HomeUncategorizedಮನಿ ಲಾಂಡರಿಂಗ್ ತೀರ್ಪಿನ ಎರಡು 'ಸಮಸ್ಯಾತ್ಮಕ' ಅಂಶಗಳನ್ನು ಪರಿಶೀಲಿಸಲು ಒಪ್ಪಿದ ಸುಪ್ರೀಂ

ಮನಿ ಲಾಂಡರಿಂಗ್ ತೀರ್ಪಿನ ಎರಡು ‘ಸಮಸ್ಯಾತ್ಮಕ’ ಅಂಶಗಳನ್ನು ಪರಿಶೀಲಿಸಲು ಒಪ್ಪಿದ ಸುಪ್ರೀಂ

- Advertisement -
- Advertisement -

27 ಜುಲೈ 2022ರಂದು ವಿಜಯ್ ಮದನ್‌ಲಾಲ್ ಚೌಧರಿ ವರ್ಸಸ್ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್‌ಎ)ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ಮನಿ ಲಾಂಡರಿಂಗ್ ತೀರ್ಪಿನಲ್ಲಿ ಕೇಂದ್ರಿ ತನಿಖಾ ಸಂಸ್ಥಗಳಿಗೆ (ಇಡಿ) ನೀಡಿದ ಪರಮಾಧಿಕಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿರುವ ಮೇಲ್ಮನವಿಯನ್ನು ಆಲಿಸಿದ ಸುಪ್ರೀಂ ಇಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಕಳೆದ ತಿಂಗಳಿನ ತೀರ್ಪಿನ ಎರಡು ಅಂಶಗಳನ್ನು ಪರಿಶೀಲಿಸಲು ಒಪ್ಪಿಗೆ ನೀಡಿದೆ.

ಕಳೆದ ತಿಂಗಳ ತೀರ್ಪಿನಂತೆ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ಪ್ರತಿಯನ್ನು (ECIR) ಆರೋಪಿಗೆ ನೀಡುವ ಅಗತ್ಯವಿರಲಿಲ್ಲ. ಜೊತೆಗೆ ಅಪರಾಧವನ್ನು ಸಾಬೀತುಪಡಿಸುವುದು ಇಡಿಯ ಕರ್ತವ್ಯವಾಗಿರದೆ ಆರೋಪಿಯು ತಾನು ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಹೊಂದಿದ್ದರು. ಈ ಎರಡು ಅಂಶಗಳನ್ನು ಮರು ಪರೀಶಿಲನೆ ನಡೆಸುವುದಾಗಿ ಸುಪ್ರೀಂ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು “ಇವು ಪ್ರಾಥಮಿಕವಾಗಿ ಪರಿಗಣಿಸಬೇಕಾದ ಎರಡು ಸಮಸ್ಯೆಗಳಾಗಿವೆ” ಎಂದು ಹೇಳಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿ, ಇಡೀ ಪಿಎಂಎಲ್‌ಎ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ಎಂದು ವಾದಿಸಿದರು. ಆದರೆ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಡೀ ತೀರ್ಪಿನ ಬದಲಾಗಿ ಆ ಎರಡು ಅಂಶಗಳ ಕುರಿತಾಗಿ ಮಾತ್ರ ಮರುಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.

ಆರೋಪಿಯನ್ನು ಬಂಧಿಸುವ, ಹುಡುಕಾಡುವ, ವಶಕ್ಕೆ ಪಡೆಯುವ, ಆರೋಪಿಯ ಆಸ್ತಿಯನ್ನು ಪ್ರಕರಣಕ್ಕೆ ಜೋಡಿಸುವ ಮತ್ತು ಕಾನೂನಾತ್ಮಕ ಶಿಕ್ಷೆ ವಿಧಿಸುವಂತಹ ಎಲ್ಲ ಅಧಿಕಾರಗಳನ್ನೂ ಮರುಪರಿಶೀಲನೆ ನಡೆಸುವುದಿಲ್ಲ ಎಂದು ಸುಪ್ರೀಂ ಹೇಳಿದೆ.

ಬಂಧನಕ್ಕೆ ಆಧಾರ ಅಥವಾ ಸಾಕ್ಷ್ಯವನ್ನು ತಿಳಿಸದೆ ಆರೋಪಿಗಳನ್ನು ಬಂಧಿಸುವ ಅನಿಯಂತ್ರಿತ ಅಧಿಕಾರ ಅಸಂವಿಧಾನಿಕ ಎಂದು ಅರ್ಜಿದಾರರು ವಾದಿಸಿದ್ದರು. ಪ್ರತಿ ಪ್ರಕರಣದಲ್ಲೂ ಇಸಿಐಆರ್ (ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ಫರ್‌ಮೆ‍ಷನ್ ರಿಪೋರ್ಟ್) ಪ್ರತಿಯನ್ನು ಪೂರೈಸುವುದು ಕಡ್ಡಾಯವಾಗಿಲ್ಲ. ಅದು ಸಹ ಎಫ್‌ಐಆರ್‌ನಂತೆಯೇ ಇದೆ ಮತ್ತು ಆರೋಪಿಯು ಪ್ರತಿಯನ್ನು ಪಡೆಯಲು ಅರ್ಹರು ಎಂದು ಅರ್ಜಿದಾರರು ವಾದಿಸಿದ್ದರು.

ಇದರ ಆಧಾರದಲ್ಲಿ ಎರಡು ಅಂಶಗಳನ್ನು ಮರುಪರಿಶೀಲಿಸುವುದಾಗಿ ಹೇಳಿಕ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಸಂವಿಧಾನ ಮತ್ತು ಮನಿ ಲಾಂಡರಿಂಗ್ ತಡೆ ತಿದ್ದುಪಡಿ ಕಾಯ್ದೆ ತೀರ್ಪಿನ ವಿರೋಧಭಾಸಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...