Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ;...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

- Advertisement -
- Advertisement -

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸೋಮವಾರ (ಫೆ.16) ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಸಂವಿಧಾನದ 32ನೇ ವಿಧಿಯನ್ನು ಬಳಸಲು ಹಿಂಜರಿಕೆ ವ್ಯಕ್ತಪಡಿಸಿತು. ಅರ್ಜಿದಾರರು ಮೊದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು ಸಂಪರ್ಕಿಸಬೇಕು ಎಂದು ಪೀಠವು ತಿಳಿಸಿತು.

ಹೈಕೋರ್ಟ್‌ಗಳ ಅಧಿಕಾರವನ್ನು ಕಡೆಗಣಿಸಿ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ “ಶಾರ್ಟ್‌ಕಟ್” ಪ್ರವೃತ್ತಿಯನ್ನು ನ್ಯಾಯಪೀಠವು ಟೀಕಿಸಿತು. ಚುನಾವಣೆಗಳು ಸಮೀಪಿಸಿದಾಗ ರಾಜಕೀಯ ಹೋರಾಟಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ನಡೆಸುವ “ಗೊಂದಲಕಾರಿ ಪ್ರವೃತ್ತಿ” ಹೆಚ್ಚುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಬೇಸರ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ಣಯಿಸಲು ಹೈಕೋರ್ಟ್‌ಗೆ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅರ್ಜಿದಾರರ ಮನವಿಯನ್ನು ಆದ್ಯತೆಯ ಮೇಲೆ ಆಲಿಸುವಂತೆ ಗುವಾಹಟಿ ಹೈಕೋರ್ಟ್‌ಗೆ ವಿನಂತಿಸಿತು. ರಾಜಕೀಯ ಪಕ್ಷಗಳು ಪರಸ್ಪರ ಗೌರವ ಮತ್ತು ಸಾಂವಿಧಾನಿಕ ನೈತಿಕತೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯವು ಕರೆ ನೀಡಿತು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಕರಣವು ಕೇವಲ ಅಪರಾಧ ಎಸಗಿರುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಪದವಿಯ ಪ್ರಮಾಣ ವಚನವನ್ನು ಉಲ್ಲಂಘಿಸಿರುವ ಗಂಭೀರ ವಿಷಯವಾಗಿದೆ ಎಂದು ಪ್ರತಿಪಾದಿಸಿದರು.

ಇದು ಸಂವಿಧಾನದ 32ನೇ ವಿಧಿಯನ್ನು ಬಳಸಲು ಅತ್ಯಂತ ಯೋಗ್ಯವಾದ ಪ್ರಕರಣವಾಗಿದೆ. ದೇಶದ ಸಾಂವಿಧಾನಿಕ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾದಾಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಸಿಂಘ್ವಿ ವಾದಿಸಿದರು.

ಅರ್ಜಿದಾರರು ಅಸ್ಸಾಂ ಮುಖ್ಯಮಂತ್ರಿಯ ವಿರುದ್ಧವೇ ವಿಶೇಷ ತನಿಖಾ ತಂಡ (ಎಸ್ಐಟಿ) ಮೂಲಕ ತನಿಖೆ ನಡೆಸಬೇಕೆಂದು ಕೋರುತ್ತಿದ್ದಾರೆ. ರಾಜ್ಯದ ಆಡಳಿತ ಮುಖ್ಯಸ್ಥರ ವಿರುದ್ಧ ತನಿಖೆ ನಡೆಯಬೇಕಿರುವುದರಿಂದ, ಹೈಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಸಿಗದೇ ಇರಬಹುದು ಎಂಬ ಆತಂಕವನ್ನು ಸಿಂಘ್ವಿ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೇವಲ ಅಸ್ಸಾಂನಲ್ಲಿ ಮಾತ್ರವಲ್ಲದೆ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲೂ ಇಂತಹ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಆದ್ದರಿಂದ ಇದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾದ ವಿಷಯವಲ್ಲ, ಇಡೀ ದೇಶಕ್ಕೆ ಸಂಬಂಧಿಸಿದೆ ನ್ಯಾಯಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪೀಠವು, ಹೈಕೋರ್ಟ್‌ಗಳ ಮೇಲೆ ನಂಬಿಕೆ ಇಡಬೇಕು ಮತ್ತು ಅವುಗಳನ್ನು ಕಡೆಗಣಿಸಬಾರದು ಎಂದು ಸೂಚಿಸಿತು. ಹೈಕೋರ್ಟ್‌ಗಳು ಕೂಡ ಎಸ್‌ಐಟಿ ತನಿಖೆಗೆ ಆದೇಶಿಸುವ ಅಧಿಕಾರ ಹೊಂದಿವೆ ಎಂದು ಸಿಜೆಐ ಸೂರ್ಯ ಕಾಂತ್ ಸ್ಪಷ್ಟಪಡಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬರು ವಕೀಲ ನಿಝಾಮ್ ಪಾಷಾ, ಹೈಕೋರ್ಟ್ ಅಸ್ಸಾಂನ ಹೊರಗಿನ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸಬೇಕಾಗಬಹುದು ಎಂದು ವಾದಿಸಿದರು. ಹೈಕೋರ್ಟ್ ಕೂಡ ಅಂತಹ ಆದೇಶವನ್ನು ನೀಡಬಹುದು ಎಂದು ಸಿಜೆಐ ಹೇಳಿದರು ಮತ್ತು ಹೈಕೋರ್ಟ್ ನ್ಯಾಯಾಧೀಶರಾಗಿ ತಾನು ಅಂತಹ ನಿರ್ದೇಶನವನ್ನು ನೀಡಿರುವುದಾಗಿ ನೆನಪಿಸಿಕೊಂಡರು.

