Homeಮುಖಪುಟಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

ಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

- Advertisement -
- Advertisement -

ಆಕ್ಷೇಪಾರ್ಹ ಹೇಳಿಕೆ ನೀಡಿ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವ ಬಲಪಂಥೀಯ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಕಾರ್ಯಕ್ರಮಗಳ ಪ್ರಸಾರದ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 3) ತೆಗೆದು ಹಾಕಿದೆ.

ಅಲಹಾಬಾದಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾಧ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು “ಸಭ್ಯತೆ ಮತ್ತು ನೈತಿಕತೆಯೊಂದಿಗೆ, ಎಲ್ಲಾ ವಯೋಮಾನದವರಿಗೂ ಸೂಕ್ತವಾಗುವಂತಹ ವಿಷಯಗಳೊಂದಿಗೆ ‘ದಿ ರಣವೀರ್ ಶೋ’ ಪುನರಾರಂಭಿಸಲು ಅನುಮತಿ ನೀಡಿದೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ರಣವೀರ್ ಅಲಹಾಬಾದಿಯಾ ನೀಡಿದ್ದ ಅಶ್ಲೀಲ ಹೇಳಿಕೆಗಳ ವಿರುದ್ಧ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾಗ, ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸುಪ್ರೀಂಮ ಕೋರ್ಟ್ ಅಲಾಹಾಬಾದಿಯಾಗೆ ಷರತ್ತು ವಿಧಿಸಿತ್ತು.

ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವಿಷಯಗಳ ಕುರಿತು ಯಾವುದೇ ಹೇಳಿಕೆ ನೀಡದಂತೆ ಅಲಹಾಬಾದಿಯಾಗೆ ಕೋರ್ಟ್ ಷರತ್ತು ವಿಧಿಸಿದೆ. ವಿದೇಶದಲ್ಲಿ ನಡೆಸಲಾದ ಕಾರ್ಯಕ್ರಮವೊಂದರಲ್ಲಿ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವುದನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಆಕ್ಷೇಪಿಸಿದ್ದಾರೆ. ಅಲಹಾಬಾದಿಯಾ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದ ನ್ಯಾಯಾಲಯ, ಪ್ರಕರಣದ ತನಿಖೆಗೆ ಪ್ರಾರಂಭಗೊಂಡ ನಂತರವೇ ಅನುಮತಿ ನೀಡಬಹುದು ಎಂದಿದೆ.

‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದಾಖಲಾದ ಪ್ರಕರಣ ಸಂಬಂಧ ಅಲಹಾಬಾದಿಯಾ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಅವರ ಅಸಭ್ಯ ಹೇಳಿಕೆಗಾಗಿ ಅವರನ್ನು ಖಂಡಿಸಬೇಕು ಎಂದು ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ವಿಚಾರಣೆಯ ಸಮಯದಲ್ಲಿ, ಅಲಹಾಬಾದಿಯಾ ಅವರನ್ನು ಪ್ರತಿನಿಸಿದ್ದ ವಕೀಲ ಡಾ. ಅಭಿನವ್ ಚಂದ್ರಚೂಡ್, ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಮನವಿ ಮಾಡಿದ್ದಾರೆ. ಅಲಹಾಬಾದಿಯಾ ಅವರಿಗೆ ಹಲವಾರು ಜೀವ ಬೆದರಿಕೆಗಳು ಬಂದಿವೆ. ಮೊದಲು ಮಹಾರಾಷ್ಟ್ರ, ನಂತರ ಅಸ್ಸಾಂ ಮತ್ತು ಈಗ ಜೈಪುರದಲ್ಲಿ ಅವರ ವಿರುದ್ಧ ಬಹುಮಾನ ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಅಪರಾಧವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಳೆಯ ಸೆಕ್ಷನ್ 153-ಎ (ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಬರುತ್ತದೆ ಎಂದಿದ್ದಾರೆ.

ಈ ವೇಳೆ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಸೂರ್ಯ ಕಾಂತ್, “ಅಶ್ಲೀಲತೆ ಮತ್ತು ಅಸಭ್ಯತೆಯ ಮಾನದಂಡಗಳೇನು? ಈ ದೇಶದಲ್ಲಿ ಇದು ಅಶ್ಲೀಲತೆಯಲ್ಲದಿದ್ದರೆ ಮತ್ತಿನ್ನೇನು? ನೀವು ಬಳಸುತ್ತಿರುವ ಭಾಷೆಯನ್ನು ನೋಡಿ! ಎಲ್ಲಾ ರೀತಿಯ ಭಾಷೆಗಳನ್ನು ಮಾತನಾಡಲು ನಿಮಗೆ ಪರವಾನಗಿ ಇದೆಯೇ? ಇದು ಖಂಡನೀಯ ನಡವಳಿಕೆ. ಇದು ಕೇವಲ ವ್ಯಕ್ತಿಯ ನೈತಿಕತೆಯ ಪ್ರಶ್ನೆಯಲ್ಲ. ಅವರು ತನ್ನ ಹೆತ್ತವರನ್ನೂ ಅವಮಾನಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಈ ವ್ಯಕ್ತಿಯ ಮನಸ್ಸಿನಲ್ಲಿ ಏನೋ ಕೊಳಕು ಹರಡಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಅಸ್ಸಾಂ ಹಾಗೂ ಒಡಿಶಾ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ವಿವಾದಾತ್ಮಕ ಯುಟ್ಯೂಬ್ ಕಾರ್ಯಕ್ರಮ ‘ಇಂಡಿಯಾ ಗಾಟ್ ಲ್ಯಾಟೆಂಟ್‌’ ಅಸಭ್ಯ ಹಾಗೂ ವಿಕೃತವಾಗಿದೆ. ಹೀಗಾಗಿ ಕಾರ್ಯಕ್ರಮ ಪ್ರಸಾರಕ್ಕೆ ನೀಡಿರುವ ತಡೆಯನ್ನು ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಹಿಂಪಡೆಯಬಾರದು. ಕೆಲಕಾಲ ಅವರು ಸುಮ್ಮನಿರಲಿ’ ಎಂದು ಕೋರಿದ್ದಾರೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಅಲಹಾಬಾದಿಯಾ ನೀಡಿದ್ದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇವರ ಹೇಳಿಕೆ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಾಗಿದ್ದವು.

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...