Homeಮುಖಪುಟ'ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ': ಸುಪ್ರೀಂ ಕೋರ್ಟ್‌

‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್‌

ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆ ಎಂದ ಕೋರ್ಟ್, ಮಥೆರಾನ್‌ನಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳು ನಿಷೇಧ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ, ಕೈಯಿಂದ ಎಳೆಯುವ ಬಂಡಿಗಳು/ರಿಕ್ಷಾಗಳ ಪದ್ಧತಿ ಮುಂದುವರೆದಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, “ಇದು ಅಮಾನವೀಯ, ರದ್ದುಗೊಳಿಸುವ ಅಗತ್ಯವಿದೆ” ಎಂದು ಬುಧವಾರ (ಆ.6) ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರದ ಮಥೆರಾನ್ ಬೆಟ್ಟದ ಪಟ್ಟಣದಲ್ಲಿ ಪ್ರಾಯೋಗಿಕ ಇ-ರಿಕ್ಷಾ ಯೋಜನೆಯ ಕುರಿತಾದ ಸಮಸ್ಯೆಗಳನ್ನು ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಆಲಿಸಿತು.

ಸ್ವಾತಂತ್ರ್ಯ ಬಂದು 78 ವರ್ಷಗಳ ನಂತರವೂ ಕೈಯಿಂದ ಎಳೆಯುವ ಬಂಡಿಗಳ ಪದ್ಧತಿ ಮುಂದುವರೆದಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಜೀವನೋಪಾಯಕ್ಕಾಗಿ ಜನರು ