Homeಮುಖಪುಟ'ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?': ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

‘ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?’: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, “ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?” ಎಂದು ಸುಪ್ರೀಂ ಕೋರ್ಟ್ ಬುಧವಾರ (ಏ.16) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ ಎಂದು ವರದಿಗಳು ಹೇಳಿವೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠವು, ‘ಬಳಕೆದಾರರಿಂದ ವಕ್ಫ್’ (Waqf by User) ಅನ್ನು ನಿರಾಕರಿಸಲು ಹೇಗೆ ಸಾಧ್ಯ? ಏಕೆಂದರೆ, ಅನೇಕರು ವಕ್ಫ್‌ ಆಸ್ತಿಗಳನ್ನು ನೋಂದಾಯಿಸಲು ಅಗತ್ಯವಾದ ದಾಖಲೆಗಳನ್ನು ಹೊಂದಿರುವುದಿಲ್ಲ ಎಂದು ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

‘ಬಳಕೆದಾರರಿಂದ ವಕ್ಫ್’ (Waqf By User) ಎಂದರೆ, ಆಸ್ತಿ ಮಾಲೀಕರು ತಮ್ಮ ಆಸ್ತಿಯನ್ನು ವಕ್ಫ್ ಮಾಡಿರುವ ಬಗ್ಗೆ ಔಪಚಾರಿಕ, ಲಿಖಿತ ದಾಖಲೆಗಳು ಇಲ್ಲದಿದ್ದರೂ ಕೂಡ, ಯಾವುದೇ ಅಡೆತಡೆಯಿಲ್ಲದೆ ದೀರ್ಘ ಸಮಯದಿಂದ ಧಾರ್ಮಿಕ, ಸಾಮುದಾಯಿಕ ಉದ್ದೇಶಗಳಿಗೆ ಬಳಸುತ್ತಿರುವ ಆಧಾರದ ಮೇಲೆ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ದತ್ತಿ (ವಕ್ಫ್) ಎಂದು ಗುರುತಿಸಿಕೊಂಡು ಬರಲಾಗುತ್ತಿದೆ.

“ನೀವು ಇಂತಹ ವಕ್ಫ್‌ ಆಸ್ತಿಗಳನ್ನು ಬಳಕೆದಾರರಿಂದ ಹೇಗೆ ನೋಂದಾಯಿಸುತ್ತೀರಿ? ಅವರ ಬಳಿ ಯಾವ ದಾಖಲೆಗಳಿವೆ? ಹೌದು, ಕೆಲವು ದುರುಪಯೋಗಳು ನಡೆಯುತ್ತಿವೆ. ಆದರೆ, ನಿಜವಾದವುಗಳೂ ಇವೆ. ನಾನು ಖಾಸಗಿ ಮಂಡಳಿಯ ತೀರ್ಪುಗಳನ್ನು ಕೂಡ ನೋಡಿದ್ದೇನೆ. ಬಳಕೆದಾರರಿಂದ ವಕ್ಫ್ ಅನ್ನು ಗುರುತಿಸಲಾಗಿದೆ. ನೀವು ಅದನ್ನು ರದ್ದುಗೊಳಿಸಿದರೆ ಸಮಸ್ಯೆಯಾಗುತ್ತದೆ. ಶಾಸಕಾಂಗವು ಆದೇಶ ಅಥವಾ ತೀರ್ಪನ್ನು ಅನೂರ್ಜಿತವೆಂದು ಘೋಷಿಸಲು ಸಾಧ್ಯವಿಲ್ಲ. ನೀವು ಆಧಾರವನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಪೀಠ ಹೇಳಿದೆ.

ಈ ವೇಳೆ, ವಕ್ಫ್ ಕಾಯ್ದೆಯಿಂದ ನಿಯಂತ್ರಿಸಲ್ಪಡಲು ಇಷ್ಟಪಡದ ಮುಸ್ಲಿಮರ ದೊಡ್ಡ ವರ್ಗವಿದೆ ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ತುಷಾರ್ ಮೆಹ್ತಾ ಅವರಿಗೆ ಮರು ಪ್ರಶ್ನೆ ಹಾಕಿದ ಪೀಠ, “ಇನ್ನು ಮುಂದೆ ಮುಸ್ಲಿಮರು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಿ ಎಂದು ನೀವು ಹೇಳುತ್ತಿದ್ದೀರಾ? ಅದನ್ನು ಬಹಿರಂಗವಾಗಿ ಹೇಳಿ” ಎಂದಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸುವ ಮೊದಲು ಜಂಟಿ ಸಂಸದೀಯ ಸಮಿತಿಯು (ಜೆಪಿಸಿ) 38 ಸಭೆಗಳನ್ನು ನಡೆಸಿವೆ. ಬರೋಬ್ಬರಿ 98.2 ಲಕ್ಷ ಜ್ಞಾಪಕ ಪತ್ರಗಳನ್ನು ಪರಿಶೀಲಿಸಿದೆ ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಎರಡು ಆಯಾಮದ ಪ್ರಶ್ನೆಗಳನ್ನು ಉಭಯ ಪಕ್ಷಗಳ ಮುಂದಿಟ್ಟಿದೆ.

