Homeಮುಖಪುಟಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ಸಿದ್ದೀಕ್ ಕಪ್ಪನ್ ಅವರಿಗೆ ವಕೀಲರನ್ನು ಭೇಟಿಯಾಗಲು ಅನುಮತಿ ನೀಡಿಲ್ಲ ಎಂಬ ಆರೋಪವನ್ನು ಉತ್ತರ ಪ್ರದೇಶ ಸರ್ಕಾರ ನಿರಾಕರಿಸಿದೆ

- Advertisement -
- Advertisement -

ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ತಮ್ಮ ವಕೀಲರನ್ನು ಭೇಟಿಯಾಗಲು, ಜಾಮೀನು ನೀಡಲು ಅನುಕೂಲವಾಗುವಂತೆ ಅರ್ಜಿಗೆ ಸಹಿ ಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿತು. ಜೊತೆಗೆ ಈ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾದ ರೀತಿಗೆ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ.

ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ, ಕಪ್ಪನ್ ಬಂಧನದ ವಿರುದ್ಧ ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ) ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿತು.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ತನ್ನ ವಕೀಲರನ್ನು ಭೇಟಿಯಾಗುವುದರಲ್ಲಿ ತಮಗೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ನಂತರ, KUWJ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಕಪ್ಪನ್ ಅವರನ್ನು ಭೇಟಿಯಾಗಲು ಅವಕಾಶ ನೀಡಿತು.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

“ಯಾವುದೇ ಆಕ್ಷೇಪಣೆ ಇರಲಿಲ್ಲ ಮತ್ತು ಯಾವುದೇ ಆಕ್ಷೇಪಣೆ ಕೂಡ ಇಲ್ಲ” ಎಂದ ಎಸ್.ಪಿ. ಮೆಹ್ತಾ ಅವರು ಕಪ್ಪನ್ ಅವರ ವಕೀಲರನ್ನು ಭೇಟಿಯಾಗಲು ಅನುಮತಿ ನೀಡಿಲ್ಲ ಎಂಬ ಆರೋಪವನ್ನು ನಿರಾಕರಿಸಿದರು. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದಿನ ವಾರಕ್ಕೆ ಮುಂದೂಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿರುವಂತೆ ಉತ್ತರಪ್ರದೇಶ ಸರ್ಕಾರವು ನ್ಯಾಯಾಂಗ ಬಂಧನದಲ್ಲಿರುವ ಕಪ್ಪನ್‌ಗೆ ಸಂಬಂಧಿಕರು ಅಥವಾ ವಕೀಲರೊಂದಿಗೆ ಮಾತನಾಡಲು ಅನುಮತಿ ಇಲ್ಲ ಎಂಬುದು “ಸಂಪೂರ್ಣ ಸುಳ್ಳು ನಿರೂಪಣೆ” ಎಂದು ಯುಪಿ ಸರ್ಕಾರ ಹೇಳಿದೆ. ಸಿದ್ದೀಕ್ ಕಪ್ಪನ್, ಲಿಖಿತ ಕೋರಿಕೆಯ ಮೇರೆಗೆ ಫೋನ್ ಮಾಡಿ ಮೂರು ಬಾರಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸಂವಹನ ನಡೆಸಿದ್ದರು ಎಂದು ಹೇಳಿದೆ.

“ಆರೋಪಿ ಸಿದ್ದೀಕ್ ಕಪ್ಪನ್ ಯಾವುದೇ ಸಂಬಂಧಿ ಅಥವಾ ಯಾವುದೇ ವಕೀಲರನ್ನು ಭೇಟಿಯಾಗಲು ಎಂದಿಗೂ ವಿನಂತಿಸಿಲ್ಲ ಅಥವಾ ಇಲ್ಲಿಯವರೆಗೆ ನ್ಯಾಯಾಲಯ / ಜೈಲು ಅಧಿಕಾರಿಗಳ ಮುಂದೆ ಅಂತಹ ಯಾವುದೇ ಅರ್ಜಿಯನ್ನು ಸಲ್ಲಿಸಿಲ್ಲ” ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...