Homeಮುಖಪುಟ'ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ': ಸುಪ್ರೀಂ ಕೋರ್ಟ್‌

‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್‌

ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆ ಎಂದ ಕೋರ್ಟ್, ಮಥೆರಾನ್‌ನಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳು ನಿಷೇಧ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ, ಕೈಯಿಂದ ಎಳೆಯುವ ಬಂಡಿಗಳು/ರಿಕ್ಷಾಗಳ ಪದ್ಧತಿ ಮುಂದುವರೆದಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, “ಇದು ಅಮಾನವೀಯ, ರದ್ದುಗೊಳಿಸುವ ಅಗತ್ಯವಿದೆ” ಎಂದು ಬುಧವಾರ (ಆ.6) ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರದ ಮಥೆರಾನ್ ಬೆಟ್ಟದ ಪಟ್ಟಣದಲ್ಲಿ ಪ್ರಾಯೋಗಿಕ ಇ-ರಿಕ್ಷಾ ಯೋಜನೆಯ ಕುರಿತಾದ ಸಮಸ್ಯೆಗಳನ್ನು ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಆಲಿಸಿತು.

ಸ್ವಾತಂತ್ರ್ಯ ಬಂದು 78 ವರ್ಷಗಳ ನಂತರವೂ ಕೈಯಿಂದ ಎಳೆಯುವ ಬಂಡಿಗಳ ಪದ್ಧತಿ ಮುಂದುವರೆದಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಜೀವನೋಪಾಯಕ್ಕಾಗಿ ಜನರು ಇಂತಹ ಅಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ.

ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಮಾನವ ಘನತೆಯ ಮೂಲ ಪರಿಕಲ್ಪನೆಗೆ ವಿರುದ್ಧವಾದ ಇಂತಹ ಪದ್ಧತಿಗೆ ಅವಕಾಶ ನೀಡುವುದು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಸಾಂವಿಧಾನಿಕ ಭರವಸೆಗಳನ್ನು ಕುಂದಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ (ನೋಂದಣಿ) ವರ್ಸಸ್ ಪಂಜಾಬ್ ರಾಜ್ಯ ಮತ್ತು ಇತರೆ ಪ್ರಕರಣದ ತೀರ್ಪನ್ನು ಪೀಠವು ಉಲ್ಲೇಖಿಸಿದ್ದು, ಕೈಯಿಂದ ಎಳೆಯುವ ರಿಕ್ಷಾಗೆ ಅನುಮತಿಸುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ಹೊಂದಾಣಿಕೆಯಾಗುವುದಿಲ್ಲ ಎಂದಿದೆ.

“ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ ಪ್ರಕರಣದಲ್ಲಿ ಈ ನ್ಯಾಯಾಲಯವು ಅಭಿಪ್ರಾಯಗಳನ್ನು ತಿಳಿಸಿದ 45 ವರ್ಷಗಳ ನಂತರವೂ, ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಎಳೆಯುವ ಪದ್ಧತಿ ಮಥೆರಾನ್ ಪಟ್ಟಣದಲ್ಲಿ ಇನ್ನೂ ಪ್ರಚಲಿತದಲ್ಲಿದೆ ಎಂಬುದು ನಿಜಕ್ಕೂ ದುರದೃಷ್ಟಕರ” ಎಂದು ನ್ಯಾಯಾಲಯ ಹೇಳಿದೆ.

ಇಂದಿನ ಕಾಲದಲ್ಲೂ ಹಸ್ತಚಾಲಿತ ರಿಕ್ಷಾಗಳಿಗೆ ಅವಕಾಶ ನೀಡುವುದು ಭಾರತದ ಜನರು ತಮಗೆ ತಾವೆ ಅಳವಡಿಸಿಕೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಭರವಸೆಗೆ ದ್ರೋಹ ಬಗೆದಂತೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಸಂವಿಧಾನದ ವಿಧಿ 23ಕ್ಕೆ ವಿಸ್ತೃತ ವ್ಯಾಖ್ಯಾನ ಹೇಳಿದ ಪೀಪಲ್ ಆಫ್ ಇಂಡಿಯಾ ಫಾರ್ ಡೆಮಾಕ್ರಟಿಕ್ ರೈಟ್ಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನೂ ಕೂಡ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಈ ಪ್ರಕರಣವು 1982ರ ಏಷ್ಯನ್ ಕ್ರೀಡಾಕೂಟದ ನಿರ್ಮಾಣ ಯೋಜನೆಗಳ ಸಮಯದಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆಯ ವಿಷಯಕ್ಕೆ ಸಂಬಂಧಿಸಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸದಿರುವುದು ಬಲವಂತದ ದುಡಿಮೆಗೆ ಸಮಾನವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಕೈಯಿಂದ ಎಳೆಯುವ ರಿಕ್ಷಾ ಪದ್ದತಿಯನ್ನು ನಿಷೇಧ ಮಾಡಿದರೆ ಜನರು ಜೀವನೋಪಾಯಕ್ಕೆ ಏನು ಮಾಡುವುದು ಎಂಬ ಪ್ರಶ್ನೆಗೂ ಸುಪ್ರೀಂ ಕೋರ್ಟ್ ಉತ್ತರ ಕೊಟ್ಟಿದ್ದು, ಇ-ರಿಕ್ಷಾ ಇದಕ್ಕೆ ಪರ್ಯಾಯ ವ್ಯವಸ್ಥೆಯಾಗಿದ್ದು, ಈ ಸಂಬಂಧ ಯೋಜನೆ ಜಾರಿಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ಮಥೆರಾನ್ ಪಟ್ಟಣದಲ್ಲಿರುವ ಕೈ ರಿಕ್ಷಾ ಎಳೆಯುವವರಿಗೆ ಪುನರ್ವಸತಿ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಗುಜರಾತ್‌ನ ಕೆವಾಡಿಯಾದಲ್ಲಿ ಇರುವಂತೆ ಇ-ರಿಕ್ಷಾ ನೀತಿಯನ್ನು ಅಳವಡಿಸಿಕೊಳ್ಳುಲು ಸೂಚಿಸಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಹಣದ ಕೊರತೆಯು ಅಡ್ಡಿಯಾಗಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಪರಿಸರದ ಕಾಳಜಿಯಿಂದಾಗಿ ಮಥೆರಾನ್‌ನಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್‌ಗಳು ಮಾತ್ರ ಪಟ್ಟಣಕ್ಕೆ ಪ್ರವೇಶಿಸಬಹುದಾಗಿದೆ.

ಗಮನಾರ್ಹವಾಗಿ, ಫೆಬ್ರವರಿಯಲ್ಲಿ, ಪಾದಚಾರಿ ಬೆಟ್ಟದ ಪಟ್ಟಣವಾದ ಮಥೆರಾನ್‌ನಲ್ಲಿ ಮೂಲ ಕೈಗಾಡಿ ಎಳೆಯುವವರಿಗೆ 20 ಇ-ರಿಕ್ಷಾ ಪರವಾನಗಿಗಳನ್ನು ನೀಡುವ ಪ್ರಕ್ರಿಯೆಯನ್ನು ಮರುಪರಿಶೀಲಿಸುವ ಪ್ರಸ್ತಾವನೆಯನ್ನು ಸಲ್ಲಿಸಲು ನ್ಯಾಯಾಲಯವು ಮಹಾರಾಷ್ಟ್ರ ರಾಜ್ಯಕ್ಕೆ 2 ವಾರಗಳ ಕಾಲಾವಕಾಶ ನೀಡಿತ್ತು.

ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ಸಹ ನೀಡಿದೆ:

(1) ದಸ್ತೂರಿ ನಾಕಾ (ಬಸ್ ನಿಲ್ದಾಣ) ದಿಂದ ಮಥೆರಾನ್‌ನಲ್ಲಿರುವ ಶಿವಾಜಿ ಪ್ರತಿಮೆಯವರೆಗೆ ರಾಜ್ಯ ಸರ್ಕಾರ ಪೇವರ್ ಬ್ಲಾಕ್‌ಗಳನ್ನು ಹಾಕಬಹುದು.

(2) ಆಂತರಿಕ ರಸ್ತೆ ಮತ್ತು ವ್ಯಾಪಾರ ಮಾರ್ಗಗಳಲ್ಲಿ ಯಾವುದೇ ಪೇವರ್ ಬ್ಲಾಕ್‌ಗಳನ್ನು ಹಾಕಬಾರದು.

(3) ಇಂದಿನಿಂದ (ಆ.6) 6 ತಿಂಗಳ ಅವಧಿಯಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳ ಪದ್ದತಿಯನ್ನು ಹಂತ ಹಂತವಾಗಿ ನಿಲ್ಲಿಸಬೇಕು.

(4) ಮಹಾರಾಷ್ಟ್ರ ಸರ್ಕಾರ ಗುಜರಾತ್‌ನ ಕೆವಾಡಿಯಾದಲ್ಲಿರುವಂತೆ ಇ-ರಿಕ್ಷಾಗಳನ್ನು ಖರೀದಿಸಿ ನಿಜವಾದ ರಿಕ್ಷಾ ಎಳೆಯುವವರಿಗೆ ಬಾಡಿಗೆ ಆಧಾರದ ಮೇಲೆ ನೀಡುವ ಯೋಜನೆಯಂತೆ ಒಂದು ಯೋಜನೆಯನ್ನು ರೂಪಿಸಬೇಕು.

(5) ನಿಜವಾದ ರಿಕ್ಷಾ ಚಾಲಕರನ್ನು ಗುರುತಿಸಲು ಪರಿಸರ ಸೂಕ್ಷ್ಮ ವಲಯದ ಅಡಿಯಲ್ಲಿ ರಚಿಸಲಾದ ಮಥೆರಾನ್ ಕಲೆಕ್ಟರ್ ಅಧ್ಯಕ್ಷತೆಯ ಮಥೆರಾನ್ ಮೇಲ್ವಿಚಾರಣಾ ಸಮಿತಿ ಮೂಲಭೂತ ವಾಸ್ತವಗಳನ್ನು ಪರಿಗಣಿಸಿದ ನಂತರ ಅಗತ್ಯವಿರುವ ಇ-ರಿಕ್ಷಾಗಳ ಸಂಖ್ಯೆಯನ್ನು ನಿರ್ಧರಿಸಬೇಕು. 

(6) ಉಳಿದ ಇ-ರಿಕ್ಷಾಗಳನ್ನು ಬುಡಕಟ್ಟು ಮಹಿಳೆಯರು ಮತ್ತು ಮಥೆರಾನ್‌ನ ಇತರ ವ್ಯಕ್ತಿಗಳಿಗೆ ಹಂಚಿಕೆ ಮಾಡುವುದರಿಂದ ಅವರ ಜೀವನೋಪಾಯ ಸ್ಥಿರವಾಗಿರುತ್ತದೆ. 

(7) ಈಗಾಗಲೇ ಹಾಕಿರುವ ಕಾಂಕ್ರೀಟ್ ಬ್ಲಾಕ್‌ಗಳನ್ನು ಪೇವರ್ ಬ್ಲಾಕ್‌ಗಳಿಗೆ ಬದಲಾಯಿಸಬೇಕು. 

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...