HomeUncategorizedಮನಿ ಲಾಂಡರಿಂಗ್ ತೀರ್ಪಿನ ಎರಡು 'ಸಮಸ್ಯಾತ್ಮಕ' ಅಂಶಗಳನ್ನು ಪರಿಶೀಲಿಸಲು ಒಪ್ಪಿದ ಸುಪ್ರೀಂ

ಮನಿ ಲಾಂಡರಿಂಗ್ ತೀರ್ಪಿನ ಎರಡು ‘ಸಮಸ್ಯಾತ್ಮಕ’ ಅಂಶಗಳನ್ನು ಪರಿಶೀಲಿಸಲು ಒಪ್ಪಿದ ಸುಪ್ರೀಂ

- Advertisement -
- Advertisement -

27 ಜುಲೈ 2022ರಂದು ವಿಜಯ್ ಮದನ್‌ಲಾಲ್ ಚೌಧರಿ ವರ್ಸಸ್ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್‌ಎ)ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ಮನಿ ಲಾಂಡರಿಂಗ್ ತೀರ್ಪಿನಲ್ಲಿ ಕೇಂದ್ರಿ ತನಿಖಾ ಸಂಸ್ಥಗಳಿಗೆ (ಇಡಿ) ನೀಡಿದ ಪರಮಾಧಿಕಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿರುವ ಮೇಲ್ಮನವಿಯನ್ನು ಆಲಿಸಿದ ಸುಪ್ರೀಂ ಇಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಕಳೆದ ತಿಂಗಳಿನ ತೀರ್ಪಿನ ಎರಡು ಅಂಶಗಳನ್ನು ಪರಿಶೀಲಿಸಲು ಒಪ್ಪಿಗೆ ನೀಡಿದೆ.

ಕಳೆದ ತಿಂಗಳ ತೀರ್ಪಿನಂತೆ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ಪ್ರತಿಯನ್ನು (ECIR) ಆರೋಪಿಗೆ ನೀಡುವ ಅಗತ್ಯವಿರಲಿಲ್ಲ. ಜೊತೆಗೆ ಅಪರಾಧವನ್ನು ಸಾಬೀತುಪಡಿಸುವುದು ಇಡಿಯ ಕರ್ತವ್ಯವಾಗಿರದೆ ಆರೋಪಿಯು ತಾನು ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಹೊಂದಿದ್ದರು. ಈ ಎರಡು ಅಂಶಗಳನ್ನು ಮರು ಪರೀಶಿಲನೆ ನಡೆಸುವುದಾಗಿ ಸುಪ್ರೀಂ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು “ಇವು ಪ್ರಾಥಮಿಕವಾಗಿ ಪರಿಗಣಿಸಬೇಕಾದ ಎರಡು ಸಮಸ್ಯೆಗಳಾಗಿವೆ” ಎಂದು ಹೇಳಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿ, ಇಡೀ ಪಿಎಂಎಲ್‌ಎ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ಎಂದು ವಾದಿಸಿದರು. ಆದರೆ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಡೀ ತೀರ್ಪಿನ ಬದಲಾಗಿ ಆ ಎರಡು ಅಂಶಗಳ ಕುರಿತಾಗಿ ಮಾತ್ರ ಮರುಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.

ಆರೋಪಿಯನ್ನು ಬಂಧಿಸುವ, ಹುಡುಕಾಡುವ, ವಶಕ್ಕೆ ಪಡೆಯುವ, ಆರೋಪಿಯ ಆಸ್ತಿಯನ್ನು ಪ್ರಕರಣಕ್ಕೆ ಜೋಡಿಸುವ ಮತ್ತು ಕಾನೂನಾತ್ಮಕ ಶಿಕ್ಷೆ ವಿಧಿಸುವಂತಹ ಎಲ್ಲ ಅಧಿಕಾರಗಳನ್ನೂ ಮರುಪರಿಶೀಲನೆ ನಡೆಸುವುದಿಲ್ಲ ಎಂದು ಸುಪ್ರೀಂ ಹೇಳಿದೆ.

ಬಂಧನಕ್ಕೆ ಆಧಾರ ಅಥವಾ ಸಾಕ್ಷ್ಯವನ್ನು ತಿಳಿಸದೆ ಆರೋಪಿಗಳನ್ನು ಬಂಧಿಸುವ ಅನಿಯಂತ್ರಿತ ಅಧಿಕಾರ ಅಸಂವಿಧಾನಿಕ ಎಂದು ಅರ್ಜಿದಾರರು ವಾದಿಸಿದ್ದರು. ಪ್ರತಿ ಪ್ರಕರಣದಲ್ಲೂ ಇಸಿಐಆರ್ (ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ಫರ್‌ಮೆ‍ಷನ್ ರಿಪೋರ್ಟ್) ಪ್ರತಿಯನ್ನು ಪೂರೈಸುವುದು ಕಡ್ಡಾಯವಾಗಿಲ್ಲ. ಅದು ಸಹ ಎಫ್‌ಐಆರ್‌ನಂತೆಯೇ ಇದೆ ಮತ್ತು ಆರೋಪಿಯು ಪ್ರತಿಯನ್ನು ಪಡೆಯಲು ಅರ್ಹರು ಎಂದು ಅರ್ಜಿದಾರರು ವಾದಿಸಿದ್ದರು.

ಇದರ ಆಧಾರದಲ್ಲಿ ಎರಡು ಅಂಶಗಳನ್ನು ಮರುಪರಿಶೀಲಿಸುವುದಾಗಿ ಹೇಳಿಕ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಸಂವಿಧಾನ ಮತ್ತು ಮನಿ ಲಾಂಡರಿಂಗ್ ತಡೆ ತಿದ್ದುಪಡಿ ಕಾಯ್ದೆ ತೀರ್ಪಿನ ವಿರೋಧಭಾಸಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...