Homeಮುಖಪುಟ'ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ': ಸುಪ್ರೀಂ ಕೋರ್ಟ್‌

‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್‌

ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆ ಎಂದ ಕೋರ್ಟ್, ಮಥೆರಾನ್‌ನಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳು ನಿಷೇಧ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ, ಕೈಯಿಂದ ಎಳೆಯುವ ಬಂಡಿಗಳು/ರಿಕ್ಷಾಗಳ ಪದ್ಧತಿ ಮುಂದುವರೆದಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, “ಇದು ಅಮಾನವೀಯ, ರದ್ದುಗೊಳಿಸುವ ಅಗತ್ಯವಿದೆ” ಎಂದು ಬುಧವಾರ (ಆ.6) ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರದ ಮಥೆರಾನ್ ಬೆಟ್ಟದ ಪಟ್ಟಣದಲ್ಲಿ ಪ್ರಾಯೋಗಿಕ ಇ-ರಿಕ್ಷಾ ಯೋಜನೆಯ ಕುರಿತಾದ ಸಮಸ್ಯೆಗಳನ್ನು ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಆಲಿಸಿತು.

ಸ್ವಾತಂತ್ರ್ಯ ಬಂದು 78 ವರ್ಷಗಳ ನಂತರವೂ ಕೈಯಿಂದ ಎಳೆಯುವ ಬಂಡಿಗಳ ಪದ್ಧತಿ ಮುಂದುವರೆದಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಜೀವನೋಪಾಯಕ್ಕಾಗಿ ಜನರು ಇಂತಹ ಅಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ.

ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಮಾನವ ಘನತೆಯ ಮೂಲ ಪರಿಕಲ್ಪನೆಗೆ ವಿರುದ್ಧವಾದ ಇಂತಹ ಪದ್ಧತಿಗೆ ಅವಕಾಶ ನೀಡುವುದು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಸಾಂವಿಧಾನಿಕ ಭರವಸೆಗಳನ್ನು ಕುಂದಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ (ನೋಂದಣಿ) ವರ್ಸಸ್ ಪಂಜಾಬ್ ರಾಜ್ಯ ಮತ್ತು ಇತರೆ ಪ್ರಕರಣದ ತೀರ್ಪನ್ನು ಪೀಠವು ಉಲ್ಲೇಖಿಸಿದ್ದು, ಕೈಯಿಂದ ಎಳೆಯುವ ರಿಕ್ಷಾಗೆ ಅನುಮತಿಸುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ಹೊಂದಾಣಿಕೆಯಾಗುವುದಿಲ್ಲ ಎಂದಿದೆ.

“ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ ಪ್ರಕರಣದಲ್ಲಿ ಈ ನ್ಯಾಯಾಲಯವು ಅಭಿಪ್ರಾಯಗಳನ್ನು ತಿಳಿಸಿದ 45 ವರ್ಷಗಳ ನಂತರವೂ, ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಎಳೆಯುವ ಪದ್ಧತಿ ಮಥೆರಾನ್ ಪಟ್ಟಣದಲ್ಲಿ ಇನ್ನೂ ಪ್ರಚಲಿತದಲ್ಲಿದೆ ಎಂಬುದು ನಿಜಕ್ಕೂ ದುರದೃಷ್ಟಕರ” ಎಂದು ನ್ಯಾಯಾಲಯ ಹೇಳಿದೆ.

ಇಂದಿನ ಕಾಲದಲ್ಲೂ ಹಸ್ತಚಾಲಿತ ರಿಕ್ಷಾಗಳಿಗೆ ಅವಕಾಶ ನೀಡುವುದು ಭಾರತದ ಜನರು ತಮಗೆ ತಾವೆ ಅಳವಡಿಸಿಕೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಭರವಸೆಗೆ ದ್ರೋಹ ಬಗೆದಂತೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಸಂವಿಧಾನದ ವಿಧಿ 23ಕ್ಕೆ ವಿಸ್ತೃತ ವ್ಯಾಖ್ಯಾನ ಹೇಳಿದ ಪೀಪಲ್ ಆಫ್ ಇಂಡಿಯಾ ಫಾರ್ ಡೆಮಾಕ್ರಟಿಕ್ ರೈಟ್ಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನೂ ಕೂಡ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಈ ಪ್ರಕರಣವು 1982ರ ಏಷ್ಯನ್ ಕ್ರೀಡಾಕೂಟದ ನಿರ್ಮಾಣ ಯೋಜನೆಗಳ ಸಮಯದಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆಯ ವಿಷಯಕ್ಕೆ ಸಂಬಂಧಿಸಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸದಿರುವುದು ಬಲವಂತದ ದುಡಿಮೆಗೆ ಸಮಾನವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಕೈಯಿಂದ ಎಳೆಯುವ ರಿಕ್ಷಾ ಪದ್ದತಿಯನ್ನು ನಿಷೇಧ ಮಾಡಿದರೆ ಜನರು ಜೀವನೋಪಾಯಕ್ಕೆ ಏನು ಮಾಡುವುದು ಎಂಬ ಪ್ರಶ್ನೆಗೂ ಸುಪ್ರೀಂ ಕೋರ್ಟ್ ಉತ್ತರ ಕೊಟ್ಟಿದ್ದು, ಇ-ರಿಕ್ಷಾ ಇದಕ್ಕೆ ಪರ್ಯಾಯ ವ್ಯವಸ್ಥೆಯಾಗಿದ್ದು, ಈ ಸಂಬಂಧ ಯೋಜನೆ ಜಾರಿಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ಮಥೆರಾನ್ ಪಟ್ಟಣದಲ್ಲಿರುವ ಕೈ ರಿಕ್ಷಾ ಎಳೆಯುವವರಿಗೆ ಪುನರ್ವಸತಿ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಗುಜರಾತ್‌ನ ಕೆವಾಡಿಯಾದಲ್ಲಿ ಇರುವಂತೆ ಇ-ರಿಕ್ಷಾ ನೀತಿಯನ್ನು ಅಳವಡಿಸಿಕೊಳ್ಳುಲು ಸೂಚಿಸಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಹಣದ ಕೊರತೆಯು ಅಡ್ಡಿಯಾಗಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಪರಿಸರದ ಕಾಳಜಿಯಿಂದಾಗಿ ಮಥೆರಾನ್‌ನಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್‌ಗಳು ಮಾತ್ರ ಪಟ್ಟಣಕ್ಕೆ ಪ್ರವೇಶಿಸಬಹುದಾಗಿದೆ.

