Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ;...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

- Advertisement -
- Advertisement -

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸೋಮವಾರ (ಫೆ.16) ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಸಂವಿಧಾನದ 32ನೇ ವಿಧಿಯನ್ನು ಬಳಸಲು ಹಿಂಜರಿಕೆ ವ್ಯಕ್ತಪಡಿಸಿತು. ಅರ್ಜಿದಾರರು ಮೊದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು ಸಂಪರ್ಕಿಸಬೇಕು ಎಂದು ಪೀಠವು ತಿಳಿಸಿತು.

ಹೈಕೋರ್ಟ್‌ಗಳ ಅಧಿಕಾರವನ್ನು ಕಡೆಗಣಿಸಿ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ “ಶಾರ್ಟ್‌ಕಟ್” ಪ್ರವೃತ್ತಿಯನ್ನು ನ್ಯಾಯಪೀಠವು ಟೀಕಿಸಿತು. ಚುನಾವಣೆಗಳು ಸಮೀಪಿಸಿದಾಗ ರಾಜಕೀಯ ಹೋರಾಟಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ನಡೆಸುವ “ಗೊಂದಲಕಾರಿ ಪ್ರವೃತ್ತಿ” ಹೆಚ್ಚುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಬೇಸರ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ಣಯಿಸಲು ಹೈಕೋರ್ಟ್‌ಗೆ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅರ್ಜಿದಾರರ ಮನವಿಯನ್ನು ಆದ್ಯತೆಯ ಮೇಲೆ ಆಲಿಸುವಂತೆ ಗುವಾಹಟಿ ಹೈಕೋರ್ಟ್‌ಗೆ ವಿನಂತಿಸಿತು. ರಾಜಕೀಯ ಪಕ್ಷಗಳು ಪರಸ್ಪರ ಗೌರವ ಮತ್ತು ಸಾಂವಿಧಾನಿಕ ನೈತಿಕತೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯವು ಕರೆ ನೀಡಿತು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಕರಣವು ಕೇವಲ ಅಪರಾಧ ಎಸಗಿರುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಪದವಿಯ ಪ್ರಮಾಣ ವಚನವನ್ನು ಉಲ್ಲಂಘಿಸಿರುವ ಗಂಭೀರ ವಿಷಯವಾಗಿದೆ ಎಂದು ಪ್ರತಿಪಾದಿಸಿದರು.

ಇದು ಸಂವಿಧಾನದ 32ನೇ ವಿಧಿಯನ್ನು ಬಳಸಲು ಅತ್ಯಂತ ಯೋಗ್ಯವಾದ ಪ್ರಕರಣವಾಗಿದೆ. ದೇಶದ ಸಾಂವಿಧಾನಿಕ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾದಾಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಸಿಂಘ್ವಿ ವಾದಿಸಿದರು.

ಅರ್ಜಿದಾರರು ಅಸ್ಸಾಂ ಮುಖ್ಯಮಂತ್ರಿಯ ವಿರುದ್ಧವೇ ವಿಶೇಷ ತನಿಖಾ ತಂಡ (ಎಸ್ಐಟಿ) ಮೂಲಕ ತನಿಖೆ ನಡೆಸಬೇಕೆಂದು ಕೋರುತ್ತಿದ್ದಾರೆ. ರಾಜ್ಯದ ಆಡಳಿತ ಮುಖ್ಯಸ್ಥರ ವಿರುದ್ಧ ತನಿಖೆ ನಡೆಯಬೇಕಿರುವುದರಿಂದ, ಹೈಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಸಿಗದೇ ಇರಬಹುದು ಎಂಬ ಆತಂಕವನ್ನು ಸಿಂಘ್ವಿ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೇವಲ ಅಸ್ಸಾಂನಲ್ಲಿ ಮಾತ್ರವಲ್ಲದೆ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲೂ ಇಂತಹ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಆದ್ದರಿಂದ ಇದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾದ ವಿಷಯವಲ್ಲ, ಇಡೀ ದೇಶಕ್ಕೆ ಸಂಬಂಧಿಸಿದೆ ನ್ಯಾಯಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪೀಠವು, ಹೈಕೋರ್ಟ್‌ಗಳ ಮೇಲೆ ನಂಬಿಕೆ ಇಡಬೇಕು ಮತ್ತು ಅವುಗಳನ್ನು ಕಡೆಗಣಿಸಬಾರದು ಎಂದು ಸೂಚಿಸಿತು. ಹೈಕೋರ್ಟ್‌ಗಳು ಕೂಡ ಎಸ್‌ಐಟಿ ತನಿಖೆಗೆ ಆದೇಶಿಸುವ ಅಧಿಕಾರ ಹೊಂದಿವೆ ಎಂದು ಸಿಜೆಐ ಸೂರ್ಯ ಕಾಂತ್ ಸ್ಪಷ್ಟಪಡಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬರು ವಕೀಲ ನಿಝಾಮ್ ಪಾಷಾ, ಹೈಕೋರ್ಟ್ ಅಸ್ಸಾಂನ ಹೊರಗಿನ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸಬೇಕಾಗಬಹುದು ಎಂದು ವಾದಿಸಿದರು. ಹೈಕೋರ್ಟ್ ಕೂಡ ಅಂತಹ ಆದೇಶವನ್ನು ನೀಡಬಹುದು ಎಂದು ಸಿಜೆಐ ಹೇಳಿದರು ಮತ್ತು ಹೈಕೋರ್ಟ್ ನ್ಯಾಯಾಧೀಶರಾಗಿ ತಾನು ಅಂತಹ ನಿರ್ದೇಶನವನ್ನು ನೀಡಿರುವುದಾಗಿ ನೆನಪಿಸಿಕೊಂಡರು.

