Homeಮುಖಪುಟಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

ಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

- Advertisement -
- Advertisement -

ಆಕ್ಷೇಪಾರ್ಹ ಹೇಳಿಕೆ ನೀಡಿ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವ ಬಲಪಂಥೀಯ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಕಾರ್ಯಕ್ರಮಗಳ ಪ್ರಸಾರದ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 3) ತೆಗೆದು ಹಾಕಿದೆ.

ಅಲಹಾಬಾದಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾಧ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು “ಸಭ್ಯತೆ ಮತ್ತು ನೈತಿಕತೆಯೊಂದಿಗೆ, ಎಲ್ಲಾ ವಯೋಮಾನದವರಿಗೂ ಸೂಕ್ತವಾಗುವಂತಹ ವಿಷಯಗಳೊಂದಿಗೆ ‘ದಿ ರಣವೀರ್ ಶೋ’ ಪುನರಾರಂಭಿಸಲು ಅನುಮತಿ ನೀಡಿದೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ರಣವೀರ್ ಅಲಹಾಬಾದಿಯಾ ನೀಡಿದ್ದ ಅಶ್ಲೀಲ ಹೇಳಿಕೆಗಳ ವಿರುದ್ಧ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾಗ, ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸುಪ್ರೀಂಮ ಕೋರ್ಟ್ ಅಲಾಹಾಬಾದಿಯಾಗೆ ಷರತ್ತು ವಿಧಿಸಿತ್ತು.

ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವಿಷಯಗಳ ಕುರಿತು ಯಾವುದೇ ಹೇಳಿಕೆ ನೀಡದಂತೆ ಅಲಹಾಬಾದಿಯಾಗೆ ಕೋರ್ಟ್ ಷರತ್ತು ವಿಧಿಸಿದೆ. ವಿದೇಶದಲ್ಲಿ ನಡೆಸಲಾದ ಕಾರ್ಯಕ್ರಮವೊಂದರಲ್ಲಿ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವುದನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಆಕ್ಷೇಪಿಸಿದ್ದಾರೆ. ಅಲಹಾಬಾದಿಯಾ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದ ನ್ಯಾಯಾಲಯ, ಪ್ರಕರಣದ ತನಿಖೆಗೆ ಪ್ರಾರಂಭಗೊಂಡ ನಂತರವೇ ಅನುಮತಿ ನೀಡಬಹುದು ಎಂದಿದೆ.

‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದಾಖಲಾದ ಪ್ರಕರಣ ಸಂಬಂಧ ಅಲಹಾಬಾದಿಯಾ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಅವರ ಅಸಭ್ಯ ಹೇಳಿಕೆಗಾಗಿ ಅವರನ್ನು ಖಂಡಿಸಬೇಕು ಎಂದು ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ವಿಚಾರಣೆಯ ಸಮಯದಲ್ಲಿ, ಅಲಹಾಬಾದಿಯಾ ಅವರನ್ನು ಪ್ರತಿನಿಸಿದ್ದ ವಕೀಲ ಡಾ. ಅಭಿನವ್ ಚಂದ್ರಚೂಡ್, ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಮನವಿ ಮಾಡಿದ್ದಾರೆ. ಅಲಹಾಬಾದಿಯಾ ಅವರಿಗೆ ಹಲವಾರು ಜೀವ ಬೆದರಿಕೆಗಳು ಬಂದಿವೆ. ಮೊದಲು ಮಹಾರಾಷ್ಟ್ರ, ನಂತರ ಅಸ್ಸಾಂ ಮತ್ತು ಈಗ ಜೈಪುರದಲ್ಲಿ ಅವರ ವಿರುದ್ಧ ಬಹುಮಾನ ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಅಪರಾಧವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಳೆಯ ಸೆಕ್ಷನ್ 153-ಎ (ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಬರುತ್ತದೆ ಎಂದಿದ್ದಾರೆ.

ಈ ವೇಳೆ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಸೂರ್ಯ ಕಾಂತ್, “ಅಶ್ಲೀಲತೆ ಮತ್ತು ಅಸಭ್ಯತೆಯ ಮಾನದಂಡಗಳೇನು? ಈ ದೇಶದಲ್ಲಿ ಇದು ಅಶ್ಲೀಲತೆಯಲ್ಲದಿದ್ದರೆ ಮತ್ತಿನ್ನೇನು? ನೀವು ಬಳಸುತ್ತಿರುವ ಭಾಷೆಯನ್ನು ನೋಡಿ! ಎಲ್ಲಾ ರೀತಿಯ ಭಾಷೆಗಳನ್ನು ಮಾತನಾಡಲು ನಿಮಗೆ ಪರವಾನಗಿ ಇದೆಯೇ? ಇದು ಖಂಡನೀಯ ನಡವಳಿಕೆ. ಇದು ಕೇವಲ ವ್ಯಕ್ತಿಯ ನೈತಿಕತೆಯ ಪ್ರಶ್ನೆಯಲ್ಲ. ಅವರು ತನ್ನ ಹೆತ್ತವರನ್ನೂ ಅವಮಾನಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಈ ವ್ಯಕ್ತಿಯ ಮನಸ್ಸಿನಲ್ಲಿ ಏನೋ ಕೊಳಕು ಹರಡಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಅಸ್ಸಾಂ ಹಾಗೂ ಒಡಿಶಾ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ವಿವಾದಾತ್ಮಕ ಯುಟ್ಯೂಬ್ ಕಾರ್ಯಕ್ರಮ ‘ಇಂಡಿಯಾ ಗಾಟ್ ಲ್ಯಾಟೆಂಟ್‌’ ಅಸಭ್ಯ ಹಾಗೂ ವಿಕೃತವಾಗಿದೆ. ಹೀಗಾಗಿ ಕಾರ್ಯಕ್ರಮ ಪ್ರಸಾರಕ್ಕೆ ನೀಡಿರುವ ತಡೆಯನ್ನು ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಹಿಂಪಡೆಯಬಾರದು. ಕೆಲಕಾಲ ಅವರು ಸುಮ್ಮನಿರಲಿ’ ಎಂದು ಕೋರಿದ್ದಾರೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಅಲಹಾಬಾದಿಯಾ ನೀಡಿದ್ದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇವರ ಹೇಳಿಕೆ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಾಗಿದ್ದವು.

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....