ಗಮನಾರ್ಹವಾಗಿ, ಫೆಬ್ರವರಿಯಲ್ಲಿ, ಪಾದಚಾರಿ ಬೆಟ್ಟದ ಪಟ್ಟಣವಾದ ಮಥೆರಾನ್‌ನಲ್ಲಿ ಮೂಲ ಕೈಗಾಡಿ ಎಳೆಯುವವರಿಗೆ 20 ಇ-ರಿಕ್ಷಾ ಪರವಾನಗಿಗಳನ್ನು ನೀಡುವ ಪ್ರಕ್ರಿಯೆಯನ್ನು ಮರುಪರಿಶೀಲಿಸುವ ಪ್ರಸ್ತಾವನೆಯನ್ನು ಸಲ್ಲಿಸಲು ನ್ಯಾಯಾಲಯವು ಮಹಾರಾಷ್ಟ್ರ ರಾಜ್ಯಕ್ಕೆ 2 ವಾರಗಳ ಕಾಲಾವಕಾಶ ನೀಡಿತ್ತು.

ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ಸಹ ನೀಡಿದೆ:

(1) ದಸ್ತೂರಿ ನಾಕಾ (ಬಸ್ ನಿಲ್ದಾಣ) ದಿಂದ ಮಥೆರಾನ್‌ನಲ್ಲಿರುವ ಶಿವಾಜಿ ಪ್ರತಿಮೆಯವರೆಗೆ ರಾಜ್ಯ ಸರ್ಕಾರ ಪೇವರ್ ಬ್ಲಾಕ್‌ಗಳನ್ನು ಹಾಕಬಹುದು.

(2) ಆಂತರಿಕ ರಸ್ತೆ ಮತ್ತು ವ್ಯಾಪಾರ ಮಾರ್ಗಗಳಲ್ಲಿ ಯಾವುದೇ ಪೇವರ್ ಬ್ಲಾಕ್‌ಗಳನ್ನು ಹಾಕಬಾರದು.

(3) ಇಂದಿನಿಂದ (ಆ.6) 6 ತಿಂಗಳ ಅವಧಿಯಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳ ಪದ್ದತಿಯನ್ನು ಹಂತ ಹಂತವಾಗಿ ನಿಲ್ಲಿಸಬೇಕು.

(4) ಮಹಾರಾಷ್ಟ್ರ ಸರ್ಕಾರ ಗುಜರಾತ್‌ನ ಕೆವಾಡಿಯಾದಲ್ಲಿರುವಂತೆ ಇ-ರಿಕ್ಷಾಗಳನ್ನು ಖರೀದಿಸಿ ನಿಜವಾದ ರಿಕ್ಷಾ ಎಳೆಯುವವರಿಗೆ ಬಾಡಿಗೆ ಆಧಾರದ ಮೇಲೆ ನೀಡುವ ಯೋಜನೆಯಂತೆ ಒಂದು ಯೋಜನೆಯನ್ನು ರೂಪಿಸಬೇಕು.

(5) ನಿಜವಾದ ರಿಕ್ಷಾ ಚಾಲಕರನ್ನು ಗುರುತಿಸಲು ಪರಿಸರ ಸೂಕ್ಷ್ಮ ವಲಯದ ಅಡಿಯಲ್ಲಿ ರಚಿಸಲಾದ ಮಥೆರಾನ್ ಕಲೆಕ್ಟರ್ ಅಧ್ಯಕ್ಷತೆಯ ಮಥೆರಾನ್ ಮೇಲ್ವಿಚಾರಣಾ ಸಮಿತಿ ಮೂಲಭೂತ ವಾಸ್ತವಗಳನ್ನು ಪರಿಗಣಿಸಿದ ನಂತರ ಅಗತ್ಯವಿರುವ ಇ-ರಿಕ್ಷಾಗಳ ಸಂಖ್ಯೆಯನ್ನು ನಿರ್ಧರಿಸಬೇಕು. 

(6) ಉಳಿದ ಇ-ರಿಕ್ಷಾಗಳನ್ನು ಬುಡಕಟ್ಟು ಮಹಿಳೆಯರು ಮತ್ತು ಮಥೆರಾನ್‌ನ ಇತರ ವ್ಯಕ್ತಿಗಳಿಗೆ ಹಂಚಿಕೆ ಮಾಡುವುದರಿಂದ ಅವರ ಜೀವನೋಪಾಯ ಸ್ಥಿರವಾಗಿರುತ್ತದೆ. 

(7) ಈಗಾಗಲೇ ಹಾಕಿರುವ ಕಾಂಕ್ರೀಟ್ ಬ್ಲಾಕ್‌ಗಳನ್ನು ಪೇವರ್ ಬ್ಲಾಕ್‌ಗಳಿಗೆ ಬದಲಾಯಿಸಬೇಕು. 

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...