Homeಮುಖಪುಟ'ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?': ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

‘ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?’: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, “ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?” ಎಂದು ಸುಪ್ರೀಂ ಕೋರ್ಟ್ ಬುಧವಾರ (ಏ.16) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ ಎಂದು ವರದಿಗಳು ಹೇಳಿವೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠವು, ‘ಬಳಕೆದಾರರಿಂದ ವಕ್ಫ್’ (Waqf by User) ಅನ್ನು ನಿರಾಕರಿಸಲು ಹೇಗೆ ಸಾಧ್ಯ? ಏಕೆಂದರೆ, ಅನೇಕರು ವಕ್ಫ್‌ ಆಸ್ತಿಗಳನ್ನು ನೋಂದಾಯಿಸಲು ಅಗತ್ಯವಾದ ದಾಖಲೆಗಳನ್ನು ಹೊಂದಿರುವುದಿಲ್ಲ ಎಂದು ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

‘ಬಳಕೆದಾರರಿಂದ ವಕ್ಫ್’ (Waqf By User) ಎಂದರೆ, ಆಸ್ತಿ ಮಾಲೀಕರು ತಮ್ಮ ಆಸ್ತಿಯನ್ನು ವಕ್ಫ್ ಮಾಡಿರುವ ಬಗ್ಗೆ ಔಪಚಾರಿಕ, ಲಿಖಿತ ದಾಖಲೆಗಳು ಇಲ್ಲದಿದ್ದರೂ ಕೂಡ, ಯಾವುದೇ ಅಡೆತಡೆಯಿಲ್ಲದೆ ದೀರ್ಘ ಸಮಯದಿಂದ ಧಾರ್ಮಿಕ, ಸಾಮುದಾಯಿಕ ಉದ್ದೇಶಗಳಿಗೆ ಬಳಸುತ್ತಿರುವ ಆಧಾರದ ಮೇಲೆ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ದತ್ತಿ (ವಕ್ಫ್) ಎಂದು ಗುರುತಿಸಿಕೊಂಡು ಬರಲಾಗುತ್ತಿದೆ.

“ನೀವು ಇಂತಹ ವಕ್ಫ್‌ ಆಸ್ತಿಗಳನ್ನು ಬಳಕೆದಾರರಿಂದ ಹೇಗೆ ನೋಂದಾಯಿಸುತ್ತೀರಿ? ಅವರ ಬಳಿ ಯಾವ ದಾಖಲೆಗಳಿವೆ? ಹೌದು, ಕೆಲವು ದುರುಪಯೋಗಳು ನಡೆಯುತ್ತಿವೆ. ಆದರೆ, ನಿಜವಾದವುಗಳೂ ಇವೆ. ನಾನು ಖಾಸಗಿ ಮಂಡಳಿಯ ತೀರ್ಪುಗಳನ್ನು ಕೂಡ ನೋಡಿದ್ದೇನೆ. ಬಳಕೆದಾರರಿಂದ ವಕ್ಫ್ ಅನ್ನು ಗುರುತಿಸಲಾಗಿದೆ. ನೀವು ಅದನ್ನು ರದ್ದುಗೊಳಿಸಿದರೆ ಸಮಸ್ಯೆಯಾಗುತ್ತದೆ. ಶಾಸಕಾಂಗವು ಆದೇಶ ಅಥವಾ ತೀರ್ಪನ್ನು ಅನೂರ್ಜಿತವೆಂದು ಘೋಷಿಸಲು ಸಾಧ್ಯವಿಲ್ಲ. ನೀವು ಆಧಾರವನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಪೀಠ ಹೇಳಿದೆ.

ಈ ವೇಳೆ, ವಕ್ಫ್ ಕಾಯ್ದೆಯಿಂದ ನಿಯಂತ್ರಿಸಲ್ಪಡಲು ಇಷ್ಟಪಡದ ಮುಸ್ಲಿಮರ ದೊಡ್ಡ ವರ್ಗವಿದೆ ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ತುಷಾರ್ ಮೆಹ್ತಾ ಅವರಿಗೆ ಮರು ಪ್ರಶ್ನೆ ಹಾಕಿದ ಪೀಠ, “ಇನ್ನು ಮುಂದೆ ಮುಸ್ಲಿಮರು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಿ ಎಂದು ನೀವು ಹೇಳುತ್ತಿದ್ದೀರಾ? ಅದನ್ನು ಬಹಿರಂಗವಾಗಿ ಹೇಳಿ” ಎಂದಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸುವ ಮೊದಲು ಜಂಟಿ ಸಂಸದೀಯ ಸಮಿತಿಯು (ಜೆಪಿಸಿ) 38 ಸಭೆಗಳನ್ನು ನಡೆಸಿವೆ. ಬರೋಬ್ಬರಿ 98.2 ಲಕ್ಷ ಜ್ಞಾಪಕ ಪತ್ರಗಳನ್ನು ಪರಿಶೀಲಿಸಿದೆ ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಎರಡು ಆಯಾಮದ ಪ್ರಶ್ನೆಗಳನ್ನು ಉಭಯ ಪಕ್ಷಗಳ ಮುಂದಿಟ್ಟಿದೆ.

