Homeಮುಖಪುಟಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

- Advertisement -
- Advertisement -

ಅತ್ಯಾಚಾರದ ಆರೋಪದ ಬಂಧನದಿಂದ ತಪ್ಪಿಸಿಕೊಳ್ಳಲು ರಕ್ಷಣೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸರ್ಕಾರಿ ನೌಕರನನ್ನು ಅತ್ಯಾಚಾರದ ಆರೋಪ ಹೊರಿಸಿರುವ ಮಹಿಳೆಯನ್ನು ಮದುವೆಯಾಗಲು ಸುಪ್ರೀಂಕೋರ್ಟ್ ಕೇಳಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಇಂತಹ ಪ್ರಶ್ನೆ ಕೇಳಿದೆ. ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು,  ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

“ನೀವು ಬಾಲಕಿಯನ್ನು ಮದುವೆಯಾಗಲು ಬಯಸಿದರೆ ನಾವು ನಿಮಗೆ ಸಹಾಯ ಮಾಡಬಹುದು. ಇಲ್ಲದಿದ್ದರೆ, ನೀವು ನಿಮ್ಮ ಕೆಲಸವನ್ನು ಕಳೆದುಕೊಂಡು ಜೈಲಿಗೆ ಹೋಗುತ್ತೀರಿ. ನೀವು ಹುಡುಗಿಯನ್ನು ಮೋಹಿಸಿದ್ದೀರಿ, ಅವಳ ಮೇಲೆ ಅತ್ಯಾಚಾರ ಮಾಡಿದ್ದೀರಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅರ್ಜಿದಾರರ ವಕೀಲರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಅತ್ಯಾಚಾರದ ದೂರು ದಾಖಲಿಸಲು ಬಾಲಕಿ ಪೊಲೀಸ್ ಠಾಣೆಗೆ ಹೋದಾಗಲೂ ಸಹ ಆರೋಪಿಯ ತಾಯಿ ಮದುವೆಯ ಪ್ರಸ್ತಾಪ ಇಟ್ಟಿದ್ದರು. ಆಗ ಆಕೆ ನಿರಾಕರಿಸಿದ್ದಳು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಂತರ ಠಾಣೆಯಲ್ಲಿ, ಬಾಲಕಿಗೆ 18 ವರ್ಷ ತುಂಬಿದ ನಂತರ ಮದುವೆ ನಡೆಯುತ್ತದೆ ಎಂದು ಒಂದು ದಾಖಲೆಯನ್ನು ರಚಿಸಲಾಗಿತ್ತು. ಈಗ ಅತ್ಯಾಚಾರ ನಡೆಸಿದ್ದ ವ್ಯಕ್ತಿ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ  ಆತನ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ ಎಂದು ಆರೋಪಿ ಚೌವಾಣ್ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿದೆ.

ವರದಿಗಳ ಪ್ರಕಾರ, ಮುಖ್ಯ ನ್ಯಾಯಾಧೀಶರು ಆರೋಪಿಗೆ “ನೀವು ಆಕೆಯನ್ನು ಮದುವೆಯಾಗುತ್ತೀರಾ?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ “ಬಾಲಕಿ ಮೇಲೆ ದೌರ್ಜನ್ಯ ನಡೆಸುವ ಮತ್ತು ಅತ್ಯಾಚಾರ ಮಾಡುವ ಮೊದಲು ನೀವು ಸರ್ಕಾರಿ ನೌಕರ ಎಂಬುದು ನಿಮಗೆ ತಿಳಿದಿರಬೇಕಿತ್ತು” ಎಂದಿದ್ದಾರೆ.

ಮುಂದುವರೆದು, “ನಾವು ನಿಮ್ಮನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿಲ್ಲ. ನೀವು ಮದುವೆಯಾಗಲು ಬಯಸಿದರೆ ನಮಗೆ ತಿಳಿಸಿ. ಇಲ್ಲದಿದ್ದರೆ ಆಕೆಯನ್ನು ಮದುವೆಯಾಗುವಂತೆ ನಾವು ಒತ್ತಾಯಿಸುತ್ತಿದ್ದೇವೆ ಎಂದು ನೀವು ಹೇಳುತ್ತೀರಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು ಅರ್ಜಿದಾರರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 4 ಜನರಿಂದ 20 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ

ನಂತರ ಅರ್ಜಿದಾರ ಸುಪ್ರೀಂ ಕೋರ್ಟ್ ನ್ಯಾಯಾದೀಶರ ಮುಂದೆ “ಆರಂಭದಲ್ಲಿ ನಾನು ಅವಳನ್ನು ಮದುವೆಯಾಗಲು ಬಯಸಿದ್ದೆ, ಆದರೆ ಆಕೆ ನಿರಾಕರಿಸಿದಳು, ನಾನು ಈಗಾಗಲೇ ಮದುವೆಯಾಗಿರುವುದರಿಂದ ಈಗ ನನಗೆ ಮದುವೆಯಾಗಲು ಸಾಧ್ಯವಿಲ್ಲ” ಎಂದಿದ್ದಾರೆ. ಜೊತೆಗೆ ವಿಚಾರಣೆ ಇನ್ನು ನಡೆಯುತ್ತಿದೆ ಮತ್ತು ಆರೋಪ ಪಟ್ಟಿಯನ್ನು ಇನ್ನೂ ರೂಪಿಸಲಾಗಿಲ್ಲ ಎಂದಿದ್ದಾರೆ.

“ನಾನು ಸರ್ಕಾರಿ ನೌಕರ, ನನ್ನನ್ನು ಬಂಧಿಸಿದರೆ ನನ್ನನ್ನು ಕೆಲಸದಿಂದ ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ಆರೋಪಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಬೊಬ್ಡೆ, “ಅದಕ್ಕಾಗಿಯೇ ನಾವು ನಿಮಗೆ ಈ ಯೋಜನೆ ನೀಡಿದ್ದೇವೆ. ನಾವು ನಾಲ್ಕು ವಾರಗಳ ಕಾಲ ಬಂಧನವನ್ನು ತಡೆ ಹಿಡಿಯುತ್ತೇವೆ. ನಂತರ ನೀವು ನಿಯಮಿತ ಜಾಮೀನುಗಾಗಿ ಅರ್ಜಿ ಸಲ್ಲಿಸಿ” ಎಂದಿದೆ.

ವಿಚಾರಣಾ ನ್ಯಾಯಾಲಯವು ಆರೋಪಿಗೆ ಬಂಧನದಿಂದ ರಕ್ಷಣೆ ನೀಡಿತ್ತು. ಆದರೆ ಹೈಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಸದ್ಯ ಆರೋಪಿಗೆ ನಾಲ್ಕು ವಾರಗಳವರೆಗೆ ಬಂಧನದಿಂದ ರಕ್ಷಣೆ ನೀಡಿಲಾಗಿದ್ದು, ನಂತರ ನಿಯಮಿತ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇದನ್ನೂ ಓದಿ:  ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...