ನಾಲ್ವರು ಅಸ್ಸಾಮಿ ವ್ಯಕ್ತಿಗಳ ಪರವಾಗಿ ವಾದಿಸಿದ ವಕೀಲ ನಿಝಾಮ್ ಪಾಷಾ, ತಾನು ಈಗಾಗಲೇ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಈ ವಿಷಯದಲ್ಲಿ ಸ್ವಯಂಪ್ರೇರಿತ ಹಸ್ತಕ್ಷೇಪ ಮಾಡುವಂತೆ ಕೋರಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಕೇವಲ ಪತ್ರ ಬರೆಯುವುದು ಮತ್ತು ಅಧಿಕೃತವಾಗಿ ಅರ್ಜಿ ಸಲ್ಲಿಸುವುದು ಇವೆರಡೂ ವಿಭಿನ್ನ ವಿಷಯಗಳು ಎಂದು ತಿಳಿಸಿದರು.

ನ್ಯಾಯಾಲಯವು ಆದೇಶವನ್ನು ನೀಡಿದ ನಂತರ, ಹಿರಿಯ ವಕೀಲ ಸಿಂಘ್ವಿ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಭಾಷಣಗಳಲ್ಲಿ ಸಂಯಮ ಪಾಲಿಸಬೇಕಾದ ಅಗತ್ಯತೆಯ ಕುರಿತು ಕೆಲವು ಸಾಮಾನ್ಯ ಅಭಿಪ್ರಾಯಗಳನ್ನು ಅಥವಾ ಮಾರ್ಗಸೂಚಿಗಳನ್ನು ನೀಡುವಂತೆ ಪೀಠವನ್ನು ವಿನಂತಿಸಿದರು.

ಇದಕ್ಕೆ ನಿರಾಕರಿಸಿದ ಸಿಜೆಐ, “ನಾವು ಈಗಾಗಲೇ ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿರುವುದರಿಂದ, ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನಮ್ಮಲ್ಲಿ ಒಂದು ಅಂತರ್ಗತ ವ್ಯವಸ್ಥೆಯಿದೆ. ಸಾಂವಿಧಾನಿಕ ಚೌಕಟ್ಟು ಒದಗಿಸಿರುವ ಆ ವ್ಯವಸ್ಥೆಯನ್ನು ನಾವೆಲ್ಲರೂ ಗೌರವಿಸೋಣ” ಎಂದರು.

ಪ್ರಕರಣವು ಕೆಳ ಹಂತದ ನ್ಯಾಯಾಲಯದ (ಹೈಕೋರ್ಟ್) ವ್ಯಾಪ್ತಿಗೆ ಹೋದಾಗ, ಅದರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂಬ ನ್ಯಾಯಾಂಗದ ಶಿಸ್ತನ್ನು ಸಿಜೆಐ ಎತ್ತಿಹಿಡಿದರು. ಸಂವಿಧಾನವು ರೂಪಿಸಿರುವ ನ್ಯಾಯಾಂಗ ವ್ಯವಸ್ಥೆಯ ಹಂತಗಳನ್ನು ಗೌರವಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ಪ್ರಕರಣದ ಗುಣಾವಗುಣಗಳ ಬಗ್ಗೆ ಯಾವುದೇ ಮುನ್ಸೂಚನೆ ನೀಡದೆ, ಹೈಕೋರ್ಟ್ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಅವಕಾಶ ನೀಡಲಾಯಿತು.

ಸಿಎಂ ಶರ್ಮಾ ವಿರುದ್ದ ಒಟ್ಟು ಮೂರು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿತ್ತು. ಮೊದಲ ಎರಡು ಅರ್ಜಿಗಳನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) – ಸಿಪಿಐ(ಎಂ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕಿ ಆನ್ನಿ ರಾಜಾ ಅವರು ಸಲ್ಲಿಸಿದ್ದರು. ಮೂರನೇ ಅರ್ಜಿಯನ್ನು ಅಸ್ಸಾಂನ ನಿವೃತ್ತ ಪ್ರಾಧ್ಯಾಪಕ ಮತ್ತು ಬುದ್ಧಿಜೀವಿ ಡಾ. ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹರಿಕೃಷ್ಣ ದೇಕಾ, ಹಿರಿಯ ಪತ್ರಕರ್ತ ಪರೇಶ್ ಚಂದ್ರ ಮಲಕರ್ ಮತ್ತು ಹಿರಿಯ ವಕೀಲ ಶಂತನು ಬೋರ್ಠಾಕೂರ್ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...