“ನಾವು ಅರ್ಜಿಗಳನ್ನು ಪರಿಗಣಿಸಬೇಕೆ ಅಥವಾ ಹೈಕೋರ್ಟ್‌ಗೆ ವರ್ಗಾಯಿಸಬೇಕೆ? ಎರಡನೆಯದಾಗಿ ನೀವು ನಿಜವಾಗಿಯೂ ಏನು ಆಗಬೇಕೆಂದು ಬಯಸುತ್ತಿದ್ದೀರಿ? ಏನೆಂದು ವಾದಿಸಲು ಯತ್ನಿಸುತ್ತಿದ್ದೀರಿ ಎಂಬುವುದನ್ನು ಸಂಕ್ಷಿಪ್ತವಾಗಿ ಸೂಚಿಸಿ?” ಎಂದು ಸಿಜೆಐ ಖನ್ನಾ ಕೇಳಿದ್ದಾರೆ.

ಎರಡನೇ ಅಂಶವು ನಮಗೆ ಮೊದಲ ಅಂಶದ ಬಗ್ಗೆ  ನಿರ್ಧಾರ ಕೈಗೊಳ್ಳಲು ಒಂದು ಹಂತದಲ್ಲಿ ಅನುಕೂಲಕರವಾಗಿರುತ್ತದೆ ಎಂದೂ ಅವರು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಉಲ್ಲೇಖಿಸಿ, ಮುಸ್ಲಿಮರು ಮಾತ್ರ ವಕ್ಫ್ ಮಾಡಬಹುದು ಎಂದು ಹೇಳುವ ನಿಬಂಧನೆಯನ್ನು ಪ್ರಶ್ನಿಸುತ್ತಿರುವುದಾಗಿ ಪೀಠಕ್ಕೆ ತಿಳಿಸಿದ್ದಾರೆ.

“ನಾನು ಮುಸ್ಲಿಂ ಅಥವಾ ಇಲ್ಲವೇ ಎಂಬುದನ್ನು ಮತ್ತು ಮುಸ್ಲಿಂ ಆಗಿರುವ ಮೂಲಕ ವಕ್ಫ್‌ ಮಾಡಲು ಅರ್ಹ ಎಂಬುವುದನ್ನು ಸರ್ಕಾರ ಹೇಗೆ ನಿರ್ಧರಿಸಲು ಸಾಧ್ಯ”? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಐದು ವರ್ಷಗಳಿಂದ ಇಸ್ಲಾಂ ಧರ್ಮವನ್ನು ಪಾಲಿಸುತ್ತಿರುವವರು ಮಾತ್ರ ವಕ್ಫ್ ಮಾಡಬಹುದು ಎಂದು ಸರ್ಕಾರ ಹೇಗೆ ಹೇಳಲು ಸಾಧ್ಯ? ಎಂದು ಕೇಳಿದ್ದಾರೆ.

ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ವಕ್ಫ್ ಕಾಯ್ದೆಯು ಇಡೀ ದೇಶದ ಮೇಲೆ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ, ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು ಎಂದು ಮನವಿ ಮಾಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಹಿರಿಯ ವಕೀಲ ಹುಝೇಫಾ ಅಹ್ಮದಿ, ‘ಬಳಕೆದಾರರಿಂದ ವಕ್ಫ್’ (Waqf By User) ಪಡೆಯುವುದು ಇಸ್ಲಾಂನ ಸ್ಥಾಪಿತ ಪದ್ಧತಿಯಾಗಿದ್ದು, ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ನ್ಯಾಯಾಲಯ ಇಂದು (ಏ.16) ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ನಾಳೆ ಮಧ್ಯಾಹ್ನ (ಏ.17) 2 ಗಂಟೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳು, ರಾಜಕೀಯ ನಾಯಕರು, ವಿವಿಧ ಪಕ್ಷಗಳು ಮತ್ತು ಇತರರ 70ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಎಂ.ಡಿ ಜಾವೇದ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಜಮಿಯತ್ ಉಲೇಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವೈಎಸ್‌ಆರ್‌ಸಿ ಪಕ್ಷ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ದೆಹಲಿ ಶಾಸಕ ಅಮಾನತುಲ್ಲಾ ಖಾನ್, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಬೆಂಗಳೂರಿನ ಜಾಮಾ ಮಸೀದಿಯ ಇಮಾಮ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಟಿವಿಕೆ ಅಧ್ಯಕ್ಷ ಮತ್ತು ತಮಿಳು ನಟ ವಿಜಯ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ ಮುಂತಾದವರು ಅರ್ಜಿದಾರರಲ್ಲಿ ಸೇರಿದ್ದಾರೆ.

ಕೇಂದ್ರ ಸರ್ಕಾರ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದು, ವಕ್ಫ್‌ ಅರ್ಜಿಗಳ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ.

ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ: ಅರ್ಜಿಗಳ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ‘Rumour is to deport all Muslims of India by paying them compensation?’
    Hindustan for Hindus abd Pakistan for Muslims as Muslims demanded?
    Walls around may not be a good idea?

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...