Homeಮುಖಪುಟಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

- Advertisement -
- Advertisement -

ಅತ್ಯಾಚಾರದ ಆರೋಪದ ಬಂಧನದಿಂದ ತಪ್ಪಿಸಿಕೊಳ್ಳಲು ರಕ್ಷಣೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸರ್ಕಾರಿ ನೌಕರನನ್ನು ಅತ್ಯಾಚಾರದ ಆರೋಪ ಹೊರಿಸಿರುವ ಮಹಿಳೆಯನ್ನು ಮದುವೆಯಾಗಲು ಸುಪ್ರೀಂಕೋರ್ಟ್ ಕೇಳಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಇಂತಹ ಪ್ರಶ್ನೆ ಕೇಳಿದೆ. ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು,  ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

“ನೀವು ಬಾಲಕಿಯನ್ನು ಮದುವೆಯಾಗಲು ಬಯಸಿದರೆ ನಾವು ನಿಮಗೆ ಸಹಾಯ ಮಾಡಬಹುದು. ಇಲ್ಲದಿದ್ದರೆ, ನೀವು ನಿಮ್ಮ ಕೆಲಸವನ್ನು ಕಳೆದುಕೊಂಡು ಜೈಲಿಗೆ ಹೋಗುತ್ತೀರಿ. ನೀವು ಹುಡುಗಿಯನ್ನು ಮೋಹಿಸಿದ್ದೀರಿ, ಅವಳ ಮೇಲೆ ಅತ್ಯಾಚಾರ ಮಾಡಿದ್ದೀರಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅರ್ಜಿದಾರರ ವಕೀಲರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಅತ್ಯಾಚಾರದ ದೂರು ದಾಖಲಿಸಲು ಬಾಲಕಿ ಪೊಲೀಸ್ ಠಾಣೆಗೆ ಹೋದಾಗಲೂ ಸಹ ಆರೋಪಿಯ ತಾಯಿ ಮದುವೆಯ ಪ್ರಸ್ತಾಪ ಇಟ್ಟಿದ್ದರು. ಆಗ ಆಕೆ ನಿರಾಕರಿಸಿದ್ದಳು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಂತರ ಠಾಣೆಯಲ್ಲಿ, ಬಾಲಕಿಗೆ 18 ವರ್ಷ ತುಂಬಿದ ನಂತರ ಮದುವೆ ನಡೆಯುತ್ತದೆ ಎಂದು ಒಂದು ದಾಖಲೆಯನ್ನು ರಚಿಸಲಾಗಿತ್ತು. ಈಗ ಅತ್ಯಾಚಾರ ನಡೆಸಿದ್ದ ವ್ಯಕ್ತಿ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ  ಆತನ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ ಎಂದು ಆರೋಪಿ ಚೌವಾಣ್ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿದೆ.

ವರದಿಗಳ ಪ್ರಕಾರ, ಮುಖ್ಯ ನ್ಯಾಯಾಧೀಶರು ಆರೋಪಿಗೆ “ನೀವು ಆಕೆಯನ್ನು ಮದುವೆಯಾಗುತ್ತೀರಾ?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ “ಬಾಲಕಿ ಮೇಲೆ ದೌರ್ಜನ್ಯ ನಡೆಸುವ ಮತ್ತು ಅತ್ಯಾಚಾರ ಮಾಡುವ ಮೊದಲು ನೀವು ಸರ್ಕಾರಿ ನೌಕರ ಎಂಬುದು ನಿಮಗೆ ತಿಳಿದಿರಬೇಕಿತ್ತು” ಎಂದಿದ್ದಾರೆ.

ಮುಂದುವರೆದು, “ನಾವು ನಿಮ್ಮನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿಲ್ಲ. ನೀವು ಮದುವೆಯಾಗಲು ಬಯಸಿದರೆ ನಮಗೆ ತಿಳಿಸಿ. ಇಲ್ಲದಿದ್ದರೆ ಆಕೆಯನ್ನು ಮದುವೆಯಾಗುವಂತೆ ನಾವು ಒತ್ತಾಯಿಸುತ್ತಿದ್ದೇವೆ ಎಂದು ನೀವು ಹೇಳುತ್ತೀರಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು ಅರ್ಜಿದಾರರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 4 ಜನರಿಂದ 20 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ

ನಂತರ ಅರ್ಜಿದಾರ ಸುಪ್ರೀಂ ಕೋರ್ಟ್ ನ್ಯಾಯಾದೀಶರ ಮುಂದೆ “ಆರಂಭದಲ್ಲಿ ನಾನು ಅವಳನ್ನು ಮದುವೆಯಾಗಲು ಬಯಸಿದ್ದೆ, ಆದರೆ ಆಕೆ ನಿರಾಕರಿಸಿದಳು, ನಾನು ಈಗಾಗಲೇ ಮದುವೆಯಾಗಿರುವುದರಿಂದ ಈಗ ನನಗೆ ಮದುವೆಯಾಗಲು ಸಾಧ್ಯವಿಲ್ಲ” ಎಂದಿದ್ದಾರೆ. ಜೊತೆಗೆ ವಿಚಾರಣೆ ಇನ್ನು ನಡೆಯುತ್ತಿದೆ ಮತ್ತು ಆರೋಪ ಪಟ್ಟಿಯನ್ನು ಇನ್ನೂ ರೂಪಿಸಲಾಗಿಲ್ಲ ಎಂದಿದ್ದಾರೆ.

“ನಾನು ಸರ್ಕಾರಿ ನೌಕರ, ನನ್ನನ್ನು ಬಂಧಿಸಿದರೆ ನನ್ನನ್ನು ಕೆಲಸದಿಂದ ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ಆರೋಪಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಬೊಬ್ಡೆ, “ಅದಕ್ಕಾಗಿಯೇ ನಾವು ನಿಮಗೆ ಈ ಯೋಜನೆ ನೀಡಿದ್ದೇವೆ. ನಾವು ನಾಲ್ಕು ವಾರಗಳ ಕಾಲ ಬಂಧನವನ್ನು ತಡೆ ಹಿಡಿಯುತ್ತೇವೆ. ನಂತರ ನೀವು ನಿಯಮಿತ ಜಾಮೀನುಗಾಗಿ ಅರ್ಜಿ ಸಲ್ಲಿಸಿ” ಎಂದಿದೆ.

ವಿಚಾರಣಾ ನ್ಯಾಯಾಲಯವು ಆರೋಪಿಗೆ ಬಂಧನದಿಂದ ರಕ್ಷಣೆ ನೀಡಿತ್ತು. ಆದರೆ ಹೈಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಸದ್ಯ ಆರೋಪಿಗೆ ನಾಲ್ಕು ವಾರಗಳವರೆಗೆ ಬಂಧನದಿಂದ ರಕ್ಷಣೆ ನೀಡಿಲಾಗಿದ್ದು, ನಂತರ ನಿಯಮಿತ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇದನ್ನೂ ಓದಿ:  ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...