Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ;...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

- Advertisement -
- Advertisement -

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸೋಮವಾರ (ಫೆ.16) ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಸಂವಿಧಾನದ 32ನೇ ವಿಧಿಯನ್ನು ಬಳಸಲು ಹಿಂಜರಿಕೆ ವ್ಯಕ್ತಪಡಿಸಿತು. ಅರ್ಜಿದಾರರು ಮೊದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು ಸಂಪರ್ಕಿಸಬೇಕು ಎಂದು ಪೀಠವು ತಿಳಿಸಿತು.

ಹೈಕೋರ್ಟ್‌ಗಳ ಅಧಿಕಾರವನ್ನು ಕಡೆಗಣಿಸಿ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ “ಶಾರ್ಟ್‌ಕಟ್” ಪ್ರವೃತ್ತಿಯನ್ನು ನ್ಯಾಯಪೀಠವು ಟೀಕಿಸಿತು. ಚುನಾವಣೆಗಳು ಸಮೀಪಿಸಿದಾಗ ರಾಜಕೀಯ ಹೋರಾಟಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ನಡೆಸುವ “ಗೊಂದಲಕಾರಿ ಪ್ರವೃತ್ತಿ” ಹೆಚ್ಚುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಬೇಸರ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ಣಯಿಸಲು ಹೈಕೋರ್ಟ್‌ಗೆ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅರ್ಜಿದಾರರ ಮನವಿಯನ್ನು ಆದ್ಯತೆಯ ಮೇಲೆ ಆಲಿಸುವಂತೆ ಗುವಾಹಟಿ ಹೈಕೋರ್ಟ್‌ಗೆ ವಿನಂತಿಸಿತು. ರಾಜಕೀಯ ಪಕ್ಷಗಳು ಪರಸ್ಪರ ಗೌರವ ಮತ್ತು ಸಾಂವಿಧಾನಿಕ ನೈತಿಕತೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯವು ಕರೆ ನೀಡಿತು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಕರಣವು ಕೇವಲ ಅಪರಾಧ ಎಸಗಿರುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಪದವಿಯ ಪ್ರಮಾಣ ವಚನವನ್ನು ಉಲ್ಲಂಘಿಸಿರುವ ಗಂಭೀರ ವಿಷಯವಾಗಿದೆ ಎಂದು ಪ್ರತಿಪಾದಿಸಿದರು.

ಇದು ಸಂವಿಧಾನದ 32ನೇ ವಿಧಿಯನ್ನು ಬಳಸಲು ಅತ್ಯಂತ ಯೋಗ್ಯವಾದ ಪ್ರಕರಣವಾಗಿದೆ. ದೇಶದ ಸಾಂವಿಧಾನಿಕ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾದಾಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಸಿಂಘ್ವಿ ವಾದಿಸಿದರು.

ಅರ್ಜಿದಾರರು ಅಸ್ಸಾಂ ಮುಖ್ಯಮಂತ್ರಿಯ ವಿರುದ್ಧವೇ ವಿಶೇಷ ತನಿಖಾ ತಂಡ (ಎಸ್ಐಟಿ) ಮೂಲಕ ತನಿಖೆ ನಡೆಸಬೇಕೆಂದು ಕೋರುತ್ತಿದ್ದಾರೆ. ರಾಜ್ಯದ ಆಡಳಿತ ಮುಖ್ಯಸ್ಥರ ವಿರುದ್ಧ ತನಿಖೆ ನಡೆಯಬೇಕಿರುವುದರಿಂದ, ಹೈಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಸಿಗದೇ ಇರಬಹುದು ಎಂಬ ಆತಂಕವನ್ನು ಸಿಂಘ್ವಿ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೇವಲ ಅಸ್ಸಾಂನಲ್ಲಿ ಮಾತ್ರವಲ್ಲದೆ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲೂ ಇಂತಹ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಆದ್ದರಿಂದ ಇದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾದ ವಿಷಯವಲ್ಲ, ಇಡೀ ದೇಶಕ್ಕೆ ಸಂಬಂಧಿಸಿದೆ ನ್ಯಾಯಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪೀಠವು, ಹೈಕೋರ್ಟ್‌ಗಳ ಮೇಲೆ ನಂಬಿಕೆ ಇಡಬೇಕು ಮತ್ತು ಅವುಗಳನ್ನು ಕಡೆಗಣಿಸಬಾರದು ಎಂದು ಸೂಚಿಸಿತು. ಹೈಕೋರ್ಟ್‌ಗಳು ಕೂಡ ಎಸ್‌ಐಟಿ ತನಿಖೆಗೆ ಆದೇಶಿಸುವ ಅಧಿಕಾರ ಹೊಂದಿವೆ ಎಂದು ಸಿಜೆಐ ಸೂರ್ಯ ಕಾಂತ್ ಸ್ಪಷ್ಟಪಡಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬರು ವಕೀಲ ನಿಝಾಮ್ ಪಾಷಾ, ಹೈಕೋರ್ಟ್ ಅಸ್ಸಾಂನ ಹೊರಗಿನ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸಬೇಕಾಗಬಹುದು ಎಂದು ವಾದಿಸಿದರು. ಹೈಕೋರ್ಟ್ ಕೂಡ ಅಂತಹ ಆದೇಶವನ್ನು ನೀಡಬಹುದು ಎಂದು ಸಿಜೆಐ ಹೇಳಿದರು ಮತ್ತು ಹೈಕೋರ್ಟ್ ನ್ಯಾಯಾಧೀಶರಾಗಿ ತಾನು ಅಂತಹ ನಿರ್ದೇಶನವನ್ನು ನೀಡಿರುವುದಾಗಿ ನೆನಪಿಸಿಕೊಂಡರು.

