Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್, ವೋಟರ್ ಐಡಿ ಮಾನ್ಯ ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್, ವೋಟರ್ ಐಡಿ ಮಾನ್ಯ ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ಗೆ (ಎಸ್‌ಐಆರ್‌) ತಡೆ ನೀಡಲು ಸುಪ್ರೀಂ ಕೋರ್ಟ್ ಗುರುವಾರ (ಜು.10) ನಿರಾಕರಿಸಿದೆ. ಆದರೆ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಮಾನ್ಯ ದಾಖಲೆಗಳಾಗಿ ಪರಿಗಣಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ, ವಿಧಾನಸಭಾ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ಮತದಾರರ ಪಟ್ಟಿಯ ಪರಿಷ್ಕರಣೆ ಕೈಗೆತ್ತಿಕೊಂಡಿರುವುದನ್ನು ಪ್ರಶ್ನಿಸಿದೆ. ಚುನಾವಣೆ ಬಂದಾಗಲೇ ತರಾತುರಿಯ ಪರಿಷ್ಕರಣೆ ಏಕೆ, ಬೇರೆ ಸಮಯದಲ್ಲಿ ಪರಿಷ್ಕರಣೆ ಸಾಧ್ಯವಿಲ್ಲವೇ? ಎಂದು ಕೇಳಿದೆ.

ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಿದ ಪೀಠ, “ನಾವು ಚುನಾವಣಾ ಆಯೋಗವನ್ನು ಅನುಮಾನಿಸುತ್ತಿಲ್ಲ. ಅವರು ದಾಖಲೆಗಳನ್ನು ಪರಿಶೀಲಿಸೋಣ ಎಂದು ಹೇಳಿದ್ದಾರೆ. ಹಾಗಾಗಿ, ಈ ವಿಷಯದ ಬಗ್ಗೆ ವಿಚಾರಣೆಯ ಅಗತ್ಯವಿದೆ. ಜುಲೈ 28ರಂದು ಅದನ್ನು ವಿಚಾರಣೆಗೆ  ಪಟ್ಟಿ ಮಾಡಲಿ. ಈ ಮಧ್ಯೆ, ಅವರು ಕರಡನ್ನು ಪ್ರಕಟಿಸುವುದಿಲ್ಲ” ಎಂದು ಹೇಳಿದೆ. ಜುಲೈ 21ರೊಳಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಮತದಾನದ ಅರ್ಹತೆಯನ್ನು ದೃಢೀಕರಿಸಲು ಮತದಾರರು ಸಲ್ಲಿಸಬಹುದಾದ 11 ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಚುನಾವಣಾ ಆಯೋಗ ಕೈ ಬಿಟ್ಟಿತ್ತು. ಇದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷಗಳು ಲಕ್ಷಾಂತರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕ ವ್ಯಕ್ತಪಡಿಸಿದ್ದವು.

ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳ ಪಟ್ಟಿ ಸಮಗ್ರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯದ ಹಿತ ದೃಷ್ಟಿಯಿಂದ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪಟ್ಟಿಗೆ ಸೇರಿಸಬೇಕು ಎಂದಿದೆ. ಈ ದಾಖಲೆಗಳನ್ನು ತೆಗೆದುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಬೇಕು. ತೆಗೆದುಕೊಳ್ಳದಿದ್ದರೆ, ಅದಕ್ಕೆ ಕಾರಣಗಳನ್ನು ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

“ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ನ್ಯಾಯಾಲಯಗಳು ಅದನ್ನು ಮುಟ್ಟುವುದಿಲ್ಲ. ಅಂದರೆ, ಮತದಾನದಿಂದ ವಂಚಿತರಾದ ವ್ಯಕ್ತಿಗೆ ಚುನಾವಣೆಗೆ ಮುನ್ನ ಅದನ್ನು (ಪರಿಷ್ಕೃತ ಪಟ್ಟಿ) ಪ್ರಶ್ನಿಸುವ ಆಯ್ಕೆ ಇರುವುದಿಲ್ಲ” ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ.

