Homeಮುಖಪುಟಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

ಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

- Advertisement -
- Advertisement -

ಆಕ್ಷೇಪಾರ್ಹ ಹೇಳಿಕೆ ನೀಡಿ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವ ಬಲಪಂಥೀಯ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಕಾರ್ಯಕ್ರಮಗಳ ಪ್ರಸಾರದ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 3) ತೆಗೆದು ಹಾಕಿದೆ.

ಅಲಹಾಬಾದಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾಧ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು “ಸಭ್ಯತೆ ಮತ್ತು ನೈತಿಕತೆಯೊಂದಿಗೆ, ಎಲ್ಲಾ ವಯೋಮಾನದವರಿಗೂ ಸೂಕ್ತವಾಗುವಂತಹ ವಿಷಯಗಳೊಂದಿಗೆ ‘ದಿ ರಣವೀರ್ ಶೋ’ ಪುನರಾರಂಭಿಸಲು ಅನುಮತಿ ನೀಡಿದೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ರಣವೀರ್ ಅಲಹಾಬಾದಿಯಾ ನೀಡಿದ್ದ ಅಶ್ಲೀಲ ಹೇಳಿಕೆಗಳ ವಿರುದ್ಧ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾಗ, ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸುಪ್ರೀಂಮ ಕೋರ್ಟ್ ಅಲಾಹಾಬಾದಿಯಾಗೆ ಷರತ್ತು ವಿಧಿಸಿತ್ತು.

ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವಿಷಯಗಳ ಕುರಿತು ಯಾವುದೇ ಹೇಳಿಕೆ ನೀಡದಂತೆ ಅಲಹಾಬಾದಿಯಾಗೆ ಕೋರ್ಟ್ ಷರತ್ತು ವಿಧಿಸಿದೆ. ವಿದೇಶದಲ್ಲಿ ನಡೆಸಲಾದ ಕಾರ್ಯಕ್ರಮವೊಂದರಲ್ಲಿ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವುದನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಆಕ್ಷೇಪಿಸಿದ್ದಾರೆ. ಅಲಹಾಬಾದಿಯಾ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದ ನ್ಯಾಯಾಲಯ, ಪ್ರಕರಣದ ತನಿಖೆಗೆ ಪ್ರಾರಂಭಗೊಂಡ ನಂತರವೇ ಅನುಮತಿ ನೀಡಬಹುದು ಎಂದಿದೆ.

‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದಾಖಲಾದ ಪ್ರಕರಣ ಸಂಬಂಧ ಅಲಹಾಬಾದಿಯಾ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಅವರ ಅಸಭ್ಯ ಹೇಳಿಕೆಗಾಗಿ ಅವರನ್ನು ಖಂಡಿಸಬೇಕು ಎಂದು ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ವಿಚಾರಣೆಯ ಸಮಯದಲ್ಲಿ, ಅಲಹಾಬಾದಿಯಾ ಅವರನ್ನು ಪ್ರತಿನಿಸಿದ್ದ ವಕೀಲ ಡಾ. ಅಭಿನವ್ ಚಂದ್ರಚೂಡ್, ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಮನವಿ ಮಾಡಿದ್ದಾರೆ. ಅಲಹಾಬಾದಿಯಾ ಅವರಿಗೆ ಹಲವಾರು ಜೀವ ಬೆದರಿಕೆಗಳು ಬಂದಿವೆ. ಮೊದಲು ಮಹಾರಾಷ್ಟ್ರ, ನಂತರ ಅಸ್ಸಾಂ ಮತ್ತು ಈಗ ಜೈಪುರದಲ್ಲಿ ಅವರ ವಿರುದ್ಧ ಬಹುಮಾನ ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಅಪರಾಧವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಳೆಯ ಸೆಕ್ಷನ್ 153-ಎ (ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಬರುತ್ತದೆ ಎಂದಿದ್ದಾರೆ.

ಈ ವೇಳೆ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಸೂರ್ಯ ಕಾಂತ್, “ಅಶ್ಲೀಲತೆ ಮತ್ತು ಅಸಭ್ಯತೆಯ ಮಾನದಂಡಗಳೇನು? ಈ ದೇಶದಲ್ಲಿ ಇದು ಅಶ್ಲೀಲತೆಯಲ್ಲದಿದ್ದರೆ ಮತ್ತಿನ್ನೇನು? ನೀವು ಬಳಸುತ್ತಿರುವ ಭಾಷೆಯನ್ನು ನೋಡಿ! ಎಲ್ಲಾ ರೀತಿಯ ಭಾಷೆಗಳನ್ನು ಮಾತನಾಡಲು ನಿಮಗೆ ಪರವಾನಗಿ ಇದೆಯೇ? ಇದು ಖಂಡನೀಯ ನಡವಳಿಕೆ. ಇದು ಕೇವಲ ವ್ಯಕ್ತಿಯ ನೈತಿಕತೆಯ ಪ್ರಶ್ನೆಯಲ್ಲ. ಅವರು ತನ್ನ ಹೆತ್ತವರನ್ನೂ ಅವಮಾನಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಈ ವ್ಯಕ್ತಿಯ ಮನಸ್ಸಿನಲ್ಲಿ ಏನೋ ಕೊಳಕು ಹರಡಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಅಸ್ಸಾಂ ಹಾಗೂ ಒಡಿಶಾ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ವಿವಾದಾತ್ಮಕ ಯುಟ್ಯೂಬ್ ಕಾರ್ಯಕ್ರಮ ‘ಇಂಡಿಯಾ ಗಾಟ್ ಲ್ಯಾಟೆಂಟ್‌’ ಅಸಭ್ಯ ಹಾಗೂ ವಿಕೃತವಾಗಿದೆ. ಹೀಗಾಗಿ ಕಾರ್ಯಕ್ರಮ ಪ್ರಸಾರಕ್ಕೆ ನೀಡಿರುವ ತಡೆಯನ್ನು ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಹಿಂಪಡೆಯಬಾರದು. ಕೆಲಕಾಲ ಅವರು ಸುಮ್ಮನಿರಲಿ’ ಎಂದು ಕೋರಿದ್ದಾರೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಅಲಹಾಬಾದಿಯಾ ನೀಡಿದ್ದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇವರ ಹೇಳಿಕೆ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಾಗಿದ್ದವು.

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...