Homeಮುಖಪುಟಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

ಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

- Advertisement -
- Advertisement -

ಆಕ್ಷೇಪಾರ್ಹ ಹೇಳಿಕೆ ನೀಡಿ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವ ಬಲಪಂಥೀಯ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಕಾರ್ಯಕ್ರಮಗಳ ಪ್ರಸಾರದ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 3) ತೆಗೆದು ಹಾಕಿದೆ.

ಅಲಹಾಬಾದಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾಧ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು “ಸಭ್ಯತೆ ಮತ್ತು ನೈತಿಕತೆಯೊಂದಿಗೆ, ಎಲ್ಲಾ ವಯೋಮಾನದವರಿಗೂ ಸೂಕ್ತವಾಗುವಂತಹ ವಿಷಯಗಳೊಂದಿಗೆ ‘ದಿ ರಣವೀರ್ ಶೋ’ ಪುನರಾರಂಭಿಸಲು ಅನುಮತಿ ನೀಡಿದೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ರಣವೀರ್ ಅಲಹಾಬಾದಿಯಾ ನೀಡಿದ್ದ ಅಶ್ಲೀಲ ಹೇಳಿಕೆಗಳ ವಿರುದ್ಧ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾಗ, ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸುಪ್ರೀಂಮ ಕೋರ್ಟ್ ಅಲಾಹಾಬಾದಿಯಾಗೆ ಷರತ್ತು ವಿಧಿಸಿತ್ತು.

ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವಿಷಯಗಳ ಕುರಿತು ಯಾವುದೇ ಹೇಳಿಕೆ ನೀಡದಂತೆ ಅಲಹಾಬಾದಿಯಾಗೆ ಕೋರ್ಟ್ ಷರತ್ತು ವಿಧಿಸಿದೆ. ವಿದೇಶದಲ್ಲಿ ನಡೆಸಲಾದ ಕಾರ್ಯಕ್ರಮವೊಂದರಲ್ಲಿ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವುದನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಆಕ್ಷೇಪಿಸಿದ್ದಾರೆ. ಅಲಹಾಬಾದಿಯಾ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದ ನ್ಯಾಯಾಲಯ, ಪ್ರಕರಣದ ತನಿಖೆಗೆ ಪ್ರಾರಂಭಗೊಂಡ ನಂತರವೇ ಅನುಮತಿ ನೀಡಬಹುದು ಎಂದಿದೆ.

‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದಾಖಲಾದ ಪ್ರಕರಣ ಸಂಬಂಧ ಅಲಹಾಬಾದಿಯಾ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಅವರ ಅಸಭ್ಯ ಹೇಳಿಕೆಗಾಗಿ ಅವರನ್ನು ಖಂಡಿಸಬೇಕು ಎಂದು ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ವಿಚಾರಣೆಯ ಸಮಯದಲ್ಲಿ, ಅಲಹಾಬಾದಿಯಾ ಅವರನ್ನು ಪ್ರತಿನಿಸಿದ್ದ ವಕೀಲ ಡಾ. ಅಭಿನವ್ ಚಂದ್ರಚೂಡ್, ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಮನವಿ ಮಾಡಿದ್ದಾರೆ. ಅಲಹಾಬಾದಿಯಾ ಅವರಿಗೆ ಹಲವಾರು ಜೀವ ಬೆದರಿಕೆಗಳು ಬಂದಿವೆ. ಮೊದಲು ಮಹಾರಾಷ್ಟ್ರ, ನಂತರ ಅಸ್ಸಾಂ ಮತ್ತು ಈಗ ಜೈಪುರದಲ್ಲಿ ಅವರ ವಿರುದ್ಧ ಬಹುಮಾನ ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಅಪರಾಧವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಳೆಯ ಸೆಕ್ಷನ್ 153-ಎ (ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಬರುತ್ತದೆ ಎಂದಿದ್ದಾರೆ.

ಈ ವೇಳೆ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಸೂರ್ಯ ಕಾಂತ್, “ಅಶ್ಲೀಲತೆ ಮತ್ತು ಅಸಭ್ಯತೆಯ ಮಾನದಂಡಗಳೇನು? ಈ ದೇಶದಲ್ಲಿ ಇದು ಅಶ್ಲೀಲತೆಯಲ್ಲದಿದ್ದರೆ ಮತ್ತಿನ್ನೇನು? ನೀವು ಬಳಸುತ್ತಿರುವ ಭಾಷೆಯನ್ನು ನೋಡಿ! ಎಲ್ಲಾ ರೀತಿಯ ಭಾಷೆಗಳನ್ನು ಮಾತನಾಡಲು ನಿಮಗೆ ಪರವಾನಗಿ ಇದೆಯೇ? ಇದು ಖಂಡನೀಯ ನಡವಳಿಕೆ. ಇದು ಕೇವಲ ವ್ಯಕ್ತಿಯ ನೈತಿಕತೆಯ ಪ್ರಶ್ನೆಯಲ್ಲ. ಅವರು ತನ್ನ ಹೆತ್ತವರನ್ನೂ ಅವಮಾನಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಈ ವ್ಯಕ್ತಿಯ ಮನಸ್ಸಿನಲ್ಲಿ ಏನೋ ಕೊಳಕು ಹರಡಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಅಸ್ಸಾಂ ಹಾಗೂ ಒಡಿಶಾ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ವಿವಾದಾತ್ಮಕ ಯುಟ್ಯೂಬ್ ಕಾರ್ಯಕ್ರಮ ‘ಇಂಡಿಯಾ ಗಾಟ್ ಲ್ಯಾಟೆಂಟ್‌’ ಅಸಭ್ಯ ಹಾಗೂ ವಿಕೃತವಾಗಿದೆ. ಹೀಗಾಗಿ ಕಾರ್ಯಕ್ರಮ ಪ್ರಸಾರಕ್ಕೆ ನೀಡಿರುವ ತಡೆಯನ್ನು ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಹಿಂಪಡೆಯಬಾರದು. ಕೆಲಕಾಲ ಅವರು ಸುಮ್ಮನಿರಲಿ’ ಎಂದು ಕೋರಿದ್ದಾರೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಅಲಹಾಬಾದಿಯಾ ನೀಡಿದ್ದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇವರ ಹೇಳಿಕೆ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಾಗಿದ್ದವು.

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...