Homeಮುಖಪುಟವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಕಾರ್ಯದರ್ಶಿ ಮತ್ತು ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ನ್ಯಾಯಾಲಯ ‘ಶೋಕಾಸ್ ನೋಟಿಸ್’ ಜಾರಿ ಮಾಡಿದೆ. ಈ ವಿಚಾರದಲ್ಲಿ ನಿಮ್ಮ ಮೇಲೆ ನ್ಯಾಯಾಂಗ ನಿಂದನೆ ಕಾಯ್ದೆ ಅಥವಾ ಇತರ ಕಾನೂನುಗಳ ಅಡಿಯಲ್ಲಿ ಯಾಕೆ ಕ್ರಮ ಕೈಗೊಳ್ಳಬಾರದು? ಎಂದು ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು livelaw.in ವರದಿ ಮಾಡಿದೆ.

ಪಠ್ಯಪುಸ್ತಕದ ವಿಷಯವು ಮೇಲ್ನೋಟಕ್ಕೆ ‘ಗಂಭೀರ ದುರ್ನಡತೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ವೇಳೆ ಈ ವಿಷಯವನ್ನು ಉದ್ದೇಶಪೂರ್ವಕವಾಗಿ ನ್ಯಾಯಾಂಗದ ಘನತೆಯನ್ನು ಕುಂದಿಸಲು ಅಥವಾ ನ್ಯಾಯಾಂಗವನ್ನು ಅವಮಾನಿಸಲು ಸೇರಿಸಲಾಗಿದೆ ಎಂದು ಸಾಬೀತಾದರೆ, ಇದು ‘ಕ್ರಿಮಿನಲ್ ನ್ಯಾಯಾಂಗ ನಿಂದನೆ’ ವ್ಯಾಪ್ತಿಗೆ ಬರುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ. ಅಂದರೆ, ನ್ಯಾಯಾಂಗ ವ್ಯವಸ್ಥೆಯ ಮೇಲಿರುವ ಸಾರ್ವಜನಿಕ ನಂಬಿಕೆಗೆ ಧಕ್ಕೆ ತರುವ ಪ್ರಯತ್ನ ಇದಾಗಿದೆಯೇ ಎಂಬ ಬಗ್ಗೆ ನ್ಯಾಯಾಲಯವು ತನಿಖೆ ನಡೆಸಲಿದೆ.

ಪುಸ್ತಕದ ಮೇಲೆ ನಿಷೇಧ ಹೇರಿದ ಕೋರ್ಟ್, ಎಲ್ಲಾ ಮುದ್ರಿತ ಪ್ರತಿಗಳು ವಶಪಡಿಸಿಕೊಳ್ಳಲು ಮತ್ತು ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕಲು ಆದೇಶ

ಪಠ್ಯಪುಸ್ತಕದ ಪ್ರಕಟಣೆ, ಮರುಮುದ್ರಣ ಮತ್ತು ಡಿಜಿಟಲ್ ರೂಪದ ಪ್ರಸಾರವನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿಷೇಧಿಸಿದೆ. ವಿವಾದಾತ್ಮಕ ವಿಷಯವನ್ನು ಯಾವುದೇ ರೂಪದಲ್ಲಿ ಹಂಚಿಕೊಳ್ಳುವುದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಸಿದೆ. “ಈ ಪುಸ್ತಕವನ್ನು ಮುದ್ರಿತ ಅಥವಾ ಡಿಜಿಟಲ್ ರೂಪದಲ್ಲಿ ವಿತರಿಸುವ ಯಾವುದೇ ಪ್ರಯತ್ನವನ್ನು ನ್ಯಾಯಾಲಯದ ಆದೇಶದ ಉದ್ದೇಶಪೂರ್ವಕ ಉಲ್ಲಂಘನೆ ಎಂದು ಪರಿಗಣಿಸಲಾಗುವುದು” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಅಂದರೆ, ಈ ಪಠ್ಯದ ಯಾವುದೇ ಪಿಡಿಎಫ್ ಅಥವಾ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಕೂಡ ಕಾನೂನುಬಾಹಿರ ಕ್ರಮವಾಗುತ್ತದೆ.

