Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್, ವೋಟರ್ ಐಡಿ ಮಾನ್ಯ ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್, ವೋಟರ್ ಐಡಿ ಮಾನ್ಯ ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ಗೆ (ಎಸ್‌ಐಆರ್‌) ತಡೆ ನೀಡಲು ಸುಪ್ರೀಂ ಕೋರ್ಟ್ ಗುರುವಾರ (ಜು.10) ನಿರಾಕರಿಸಿದೆ. ಆದರೆ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಮಾನ್ಯ ದಾಖಲೆಗಳಾಗಿ ಪರಿಗಣಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ, ವಿಧಾನಸಭಾ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ಮತದಾರರ ಪಟ್ಟಿಯ ಪರಿಷ್ಕರಣೆ ಕೈಗೆತ್ತಿಕೊಂಡಿರುವುದನ್ನು ಪ್ರಶ್ನಿಸಿದೆ. ಚುನಾವಣೆ ಬಂದಾಗಲೇ ತರಾತುರಿಯ ಪರಿಷ್ಕರಣೆ ಏಕೆ, ಬೇರೆ ಸಮಯದಲ್ಲಿ ಪರಿಷ್ಕರಣೆ ಸಾಧ್ಯವಿಲ್ಲವೇ? ಎಂದು ಕೇಳಿದೆ.

ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಿದ ಪೀಠ, “ನಾವು ಚುನಾವಣಾ ಆಯೋಗವನ್ನು ಅನುಮಾನಿಸುತ್ತಿಲ್ಲ. ಅವರು ದಾಖಲೆಗಳನ್ನು ಪರಿಶೀಲಿಸೋಣ ಎಂದು ಹೇಳಿದ್ದಾರೆ. ಹಾಗಾಗಿ, ಈ ವಿಷಯದ ಬಗ್ಗೆ ವಿಚಾರಣೆಯ ಅಗತ್ಯವಿದೆ. ಜುಲೈ 28ರಂದು ಅದನ್ನು ವಿಚಾರಣೆಗೆ  ಪಟ್ಟಿ ಮಾಡಲಿ. ಈ ಮಧ್ಯೆ, ಅವರು ಕರಡನ್ನು ಪ್ರಕಟಿಸುವುದಿಲ್ಲ” ಎಂದು ಹೇಳಿದೆ. ಜುಲೈ 21ರೊಳಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಮತದಾನದ ಅರ್ಹತೆಯನ್ನು ದೃಢೀಕರಿಸಲು ಮತದಾರರು ಸಲ್ಲಿಸಬಹುದಾದ 11 ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಚುನಾವಣಾ ಆಯೋಗ ಕೈ ಬಿಟ್ಟಿತ್ತು. ಇದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷಗಳು ಲಕ್ಷಾಂತರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕ ವ್ಯಕ್ತಪಡಿಸಿದ್ದವು.

ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳ ಪಟ್ಟಿ ಸಮಗ್ರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯದ ಹಿತ ದೃಷ್ಟಿಯಿಂದ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪಟ್ಟಿಗೆ ಸೇರಿಸಬೇಕು ಎಂದಿದೆ. ಈ ದಾಖಲೆಗಳನ್ನು ತೆಗೆದುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಬೇಕು. ತೆಗೆದುಕೊಳ್ಳದಿದ್ದರೆ, ಅದಕ್ಕೆ ಕಾರಣಗಳನ್ನು ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

“ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ನ್ಯಾಯಾಲಯಗಳು ಅದನ್ನು ಮುಟ್ಟುವುದಿಲ್ಲ. ಅಂದರೆ, ಮತದಾನದಿಂದ ವಂಚಿತರಾದ ವ್ಯಕ್ತಿಗೆ ಚುನಾವಣೆಗೆ ಮುನ್ನ ಅದನ್ನು (ಪರಿಷ್ಕೃತ ಪಟ್ಟಿ) ಪ್ರಶ್ನಿಸುವ ಆಯ್ಕೆ ಇರುವುದಿಲ್ಲ” ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ.

