HomeUncategorizedಮನಿ ಲಾಂಡರಿಂಗ್ ತೀರ್ಪಿನ ಎರಡು 'ಸಮಸ್ಯಾತ್ಮಕ' ಅಂಶಗಳನ್ನು ಪರಿಶೀಲಿಸಲು ಒಪ್ಪಿದ ಸುಪ್ರೀಂ

ಮನಿ ಲಾಂಡರಿಂಗ್ ತೀರ್ಪಿನ ಎರಡು ‘ಸಮಸ್ಯಾತ್ಮಕ’ ಅಂಶಗಳನ್ನು ಪರಿಶೀಲಿಸಲು ಒಪ್ಪಿದ ಸುಪ್ರೀಂ

- Advertisement -
- Advertisement -

27 ಜುಲೈ 2022ರಂದು ವಿಜಯ್ ಮದನ್‌ಲಾಲ್ ಚೌಧರಿ ವರ್ಸಸ್ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್‌ಎ)ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ಮನಿ ಲಾಂಡರಿಂಗ್ ತೀರ್ಪಿನಲ್ಲಿ ಕೇಂದ್ರಿ ತನಿಖಾ ಸಂಸ್ಥಗಳಿಗೆ (ಇಡಿ) ನೀಡಿದ ಪರಮಾಧಿಕಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿರುವ ಮೇಲ್ಮನವಿಯನ್ನು ಆಲಿಸಿದ ಸುಪ್ರೀಂ ಇಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಕಳೆದ ತಿಂಗಳಿನ ತೀರ್ಪಿನ ಎರಡು ಅಂಶಗಳನ್ನು ಪರಿಶೀಲಿಸಲು ಒಪ್ಪಿಗೆ ನೀಡಿದೆ.

ಕಳೆದ ತಿಂಗಳ ತೀರ್ಪಿನಂತೆ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ಪ್ರತಿಯನ್ನು (ECIR) ಆರೋಪಿಗೆ ನೀಡುವ ಅಗತ್ಯವಿರಲಿಲ್ಲ. ಜೊತೆಗೆ ಅಪರಾಧವನ್ನು ಸಾಬೀತುಪಡಿಸುವುದು ಇಡಿಯ ಕರ್ತವ್ಯವಾಗಿರದೆ ಆರೋಪಿಯು ತಾನು ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಹೊಂದಿದ್ದರು. ಈ ಎರಡು ಅಂಶಗಳನ್ನು ಮರು ಪರೀಶಿಲನೆ ನಡೆಸುವುದಾಗಿ ಸುಪ್ರೀಂ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು “ಇವು ಪ್ರಾಥಮಿಕವಾಗಿ ಪರಿಗಣಿಸಬೇಕಾದ ಎರಡು ಸಮಸ್ಯೆಗಳಾಗಿವೆ” ಎಂದು ಹೇಳಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿ, ಇಡೀ ಪಿಎಂಎಲ್‌ಎ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ಎಂದು ವಾದಿಸಿದರು. ಆದರೆ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಡೀ ತೀರ್ಪಿನ ಬದಲಾಗಿ ಆ ಎರಡು ಅಂಶಗಳ ಕುರಿತಾಗಿ ಮಾತ್ರ ಮರುಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.

ಆರೋಪಿಯನ್ನು ಬಂಧಿಸುವ, ಹುಡುಕಾಡುವ, ವಶಕ್ಕೆ ಪಡೆಯುವ, ಆರೋಪಿಯ ಆಸ್ತಿಯನ್ನು ಪ್ರಕರಣಕ್ಕೆ ಜೋಡಿಸುವ ಮತ್ತು ಕಾನೂನಾತ್ಮಕ ಶಿಕ್ಷೆ ವಿಧಿಸುವಂತಹ ಎಲ್ಲ ಅಧಿಕಾರಗಳನ್ನೂ ಮರುಪರಿಶೀಲನೆ ನಡೆಸುವುದಿಲ್ಲ ಎಂದು ಸುಪ್ರೀಂ ಹೇಳಿದೆ.

ಬಂಧನಕ್ಕೆ ಆಧಾರ ಅಥವಾ ಸಾಕ್ಷ್ಯವನ್ನು ತಿಳಿಸದೆ ಆರೋಪಿಗಳನ್ನು ಬಂಧಿಸುವ ಅನಿಯಂತ್ರಿತ ಅಧಿಕಾರ ಅಸಂವಿಧಾನಿಕ ಎಂದು ಅರ್ಜಿದಾರರು ವಾದಿಸಿದ್ದರು. ಪ್ರತಿ ಪ್ರಕರಣದಲ್ಲೂ ಇಸಿಐಆರ್ (ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ಫರ್‌ಮೆ‍ಷನ್ ರಿಪೋರ್ಟ್) ಪ್ರತಿಯನ್ನು ಪೂರೈಸುವುದು ಕಡ್ಡಾಯವಾಗಿಲ್ಲ. ಅದು ಸಹ ಎಫ್‌ಐಆರ್‌ನಂತೆಯೇ ಇದೆ ಮತ್ತು ಆರೋಪಿಯು ಪ್ರತಿಯನ್ನು ಪಡೆಯಲು ಅರ್ಹರು ಎಂದು ಅರ್ಜಿದಾರರು ವಾದಿಸಿದ್ದರು.

ಇದರ ಆಧಾರದಲ್ಲಿ ಎರಡು ಅಂಶಗಳನ್ನು ಮರುಪರಿಶೀಲಿಸುವುದಾಗಿ ಹೇಳಿಕ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಸಂವಿಧಾನ ಮತ್ತು ಮನಿ ಲಾಂಡರಿಂಗ್ ತಡೆ ತಿದ್ದುಪಡಿ ಕಾಯ್ದೆ ತೀರ್ಪಿನ ವಿರೋಧಭಾಸಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...