“ನಾವು ಅರ್ಜಿಗಳನ್ನು ಪರಿಗಣಿಸಬೇಕೆ ಅಥವಾ ಹೈಕೋರ್ಟ್‌ಗೆ ವರ್ಗಾಯಿಸಬೇಕೆ? ಎರಡನೆಯದಾಗಿ ನೀವು ನಿಜವಾಗಿಯೂ ಏನು ಆಗಬೇಕೆಂದು ಬಯಸುತ್ತಿದ್ದೀರಿ? ಏನೆಂದು ವಾದಿಸಲು ಯತ್ನಿಸುತ್ತಿದ್ದೀರಿ ಎಂಬುವುದನ್ನು ಸಂಕ್ಷಿಪ್ತವಾಗಿ ಸೂಚಿಸಿ?” ಎಂದು ಸಿಜೆಐ ಖನ್ನಾ ಕೇಳಿದ್ದಾರೆ.

ಎರಡನೇ ಅಂಶವು ನಮಗೆ ಮೊದಲ ಅಂಶದ ಬಗ್ಗೆ  ನಿರ್ಧಾರ ಕೈಗೊಳ್ಳಲು ಒಂದು ಹಂತದಲ್ಲಿ ಅನುಕೂಲಕರವಾಗಿರುತ್ತದೆ ಎಂದೂ ಅವರು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಉಲ್ಲೇಖಿಸಿ, ಮುಸ್ಲಿಮರು ಮಾತ್ರ ವಕ್ಫ್ ಮಾಡಬಹುದು ಎಂದು ಹೇಳುವ ನಿಬಂಧನೆಯನ್ನು ಪ್ರಶ್ನಿಸುತ್ತಿರುವುದಾಗಿ ಪೀಠಕ್ಕೆ ತಿಳಿಸಿದ್ದಾರೆ.

“ನಾನು ಮುಸ್ಲಿಂ ಅಥವಾ ಇಲ್ಲವೇ ಎಂಬುದನ್ನು ಮತ್ತು ಮುಸ್ಲಿಂ ಆಗಿರುವ ಮೂಲಕ ವಕ್ಫ್‌ ಮಾಡಲು ಅರ್ಹ ಎಂಬುವುದನ್ನು ಸರ್ಕಾರ ಹೇಗೆ ನಿರ್ಧರಿಸಲು ಸಾಧ್ಯ”? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಐದು ವರ್ಷಗಳಿಂದ ಇಸ್ಲಾಂ ಧರ್ಮವನ್ನು ಪಾಲಿಸುತ್ತಿರುವವರು ಮಾತ್ರ ವಕ್ಫ್ ಮಾಡಬಹುದು ಎಂದು ಸರ್ಕಾರ ಹೇಗೆ ಹೇಳಲು ಸಾಧ್ಯ? ಎಂದು ಕೇಳಿದ್ದಾರೆ.

ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ವಕ್ಫ್ ಕಾಯ್ದೆಯು ಇಡೀ ದೇಶದ ಮೇಲೆ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ, ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು ಎಂದು ಮನವಿ ಮಾಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಹಿರಿಯ ವಕೀಲ ಹುಝೇಫಾ ಅಹ್ಮದಿ, ‘ಬಳಕೆದಾರರಿಂದ ವಕ್ಫ್’ (Waqf By User) ಪಡೆಯುವುದು ಇಸ್ಲಾಂನ ಸ್ಥಾಪಿತ ಪದ್ಧತಿಯಾಗಿದ್ದು, ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ನ್ಯಾಯಾಲಯ ಇಂದು (ಏ.16) ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ನಾಳೆ ಮಧ್ಯಾಹ್ನ (ಏ.17) 2 ಗಂಟೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳು, ರಾಜಕೀಯ ನಾಯಕರು, ವಿವಿಧ ಪಕ್ಷಗಳು ಮತ್ತು ಇತರರ 70ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಎಂ.ಡಿ ಜಾವೇದ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಜಮಿಯತ್ ಉಲೇಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವೈಎಸ್‌ಆರ್‌ಸಿ ಪಕ್ಷ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ದೆಹಲಿ ಶಾಸಕ ಅಮಾನತುಲ್ಲಾ ಖಾನ್, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಬೆಂಗಳೂರಿನ ಜಾಮಾ ಮಸೀದಿಯ ಇಮಾಮ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಟಿವಿಕೆ ಅಧ್ಯಕ್ಷ ಮತ್ತು ತಮಿಳು ನಟ ವಿಜಯ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ ಮುಂತಾದವರು ಅರ್ಜಿದಾರರಲ್ಲಿ ಸೇರಿದ್ದಾರೆ.

ಕೇಂದ್ರ ಸರ್ಕಾರ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದು, ವಕ್ಫ್‌ ಅರ್ಜಿಗಳ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ.

ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ: ಅರ್ಜಿಗಳ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ‘Rumour is to deport all Muslims of India by paying them compensation?’
    Hindustan for Hindus abd Pakistan for Muslims as Muslims demanded?
    Walls around may not be a good idea?

LEAVE A REPLY

Please enter your comment!
Please enter your name here

- Advertisment -

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...