್ರಿಮಿಗಳಷ್ಟೇ.

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...