ವಿವಾದಾತ್ಮಕ ವಿಷಯವಿರುವ ಪಠ್ಯಪುಸ್ತಕದ ಎಲ್ಲಾ ಮುದ್ರಿತ ಪ್ರತಿಗಳನ್ನು ಕೂಡಲೇ ವಶಪಡಿಸಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಮಾರಾಟ ಮಳಿಗೆಗಳಲ್ಲಿ ಅಥವಾ ಶಾಲೆಗಳಲ್ಲಿ ಇರುವ ಈ ಪುಸ್ತಕದ ಎಲ್ಲಾ ಹಾರ್ಡ್ ಮತ್ತು ಸಾಫ್ಟ್ ಪ್ರತಿಗಳನ್ನು ಸಾರ್ವಜನಿಕ ಲಭ್ಯತೆಯಿಂದ ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಎನ್‌ಸಿಇಆರ್‌ಟಿಗೆ ನಿರ್ದೇಶನ ನೀಡಿದೆ.

ಎಲ್ಲಾ ಮುದ್ರಿತ ಮತ್ತು ಡಿಜಿಟಲ್ ವೇದಿಕೆಗಳಿಂದ ಪುಸ್ತಕವನ್ನು ತಕ್ಷಣವೇ ತೆಗೆದುಹಾಕಬೇಕು. ಶಾಲೆಗಳಿಗೆ ಈಗಾಗಲೇ ಕಳುಹಿಸಲಾದ ಪುಸ್ತಕಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವ ಜವಾಬ್ದಾರಿಯನ್ನು ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ವಹಿಸಲಾಗಿದ್ದು, ಈ ಬಗ್ಗೆ ನ್ಯಾಯಾಲಯಕ್ಕೆ ಅನುಸರಣಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ವಿವಾದಾತ್ಮಕ ವಿಷಯವಿರುವ ಪಠ್ಯಪುಸ್ತಕದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಬೋಧನೆ ಅಥವಾ ಸೂಚನೆಗಳನ್ನು ನೀಡಬಾರದು ಎಂದು ನ್ಯಾಯಾಲಯವು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಈಗಾಗಲೇ ಈ ಪುಸ್ತಕದ ಪ್ರತಿಗಳನ್ನು ಹೊಂದಿರುವ ಶಾಲೆಗಳು ಅಥವಾ ಶಿಕ್ಷಕರು, ಅದರಲ್ಲಿನ ಮುದ್ರಿತ ಅಥವಾ ಡಿಜಿಟಲ್ ಮಾಹಿತಿಯನ್ನು ಬಳಸಿ ಪಾಠ ಮಾಡುವಂತಿಲ್ಲ ಎಂದು ಸೂಚಿಸಿದೆ. ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನ್ಯಾಯಾಲಯ ನೀಡಿದ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಎರಡು ವಾರಗಳಲ್ಲಿ ಅನುಸರಣಾ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪಠ್ಯ ಸಿದ್ದಪಡಿಸಿದವರ ಹೆಸರು ನೀಡಲು ಎನ್‌ಸಿಇಆರ್‌ಟಿಗೆ ಸೂಚನೆ