ನಾಲ್ವರು ಅಸ್ಸಾಮಿ ವ್ಯಕ್ತಿಗಳ ಪರವಾಗಿ ವಾದಿಸಿದ ವಕೀಲ ನಿಝಾಮ್ ಪಾಷಾ, ತಾನು ಈಗಾಗಲೇ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಈ ವಿಷಯದಲ್ಲಿ ಸ್ವಯಂಪ್ರೇರಿತ ಹಸ್ತಕ್ಷೇಪ ಮಾಡುವಂತೆ ಕೋರಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಕೇವಲ ಪತ್ರ ಬರೆಯುವುದು ಮತ್ತು ಅಧಿಕೃತವಾಗಿ ಅರ್ಜಿ ಸಲ್ಲಿಸುವುದು ಇವೆರಡೂ ವಿಭಿನ್ನ ವಿಷಯಗಳು ಎಂದು ತಿಳಿಸಿದರು.

ನ್ಯಾಯಾಲಯವು ಆದೇಶವನ್ನು ನೀಡಿದ ನಂತರ, ಹಿರಿಯ ವಕೀಲ ಸಿಂಘ್ವಿ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಭಾಷಣಗಳಲ್ಲಿ ಸಂಯಮ ಪಾಲಿಸಬೇಕಾದ ಅಗತ್ಯತೆಯ ಕುರಿತು ಕೆಲವು ಸಾಮಾನ್ಯ ಅಭಿಪ್ರಾಯಗಳನ್ನು ಅಥವಾ ಮಾರ್ಗಸೂಚಿಗಳನ್ನು ನೀಡುವಂತೆ ಪೀಠವನ್ನು ವಿನಂತಿಸಿದರು.

ಇದಕ್ಕೆ ನಿರಾಕರಿಸಿದ ಸಿಜೆಐ, “ನಾವು ಈಗಾಗಲೇ ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿರುವುದರಿಂದ, ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನಮ್ಮಲ್ಲಿ ಒಂದು ಅಂತರ್ಗತ ವ್ಯವಸ್ಥೆಯಿದೆ. ಸಾಂವಿಧಾನಿಕ ಚೌಕಟ್ಟು ಒದಗಿಸಿರುವ ಆ ವ್ಯವಸ್ಥೆಯನ್ನು ನಾವೆಲ್ಲರೂ ಗೌರವಿಸೋಣ” ಎಂದರು.

ಪ್ರಕರಣವು ಕೆಳ ಹಂತದ ನ್ಯಾಯಾಲಯದ (ಹೈಕೋರ್ಟ್) ವ್ಯಾಪ್ತಿಗೆ ಹೋದಾಗ, ಅದರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂಬ ನ್ಯಾಯಾಂಗದ ಶಿಸ್ತನ್ನು ಸಿಜೆಐ ಎತ್ತಿಹಿಡಿದರು. ಸಂವಿಧಾನವು ರೂಪಿಸಿರುವ ನ್ಯಾಯಾಂಗ ವ್ಯವಸ್ಥೆಯ ಹಂತಗಳನ್ನು ಗೌರವಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ಪ್ರಕರಣದ ಗುಣಾವಗುಣಗಳ ಬಗ್ಗೆ ಯಾವುದೇ ಮುನ್ಸೂಚನೆ ನೀಡದೆ, ಹೈಕೋರ್ಟ್ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಅವಕಾಶ ನೀಡಲಾಯಿತು.

ಸಿಎಂ ಶರ್ಮಾ ವಿರುದ್ದ ಒಟ್ಟು ಮೂರು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿತ್ತು. ಮೊದಲ ಎರಡು ಅರ್ಜಿಗಳನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) – ಸಿಪಿಐ(ಎಂ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕಿ ಆನ್ನಿ ರಾಜಾ ಅವರು ಸಲ್ಲಿಸಿದ್ದರು. ಮೂರನೇ ಅರ್ಜಿಯನ್ನು ಅಸ್ಸಾಂನ ನಿವೃತ್ತ ಪ್ರಾಧ್ಯಾಪಕ ಮತ್ತು ಬುದ್ಧಿಜೀವಿ ಡಾ. ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹರಿಕೃಷ್ಣ ದೇಕಾ, ಹಿರಿಯ ಪತ್ರಕರ್ತ ಪರೇಶ್ ಚಂದ್ರ ಮಲಕರ್ ಮತ್ತು ಹಿರಿಯ ವಕೀಲ ಶಂತನು ಬೋರ್ಠಾಕೂರ್ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...