ಆದಾಗ್ಯೂ, ನಾಗರಿಕರಲ್ಲದವರು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳಲು ತೀವ್ರವಾದ ಪರಿಷ್ಕರಣೆಯ ಮೂಲಕ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

“ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಸಾಂವಿಧಾನಿಕ ಅವಕಾಶ ಇದೆ. ಇದರಲ್ಲಿ ಒಂದು ಪ್ರಾಯೋಗಿಕತೆ ಇದೆ. ಗಣಕೀಕರಣದ ನಂತರ ಇದು ಮೊದಲ ಬಾರಿಗೆ ಆಗಿದ್ದರಿಂದ ಅವರು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಆದ್ದರಿಂದ ಒಂದು ತರ್ಕವಿದೆ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶಂಕರನಾರಾಯಣನ್, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣವಾಗಿ ಅನಿಯಂತ್ರಿತ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, “ಚುನಾವಣಾ ಆಯೋಗದ ಕ್ರಮ ಪೌರತ್ವ ಪರಿಶೀಲನೆಯಂತಿದೆ. ಇಡೀ ದೇಶ ಎಲ್ಲದಕ್ಕೂ ಆಧಾರ್ ಆಧಾರ್ ಎನ್ನುತ್ತಿದೆ. ಆದರೆ, ಚುನಾವಣಾ ಆಯೋಗ ಈಗ ಅದು ಮಾನ್ಯ ದಾಖಲೆಯಲ್ಲ ಎನ್ನುತ್ತಿದೆ” ಎಂದಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಇನ್ನೊಬ್ಬರು ಹಿರಿಯ ವಕೀಲ ಕಪಿಲ್ ಸಿಬಲ್, “ನಾವು ಭಾರತೀಯ ನಾಗರಿಕರು ಹೌದೋ ಅಲ್ಲವೋ ಎಂದು ಕೇಳಲು ಚುನಾವಣಾ ಆಯೋಗದವರು ಯಾರು? ಹೊರೆ ನಮ್ಮ ಮೇಲಿರುವುದಲ್ಲ, ಅವರ ಮೇಲೆ. ನಾವು ನಾಗರಿಕಲ್ಲ ಎಂದು ಹೇಳಲು ಅವರ ಬಳಿ ಕೆಲವು ದಾಖಲೆಗಳು ಇರಬೇಕು” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗದ ಪರ ವಕೀಲ,”ಆಧಾರ್ ಕಾರ್ಡ್ ಅನ್ನು ಪೌರತ್ವದ ದಾಖಲೆಯಾಗಿ ಬಳಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಆಗ ಚುನಾವಣಾ ಆಯೋಗ, “ಇದು ವಿಭಿನ್ನ ವಿಷಯ ಮತ್ತು ಗೃಹ ಸಚಿವಾಲಯದ ವಿಶೇಷಾಧಿಕಾರ, ಚುನಾವಣಾ ಆಯೋಗದ್ದು ಅಲ್ಲ ಎಂದು ಸ್ಪಷ್ಟಪಡಿಸಿದೆ.

“ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಅಡಿಯಲ್ಲಿ ಪೌರತ್ವವನ್ನು ಪರಿಶೀಲಿಸಬೇಕಾದರೆ, ನೀವು ಮೊದಲೇ ಕ್ರಮ ಕೈಗೊಳ್ಳಬೇಕಿತ್ತು. ಮತದಾರರ ಪಟ್ಟಿಯಿಂದ ನಾಗರಿಕರಲ್ಲದವರನ್ನು ತೆಗೆದುಹಾಕುವುದು ಗೃಹ ಸಚಿವಾಲಯದ ವಿಶೇಷ ಅಧಿಕಾರ, ಚುನಾವಣಾ ಆಯೋಗದ ಕೆಲಸವಲ್ಲ” ಎಂದಿದೆ.

ಆಗ, ಪರಿಷ್ಕೃತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮೊದಲು ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು ಎಂದು ಚುನಾವಣಾ ಆಯೋಗದ ವಕೀಲರು ಹೇಳಿದ್ದಾರೆ. ಪರಿಷ್ಕರಣೆ ಪ್ರಕ್ರಿಯೆಯನ್ನು ನಿಲ್ಲಿಸಬಾರದು ಎಂದು ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಜೂನ್ 24ರಂದು ಚುನಾವಣಾ ಆಯೋಗ ಆದೇಶಿಸಿದೆ. ಕಳೆದ 20 ವರ್ಷಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ಸೇರ್ಪಡೆ, ಅಳಿಸುವಿಕೆ, ನಕಲು ನಮೂದುಗಳ ಸಾಧ್ಯತೆಯನ್ನು ಹೆಚ್ಚಿಸಿವೆ. ಆದ್ದರಿಂದ ಮತದಾರರ ಪಟ್ಟಿಯ ಶುದ್ದೀಕರಣ ಅಗತ್ಯವಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಚುನಾವಣಾ ಆಯೋಗದ ಈ ಕ್ರಮವನ್ನು ವಿರೋಧ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತೀವ್ರವಾಗಿ ವಿರೋಧಿಸಿವೆ.

ಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...