ವಿವಾದಾತ್ಮಕ ಪಠ್ಯವನ್ನು ಸಿದ್ದಪಡಿಸಿದ ವ್ಯಕ್ತಿಗಳ ಹೆಸರು ನೀಡುವಂತೆ ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಕೇವಲ ಹೆಸರುಗಳನ್ನು ಮಾತ್ರವಲ್ಲದೆ, ಈ ಅಧ್ಯಾಯವನ್ನು ಸಿದ್ಧಪಡಿಸಿದ ತಂಡದ ಸದಸ್ಯರ ಅರ್ಹತೆ ಮತ್ತು ಹಿನ್ನೆಲೆಯನ್ನು ಒದಗಿಸುವಂತೆಯೂ ಕೋರ್ಟ್ ಸೂಚಿಸಿದೆ. ಅಷ್ಟೇ ಅಲ್ಲದೆ, ಈ ಅಧ್ಯಾಯದ ಬಗ್ಗೆ ಚರ್ಚಿಸಿ ಅದನ್ನು ಅಂತಿಮಗೊಳಿಸಿದ ಸಭೆಗಳ ಮೂಲ ನಡಾವಳಿಗಳನ್ನು ಮುಂದಿನ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರಿದ್ದ ಪೀಠವು ಪುಸ್ತಕವನ್ನು ಪುಸ್ತಕದ ಕುರಿತು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದಲ್ಲಿ ಈ ಆದೇಶ ನೀಡಿದೆ.

ಎನ್‌ಸಿಇಆರ್‌ಟಿ ನಿರ್ದೇಶಕರ ಉತ್ತರ ತಿರಸ್ಕಾರಾರ್ಹ; ನ್ಯಾಯಾಂಗವನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ

ಈ ಪಠ್ಯಪುಸ್ತಕದ ಅಧ್ಯಾಯದಲ್ಲಿ ನ್ಯಾಯಾಧೀಶರ ವಿರುದ್ಧ ಬಂದಿರುವ ದೂರುಗಳ ಸಂಖ್ಯೆಯನ್ನು ಉಲ್ಲೇಖಿಸಲಾಗಿದೆ. ಆದರೆ, ಆ ದೂರುಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ತಪ್ಪು ಅಭಿಪ್ರಾಯ ಮೂಡುವಂತೆ ಇದನ್ನು ಪ್ರಸ್ತುತಪಡಿಸಲಾಗಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಅಲ್ಲದೆ, ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನೀಡಿದ್ದ ಹೇಳಿಕೆಗಳನ್ನು ಪಠ್ಯದಲ್ಲಿ ತಪ್ಪಾಗಿ ಬಳಸಿಕೊಳ್ಳಲಾಗಿದೆ. ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಇರುವುದನ್ನು ಒಪ್ಪಿಕೊಂಡಿದ್ದಾರೆ ಎಂಬಂತೆ ಬಿಂಬಿಸಲು ಅವರ ಮಾತುಗಳನ್ನು ಸಂದರ್ಭಕ್ಕೆ ಹೊರತಾಗಿ (out of context) ಬಳಸಲಾಗಿದೆ ಎಂದು ನ್ಯಾಯಪೀಠವು ಆಕ್ಷೇಪ ವ್ಯಕ್ತಪಡಿಸಿದೆ.