ನಾಲ್ವರು ಅಸ್ಸಾಮಿ ವ್ಯಕ್ತಿಗಳ ಪರವಾಗಿ ವಾದಿಸಿದ ವಕೀಲ ನಿಝಾಮ್ ಪಾಷಾ, ತಾನು ಈಗಾಗಲೇ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಈ ವಿಷಯದಲ್ಲಿ ಸ್ವಯಂಪ್ರೇರಿತ ಹಸ್ತಕ್ಷೇಪ ಮಾಡುವಂತೆ ಕೋರಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಕೇವಲ ಪತ್ರ ಬರೆಯುವುದು ಮತ್ತು ಅಧಿಕೃತವಾಗಿ ಅರ್ಜಿ ಸಲ್ಲಿಸುವುದು ಇವೆರಡೂ ವಿಭಿನ್ನ ವಿಷಯಗಳು ಎಂದು ತಿಳಿಸಿದರು.

ನ್ಯಾಯಾಲಯವು ಆದೇಶವನ್ನು ನೀಡಿದ ನಂತರ, ಹಿರಿಯ ವಕೀಲ ಸಿಂಘ್ವಿ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಭಾಷಣಗಳಲ್ಲಿ ಸಂಯಮ ಪಾಲಿಸಬೇಕಾದ ಅಗತ್ಯತೆಯ ಕುರಿತು ಕೆಲವು ಸಾಮಾನ್ಯ ಅಭಿಪ್ರಾಯಗಳನ್ನು ಅಥವಾ ಮಾರ್ಗಸೂಚಿಗಳನ್ನು ನೀಡುವಂತೆ ಪೀಠವನ್ನು ವಿನಂತಿಸಿದರು.

ಇದಕ್ಕೆ ನಿರಾಕರಿಸಿದ ಸಿಜೆಐ, “ನಾವು ಈಗಾಗಲೇ ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿರುವುದರಿಂದ, ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನಮ್ಮಲ್ಲಿ ಒಂದು ಅಂತರ್ಗತ ವ್ಯವಸ್ಥೆಯಿದೆ. ಸಾಂವಿಧಾನಿಕ ಚೌಕಟ್ಟು ಒದಗಿಸಿರುವ ಆ ವ್ಯವಸ್ಥೆಯನ್ನು ನಾವೆಲ್ಲರೂ ಗೌರವಿಸೋಣ” ಎಂದರು.

ಪ್ರಕರಣವು ಕೆಳ ಹಂತದ ನ್ಯಾಯಾಲಯದ (ಹೈಕೋರ್ಟ್) ವ್ಯಾಪ್ತಿಗೆ ಹೋದಾಗ, ಅದರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂಬ ನ್ಯಾಯಾಂಗದ ಶಿಸ್ತನ್ನು ಸಿಜೆಐ ಎತ್ತಿಹಿಡಿದರು. ಸಂವಿಧಾನವು ರೂಪಿಸಿರುವ ನ್ಯಾಯಾಂಗ ವ್ಯವಸ್ಥೆಯ ಹಂತಗಳನ್ನು ಗೌರವಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ಪ್ರಕರಣದ ಗುಣಾವಗುಣಗಳ ಬಗ್ಗೆ ಯಾವುದೇ ಮುನ್ಸೂಚನೆ ನೀಡದೆ, ಹೈಕೋರ್ಟ್ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಅವಕಾಶ ನೀಡಲಾಯಿತು.

ಸಿಎಂ ಶರ್ಮಾ ವಿರುದ್ದ ಒಟ್ಟು ಮೂರು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿತ್ತು. ಮೊದಲ ಎರಡು ಅರ್ಜಿಗಳನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) – ಸಿಪಿಐ(ಎಂ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕಿ ಆನ್ನಿ ರಾಜಾ ಅವರು ಸಲ್ಲಿಸಿದ್ದರು. ಮೂರನೇ ಅರ್ಜಿಯನ್ನು ಅಸ್ಸಾಂನ ನಿವೃತ್ತ ಪ್ರಾಧ್ಯಾಪಕ ಮತ್ತು ಬುದ್ಧಿಜೀವಿ ಡಾ. ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹರಿಕೃಷ್ಣ ದೇಕಾ, ಹಿರಿಯ ಪತ್ರಕರ್ತ ಪರೇಶ್ ಚಂದ್ರ ಮಲಕರ್ ಮತ್ತು ಹಿರಿಯ ವಕೀಲ ಶಂತನು ಬೋರ್ಠಾಕೂರ್ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...