Homeಮುಖಪುಟಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು 'ಅಹಂಕಾರಿ' ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಆದೇಶಗಳನ್ನು ಪಾಲಿಸದ ಉತ್ತರ ಪ್ರದೇಶದ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ‘ಅತ್ಯಂತ ಅಹಂಕಾರಿ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಬಂಧನಕ್ಕೆ ಅನುಮತಿ ನೀಡಿದೆ.

ಅಲಹಾಬಾದ್ ಹೈಕೋರ್ಟ್ ತನ್ನ ಆದೇಶಗಳ ಜಾರಿಗೆ ವಿಳಂಬ ಮಾಡುತ್ತಿದ್ದ ಉತ್ತರ ಪ್ರದೇಶದ ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದ ಸುಪ್ರಿಂ ಅಧಿಕಾರಿಗಳನ್ನು “ಅತ್ಯಂತ ದುರಹಂಕಾರಿ” ಎಂದು ಬಣ್ಣಿಸಿದೆ.

ಸರ್ಕಾರಿ ಅಧಿಕಾರಿಗಳು 2017 ರಲ್ಲಿ “ಕಲೆಕ್ಷನ್ ಅಮೀನ್” ಗೆ ಸೇವೆಯನ್ನು ಕ್ರಮಬದ್ಧಗೊಳಿಸುವುದು ಮತ್ತು ಬಾಕಿ ಪಾವತಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿದ್ದರು. ನವೆಂಬರ್ 1 ರಂದು ಹೈಕೋರ್ಟ್ ಪ್ರಕರಣವನ್ನು ಆಲಿಸಿ ‘ಅಧಿಕಾರಿಗಳು ನ್ಯಾಯಾಲಯವನ್ನು “ಆಟದ ಮೈದಾನ” ಎಂದು ಪರಿಗಣಿಸುತ್ತಿದ್ದಾರೆ ಮತ್ತು ಈ ಹಿಂದೆ ಸೇವೆಯನ್ನು ಕಾಯಂಗೊಳಿಸುವ ಹಕ್ಕು ನಿರಾಕರಿಸಿದ ವ್ಯಕ್ತಿಗೆ ಬಾಕಿ ವೇತನ ನೀಡಲು ನಿರಾಕರಿಸಿದ್ದಾರೆ’ ಎಂದು ಕಿಡಿಕಾರಿತ್ತು.

“ಪ್ರತಿವಾದಿಗಳು (ಅಧಿಕಾರಿಗಳು) ಉದ್ದೇಶಪೂರ್ವಕವಾಗಿ ಉನ್ನತ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದ್ದಾರೆ ಮತ್ತು ಅರ್ಜಿದಾರರಿಗೆ ಬಾಕಿ ವೇತನವನ್ನು ನೀಡದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀಡಿದ ಭರವಸೆಯನ್ನು ಉಲ್ಲಂಘಿಸಿದ್ದಾರೆ. ಈ ನ್ಯಾಯಾಲಯವು ಪ್ರತಿವಾದಿಗಳ ಖಂಡನೀಯ ನಡವಳಿಕೆಯ ಬಗ್ಗೆ ದುಃಖ ಮತ್ತು ವೇದನೆಯನ್ನು ದಾಖಲಿಸುತ್ತದೆ. ಅದರಂತೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮತ್ತು ಪ್ರಸ್ತುತ ಯುಪಿ ಸರ್ಕಾರದ ಕಾರ್ಯದರ್ಶಿ (ಹಣಕಾಸು), ಲಕ್ನೋಗೆ ನಿಯೋಜಿಸಲಾದ ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸುವುದು ಸೂಕ್ತ ಪ್ರಕರಣ ಎಂದು ನಂಬುತ್ತದೆ. ನವೆಂಬರ್ 15 ರಂದು ಈ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ಮಾಡಿಕೊಟ್ಟು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರೆಂಟ್ ಹೊರಡಿಸುತ್ತದೆ’’ ಎಂದು ಹೈಕೋರ್ಟ್ ಆದೇಶಿಸಿತ್ತು.

ನಂತರ ಬಂಧನದಿಂದ ಪಾರಾಗಲು ಯುಪಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಅರ್ಜಿ ವಜಾಗೊಳಿಸಿ ಛೀಮಾರಿ ಹಾಕಿದೆ. “ನಿಮಗೆ ಹೆಚ್ಚಿನ ಶಿಕ್ಷೆಯ ಅಗತ್ಯವಿದೆ. ನಿಮ್ಮ ನಡವಳಿಕೆಯನ್ನು ನೋಡಿ, ನೀವು ಆದೇಶಗಳನ್ನು ಪಾಲಿಸಲು ಏನನ್ನೂ ಮಾಡಿಲ್ಲ. ಹೈಕೋರ್ಟ್ ನಿಮ್ಮ ಬಗ್ಗೆ ತುಂಬಾ ಕರುಣೆ ತೋರಿದೆ… ಆದರೆ ನಿಮಗೆ ನ್ಯಾಯಾಲಯದ ಬಗ್ಗೆ ಗೌರವವಿಲ್ಲ. ಈ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಂಬಾ ದುರಹಂಕಾರಿ ಎಂದು ತೋರುತ್ತಿದೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಕಿಡಿಕಾರಿದೆ.

ನೀವು ಏನೇ ವಾದ ಮಾಡುವುದಿದ್ದರೂ ಅವರನ್ನು ಬಂಧಿಸಿ ಇಲ್ಲಿಗೆ ಕರೆತನ್ನಿ ಎಂದು ಪೀಠವು ಉತ್ತರ ಪ್ರದೇಶ ಸರ್ಕಾರದ ಪರ ವಾದಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿರವರಿಗೆ ಸೂಚಿಸಿತು.


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...