Homeಮುಖಪುಟಆಪರೇಷನ್ ಸಿಂಧೂರ ಕುರಿತ ಹೇಳಿಕೆಗೆ ಬಂಧನಕ್ಕೊಳಗಾದ ಅಶೋಕ ವಿವಿ ಪ್ರೊಫೆಸರ್ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

ಆಪರೇಷನ್ ಸಿಂಧೂರ ಕುರಿತ ಹೇಳಿಕೆಗೆ ಬಂಧನಕ್ಕೊಳಗಾದ ಅಶೋಕ ವಿವಿ ಪ್ರೊಫೆಸರ್ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

- Advertisement -
- Advertisement -

‘ಆಪರೇಷನ್ ಸಿಂಧೂರ’ ಕುರಿತಾದ ಹೇಳಿಕೆಗಾಗಿ ಹರಿಯಾಣ ಪೊಲೀಸರಿಂದ ಬಂಧನಕ್ಕೊಳಗಾದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಆಪರೇಷನ್ ಸಿಂಧೂರ ಕುರಿತ

ಪ್ರೊಫೆಸರ್ ಮಹ್ಮದಾಬಾದ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠಕ್ಕೆ ಈ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ದೇಶಭಕ್ತಿಯ ಹೇಳಿಕೆಗಳಿಗಾಗಿ ಬಂಧಿಸಲಾಗಿದೆ ಎಂದು ಪ್ರೊಫೆಸರ್ ಮಹ್ಮದಾಬಾದ್ ಅವರು ಪ್ರತಿಪಾದಿಸಿದ್ದಾರೆ.

ತನ್ನ ಹೇಳಿಕೆಗಳನ್ನು ಸಂಪೂರ್ಣವಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದು, ದಯವಿಟ್ಟು ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಿ ಎಂದು ವಿನಂತಿದ್ದಾರೆ. ಸಿಬಲ್ ಅವರ ಹೇಳಿಕೆಯನ್ನು ಆಲಿಸಿದ ನಂತರ, ಸುಪ್ರೀಂಕೋರ್ಟ್‌ನ ಪೀಠವು ಮೇ 20 ಅಥವಾ 21 ರಂದು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಹೇಳಿದೆ.

ಆಪರೇಷನ್ ಸಿಂಧೂರ ಕುರಿತಾದ ಪ್ರೊಫೆಸರ್ ಅಹ್ಮದಾಬಾದ್ ಅವರ ಸಾಮಾಜಿಕ ಮಾಧ್ಯಮ ಹೇಳಿಕೆಗೆ ಸಂಬಂಧಿಸಿದಂತೆ ಭಾರತದ ಸಾರ್ವಭೌಮತೆ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿದಂತೆ ಗಂಭೀರ ಆರೋಪಗಳ ಅಡಿಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಮತ್ತು ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರೂ ಆಗಿರುವ ಮಹ್ಮದಾಬಾದ್ ಅವರನ್ನು ಭಾನುವಾರ ನವದೆಹಲಿಯ ಅವರ ನಿವಾಸದಿಂದ ಬಂಧಿಸಲಾಯಿತು. ಅವರ ಬಂಧನದ ನಂತರ, ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು.

ಆಪರೇಷನ್ ಸಿಂಧೂರ ಬಗ್ಗೆ ಅವರು ನೀಡಿದ ಹೇಳಿಕೆ ಮೇಲೆ ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಅವರ ಮೇಲೆ ಆರೋಪ ಹೊರಿಸಿತ್ತು. ಮಹ್ಮದಾಬಾದ್ ಅವರ ಹೇಳಿಕೆಗಳು ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯಾಗಿದೆ ಮತ್ತು ಅದು ಕೋಮು ಸೌಹಾರ್ದತೆಯನ್ನು ಉತ್ತೇಜಿಸುತ್ತದೆ ಎಂದು ರಾಜ್ಯ ಮಹಿಳಾ ಆಯೋಗವು ಟೀಕಿಸಿತ್ತು. ಆಪರೇಷನ್ ಸಿಂಧೂರ ಕುರಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...