ಆದಾಗ್ಯೂ, ನಾಗರಿಕರಲ್ಲದವರು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳಲು ತೀವ್ರವಾದ ಪರಿಷ್ಕರಣೆಯ ಮೂಲಕ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

“ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಸಾಂವಿಧಾನಿಕ ಅವಕಾಶ ಇದೆ. ಇದರಲ್ಲಿ ಒಂದು ಪ್ರಾಯೋಗಿಕತೆ ಇದೆ. ಗಣಕೀಕರಣದ ನಂತರ ಇದು ಮೊದಲ ಬಾರಿಗೆ ಆಗಿದ್ದರಿಂದ ಅವರು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಆದ್ದರಿಂದ ಒಂದು ತರ್ಕವಿದೆ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶಂಕರನಾರಾಯಣನ್, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣವಾಗಿ ಅನಿಯಂತ್ರಿತ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, “ಚುನಾವಣಾ ಆಯೋಗದ ಕ್ರಮ ಪೌರತ್ವ ಪರಿಶೀಲನೆಯಂತಿದೆ. ಇಡೀ ದೇಶ ಎಲ್ಲದಕ್ಕೂ ಆಧಾರ್ ಆಧಾರ್ ಎನ್ನುತ್ತಿದೆ. ಆದರೆ, ಚುನಾವಣಾ ಆಯೋಗ ಈಗ ಅದು ಮಾನ್ಯ ದಾಖಲೆಯಲ್ಲ ಎನ್ನುತ್ತಿದೆ” ಎಂದಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಇನ್ನೊಬ್ಬರು ಹಿರಿಯ ವಕೀಲ ಕಪಿಲ್ ಸಿಬಲ್, “ನಾವು ಭಾರತೀಯ ನಾಗರಿಕರು ಹೌದೋ ಅಲ್ಲವೋ ಎಂದು ಕೇಳಲು ಚುನಾವಣಾ ಆಯೋಗದವರು ಯಾರು? ಹೊರೆ ನಮ್ಮ ಮೇಲಿರುವುದಲ್ಲ, ಅವರ ಮೇಲೆ. ನಾವು ನಾಗರಿಕಲ್ಲ ಎಂದು ಹೇಳಲು ಅವರ ಬಳಿ ಕೆಲವು ದಾಖಲೆಗಳು ಇರಬೇಕು” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗದ ಪರ ವಕೀಲ,”ಆಧಾರ್ ಕಾರ್ಡ್ ಅನ್ನು ಪೌರತ್ವದ ದಾಖಲೆಯಾಗಿ ಬಳಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಆಗ ಚುನಾವಣಾ ಆಯೋಗ, “ಇದು ವಿಭಿನ್ನ ವಿಷಯ ಮತ್ತು ಗೃಹ ಸಚಿವಾಲಯದ ವಿಶೇಷಾಧಿಕಾರ, ಚುನಾವಣಾ ಆಯೋಗದ್ದು ಅಲ್ಲ ಎಂದು ಸ್ಪಷ್ಟಪಡಿಸಿದೆ.

“ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಅಡಿಯಲ್ಲಿ ಪೌರತ್ವವನ್ನು ಪರಿಶೀಲಿಸಬೇಕಾದರೆ, ನೀವು ಮೊದಲೇ ಕ್ರಮ ಕೈಗೊಳ್ಳಬೇಕಿತ್ತು. ಮತದಾರರ ಪಟ್ಟಿಯಿಂದ ನಾಗರಿಕರಲ್ಲದವರನ್ನು ತೆಗೆದುಹಾಕುವುದು ಗೃಹ ಸಚಿವಾಲಯದ ವಿಶೇಷ ಅಧಿಕಾರ, ಚುನಾವಣಾ ಆಯೋಗದ ಕೆಲಸವಲ್ಲ” ಎಂದಿದೆ.

ಆಗ, ಪರಿಷ್ಕೃತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮೊದಲು ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು ಎಂದು ಚುನಾವಣಾ ಆಯೋಗದ ವಕೀಲರು ಹೇಳಿದ್ದಾರೆ. ಪರಿಷ್ಕರಣೆ ಪ್ರಕ್ರಿಯೆಯನ್ನು ನಿಲ್ಲಿಸಬಾರದು ಎಂದು ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಜೂನ್ 24ರಂದು ಚುನಾವಣಾ ಆಯೋಗ ಆದೇಶಿಸಿದೆ. ಕಳೆದ 20 ವರ್ಷಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ಸೇರ್ಪಡೆ, ಅಳಿಸುವಿಕೆ, ನಕಲು ನಮೂದುಗಳ ಸಾಧ್ಯತೆಯನ್ನು ಹೆಚ್ಚಿಸಿವೆ. ಆದ್ದರಿಂದ ಮತದಾರರ ಪಟ್ಟಿಯ ಶುದ್ದೀಕರಣ ಅಗತ್ಯವಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಚುನಾವಣಾ ಆಯೋಗದ ಈ ಕ್ರಮವನ್ನು ವಿರೋಧ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತೀವ್ರವಾಗಿ ವಿರೋಧಿಸಿವೆ.

ಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...