Homeಮುಖಪುಟಚುನಾವಣಾ ಪೂರ್ವ 'ಉಚಿತ ಭರವಸೆ' ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ...

ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ಚುನಾವಣಾ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ‘ಉಚಿತ ಭರವಸೆ’ಗಳನ್ನು ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಸಾಮಾಜ ಕಲ್ಯಾಣ ಯೋಜನೆಗಳಾದ ಉಚಿತ ಸಾರ್ವಜನಿಕ ಸಾರಿಗೆ ಮತ್ತು ವಿದ್ಯುತ್ ಬಿಲ್‌ಗಳಲ್ಲಿನ ರಿಯಾಯಿತಿ ಸೇರಿದಂತೆ ಕೆಲ ಯೋಜನೆಗಳನ್ನು ‘ಉಚಿತ ಭರವಸೆ’ ಎಂದು ಉಲ್ಲೇಖಿಸಲಾಗಿದೆ.

ಬೆಂಗಳೂರಿನ ನಿವಾಸಿ ಶಶಾಂಕ್ ಜೆ ಶ್ರೀಧರ ಅವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

“ಉಚಿತ ಕೊಡುಗೆಗಳ ಅನಿಯಂತ್ರಿತ ಭರವಸೆಯು ಸಾರ್ವಜನಿಕ ಖಜಾನೆಯ ಮೇಲೆ ಊಹಿಸಲಾಗದ ಆರ್ಥಿಕ ಹೊರೆಯನ್ನು ಹೇರುತ್ತದೆ. ಅಲ್ಲದೆ, ಮತಗಳನ್ನು ಭದ್ರಪಡಿಸಿದ ಚುನಾವಣಾ ಪೂರ್ವ ಭರವಸೆಗಳ ಈಡೇರಿಕೆಯನ್ನು ಖಚಿತಪಡಿಸಿಕೊಳ್ಳಲು ಯಾವುದೇ ಕಾರ್ಯವಿಧಾನವಿಲ್ಲ” ಎಂದು ಅರ್ಜಿಯಲ್ಲಿ ಹೇಳಿರುವುದಾಗಿ ಪಿಟಿಐ ತಿಳಿಸಿದೆ.

ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳು ಉಚಿತ ಭರವಸೆ ನೀಡುವುದನ್ನು ತಡೆಯಲು ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಜೊತೆ ಇದನ್ನೂ ನ್ಯಾಯಾಲಯ ಸೇರಿಸಿದೆ.

ಆಗಸ್ಟ್ 2022ರಲ್ಲಿ, ನ್ಯಾಯಾಲಯವು ರಾಜಕೀಯ ಪಕ್ಷಗಳ ಉಚಿತ ಭರವಸೆಗಳ ಮೇಲಿನ ನಿರ್ಬಂಧಗಳನ್ನು ಕೋರಿದ್ದ ಮತ್ತೊಂದು ಅರ್ಜಿಯನ್ನು ತ್ರಿಸದಸ್ಯ ಪೀಠಕ್ಕೆ ಉಲ್ಲೇಖಿಸಿತ್ತು.

ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ, ನೀತಿ ಆಯೋಗ, ಹಣಕಾಸು ಆಯೋಗ, ಕಾನೂನು ಆಯೋಗ, ಚುನಾವಣಾ ಆಯೋಗ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಪ್ರತಿಪಕ್ಷಗಳ ಸದಸ್ಯರನ್ನೊಳಗೊಂಡ ಪರಿಣಿತರ ಸಮಿತಿ ರಚಿಸಿ ಈ ವಿಷಯದ ಕುರಿತು ಸಲಹೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಆ ಸಮಯದಲ್ಲಿ, ರಾಜಕೀಯ ಪಕ್ಷಗಳು ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ಆರ್ಥಿಕತೆಗೆ ಹಾನಿಯಾಗುತ್ತದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು.

ಆಗ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌ವಿ ರಮಣ ಅವರು, ಉಚಿತಗಳ ಹೆಸರಿನಲ್ಲಿ ಆರ್ಥಿಕತೆಯನ್ನು ಶುಷ್ಕಗೊಳಿಸಬಾರದು ಎಂದು ಹೇಳಿದ್ದರು. ಸಾಮಾನ್ಯ ನಾಗರಿಕರ ಅಭಿಪ್ರಾಯ ತಿಳಿಯಲು ಸಂಸತ್ ಸಮಿತಿ ರಚಿಸಬೇಕು ಎಂದಿದ್ದರು.

ಇದನ್ನೂ ಓದಿ : ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...