ಪಠ್ಯಪುಸ್ತಕದ ವಿವಾದಾತ್ಮಕ ವಿಷಯವನ್ನು ಸಮರ್ಥಿಸಿಕೊಳ್ಳುತ್ತಾ ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ಗೆ ಪತ್ರ ಬರೆದಿದ್ದ ಎನ್‌ಸಿಇಆರ್‌ಟಿ ನಿರ್ದೇಶಕರ ಕ್ರಮಕ್ಕೆ ನ್ಯಾಯಪೀಠ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕರು ನೀಡಿದ ಈ ಉತ್ತರವು “ನ್ಯಾಯಾಂಗ ನಿಂದನೆಯಿಂದ ಕೂಡಿದೆ ಮತ್ತು ಬೇಜವಾಬ್ದಾರಿತನದ್ದು” ಎಂದು ನ್ಯಾಯಾಲಯವು ಬಣ್ಣಿಸಿದೆ. ನ್ಯಾಯಾಲಯದ ಆದೇಶವನ್ನು ಗೌರವಿಸುವ ಬದಲು, ತಪ್ಪನ್ನು ಸಮರ್ಥಿಸಲು ಪ್ರಯತ್ನಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಈ ಪಠ್ಯದ ಪ್ರಕಟಣೆಯು ಕೇವಲ ಆಕಸ್ಮಿಕವಲ್ಲ, ಬದಲಿಗೆ “ನ್ಯಾಯಾಂಗದ ಸಾಂಸ್ಥಿಕ ಅಧಿಕಾರವನ್ನು ಕುಂದಿಸಲು ಮತ್ತು ವ್ಯವಸ್ಥೆಯ ಘನತೆಯನ್ನು ಕೆಡಿಸಲು ಮಾಡಿದ ಲೆಕ್ಕಾಚಾರದ ನಡೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಇಂತಹ ವಿಷಯಗಳನ್ನು ಪರಿಶೀಲಿಸದೆ ಪ್ರಕಟಿಸಲು ಬಿಟ್ಟರೆ, ಸಾರ್ವಜನಿಕರಲ್ಲಿ ನ್ಯಾಯಾಂಗದ ಮೇಲಿರುವ ಗೌರವ ಕಡಿಮೆಯಾಗುತ್ತದೆ. ವಿಶೇಷವಾಗಿ, ವಿಷಯಗಳನ್ನು ಬೇಗನೆ ಗ್ರಹಿಸುವ ಎಳೆಯ ಮನಸ್ಸುಗಳಲ್ಲಿ ನ್ಯಾಯಾಂಗದ ಬಗ್ಗೆ ತಪ್ಪು ಕಲ್ಪನೆ ಮೂಡಿಸಿ, ಸಾಂಸ್ಥಿಕ ಘನತೆಯನ್ನು ಕುಸಿಯುವಂತೆ ಮಾಡುತ್ತದೆ ಎಂದು ಪೀಠವು ಆತಂಕ ವ್ಯಕ್ತಪಡಿಸಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನ್ಯಾಯಾಂಗವು ಕೈಗೊಂಡಿರುವ ಉದಾತ್ತ ಕ್ರಮಗಳು ಮತ್ತು ಅದರ ಕೊಡುಗೆಗಳ ಬಗ್ಗೆ ಪಠ್ಯದಲ್ಲಿ ಯಾವುದೇ ಉಲ್ಲೇಖವಿಲ್ಲದಿರುವುದನ್ನು ಕೋರ್ಟ್ ಪ್ರಶ್ನಿಸಿದೆ. ಭ್ರಷ್ಟಾಚಾರ ಮತ್ತು ಸಾರ್ವಜನಿಕ ಹಣದ ದುರುಪಯೋಗಕ್ಕಾಗಿ ಈ ನ್ಯಾಯಾಲಯವು ಅನೇಕ ಉನ್ನತ ಅಧಿಕಾರಿಗಳನ್ನು ಶಿಕ್ಷಿಸಿರುವಾಗ, ಆ ಬಗ್ಗೆ ಮೌನ ವಹಿಸಿರುವುದು ಅಕ್ಷಮ್ಯ ಎಂದು ಪೀಠ ಹೇಳಿದೆ.

ಪುಸ್ತಕದಲ್ಲಿ ಬಳಸಿರುವ ಪದಪ್ರಯೋಗಗಳು ಕೇವಲ ಅಚಾತುರ್ಯ ಅಥವಾ ಅಚಾನಕ್ ತಪ್ಪು ಆಗಿರಲಿಕ್ಕಿಲ್ಲ ಎಂದು ಕೋರ್ಟ್ ಶಂಕಿಸಿದೆ. ಆದಾಗ್ಯೂ, ನ್ಯಾಯಾಂಗ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳ ಮೇಲಿನ ನ್ಯಾಯಸಮ್ಮತ ಟೀಕೆಗಳನ್ನು ಹತ್ತಿಕ್ಕಲು ನಾವು ಈ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...