Homeಮುಖಪುಟಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

- Advertisement -
- Advertisement -

ಅತ್ಯಾಚಾರದ ಆರೋಪದ ಬಂಧನದಿಂದ ತಪ್ಪಿಸಿಕೊಳ್ಳಲು ರಕ್ಷಣೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸರ್ಕಾರಿ ನೌಕರನನ್ನು ಅತ್ಯಾಚಾರದ ಆರೋಪ ಹೊರಿಸಿರುವ ಮಹಿಳೆಯನ್ನು ಮದುವೆಯಾಗಲು ಸುಪ್ರೀಂಕೋರ್ಟ್ ಕೇಳಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಇಂತಹ ಪ್ರಶ್ನೆ ಕೇಳಿದೆ. ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು,  ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

“ನೀವು ಬಾಲಕಿಯನ್ನು ಮದುವೆಯಾಗಲು ಬಯಸಿದರೆ ನಾವು ನಿಮಗೆ ಸಹಾಯ ಮಾಡಬಹುದು. ಇಲ್ಲದಿದ್ದರೆ, ನೀವು ನಿಮ್ಮ ಕೆಲಸವನ್ನು ಕಳೆದುಕೊಂಡು ಜೈಲಿಗೆ ಹೋಗುತ್ತೀರಿ. ನೀವು ಹುಡುಗಿಯನ್ನು ಮೋಹಿಸಿದ್ದೀರಿ, ಅವಳ ಮೇಲೆ ಅತ್ಯಾಚಾರ ಮಾಡಿದ್ದೀರಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅರ್ಜಿದಾರರ ವಕೀಲರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಅತ್ಯಾಚಾರದ ದೂರು ದಾಖಲಿಸಲು ಬಾಲಕಿ ಪೊಲೀಸ್ ಠಾಣೆಗೆ ಹೋದಾಗಲೂ ಸಹ ಆರೋಪಿಯ ತಾಯಿ ಮದುವೆಯ ಪ್ರಸ್ತಾಪ ಇಟ್ಟಿದ್ದರು. ಆಗ ಆಕೆ ನಿರಾಕರಿಸಿದ್ದಳು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಂತರ ಠಾಣೆಯಲ್ಲಿ, ಬಾಲಕಿಗೆ 18 ವರ್ಷ ತುಂಬಿದ ನಂತರ ಮದುವೆ ನಡೆಯುತ್ತದೆ ಎಂದು ಒಂದು ದಾಖಲೆಯನ್ನು ರಚಿಸಲಾಗಿತ್ತು. ಈಗ ಅತ್ಯಾಚಾರ ನಡೆಸಿದ್ದ ವ್ಯಕ್ತಿ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ  ಆತನ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ ಎಂದು ಆರೋಪಿ ಚೌವಾಣ್ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿದೆ.

ವರದಿಗಳ ಪ್ರಕಾರ, ಮುಖ್ಯ ನ್ಯಾಯಾಧೀಶರು ಆರೋಪಿಗೆ “ನೀವು ಆಕೆಯನ್ನು ಮದುವೆಯಾಗುತ್ತೀರಾ?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ “ಬಾಲಕಿ ಮೇಲೆ ದೌರ್ಜನ್ಯ ನಡೆಸುವ ಮತ್ತು ಅತ್ಯಾಚಾರ ಮಾಡುವ ಮೊದಲು ನೀವು ಸರ್ಕಾರಿ ನೌಕರ ಎಂಬುದು ನಿಮಗೆ ತಿಳಿದಿರಬೇಕಿತ್ತು” ಎಂದಿದ್ದಾರೆ.

ಮುಂದುವರೆದು, “ನಾವು ನಿಮ್ಮನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿಲ್ಲ. ನೀವು ಮದುವೆಯಾಗಲು ಬಯಸಿದರೆ ನಮಗೆ ತಿಳಿಸಿ. ಇಲ್ಲದಿದ್ದರೆ ಆಕೆಯನ್ನು ಮದುವೆಯಾಗುವಂತೆ ನಾವು ಒತ್ತಾಯಿಸುತ್ತಿದ್ದೇವೆ ಎಂದು ನೀವು ಹೇಳುತ್ತೀರಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು ಅರ್ಜಿದಾರರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 4 ಜನರಿಂದ 20 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ

ನಂತರ ಅರ್ಜಿದಾರ ಸುಪ್ರೀಂ ಕೋರ್ಟ್ ನ್ಯಾಯಾದೀಶರ ಮುಂದೆ “ಆರಂಭದಲ್ಲಿ ನಾನು ಅವಳನ್ನು ಮದುವೆಯಾಗಲು ಬಯಸಿದ್ದೆ, ಆದರೆ ಆಕೆ ನಿರಾಕರಿಸಿದಳು, ನಾನು ಈಗಾಗಲೇ ಮದುವೆಯಾಗಿರುವುದರಿಂದ ಈಗ ನನಗೆ ಮದುವೆಯಾಗಲು ಸಾಧ್ಯವಿಲ್ಲ” ಎಂದಿದ್ದಾರೆ. ಜೊತೆಗೆ ವಿಚಾರಣೆ ಇನ್ನು ನಡೆಯುತ್ತಿದೆ ಮತ್ತು ಆರೋಪ ಪಟ್ಟಿಯನ್ನು ಇನ್ನೂ ರೂಪಿಸಲಾಗಿಲ್ಲ ಎಂದಿದ್ದಾರೆ.

“ನಾನು ಸರ್ಕಾರಿ ನೌಕರ, ನನ್ನನ್ನು ಬಂಧಿಸಿದರೆ ನನ್ನನ್ನು ಕೆಲಸದಿಂದ ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ಆರೋಪಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಬೊಬ್ಡೆ, “ಅದಕ್ಕಾಗಿಯೇ ನಾವು ನಿಮಗೆ ಈ ಯೋಜನೆ ನೀಡಿದ್ದೇವೆ. ನಾವು ನಾಲ್ಕು ವಾರಗಳ ಕಾಲ ಬಂಧನವನ್ನು ತಡೆ ಹಿಡಿಯುತ್ತೇವೆ. ನಂತರ ನೀವು ನಿಯಮಿತ ಜಾಮೀನುಗಾಗಿ ಅರ್ಜಿ ಸಲ್ಲಿಸಿ” ಎಂದಿದೆ.

ವಿಚಾರಣಾ ನ್ಯಾಯಾಲಯವು ಆರೋಪಿಗೆ ಬಂಧನದಿಂದ ರಕ್ಷಣೆ ನೀಡಿತ್ತು. ಆದರೆ ಹೈಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಸದ್ಯ ಆರೋಪಿಗೆ ನಾಲ್ಕು ವಾರಗಳವರೆಗೆ ಬಂಧನದಿಂದ ರಕ್ಷಣೆ ನೀಡಿಲಾಗಿದ್ದು, ನಂತರ ನಿಯಮಿತ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇದನ್ನೂ ಓದಿ:  ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...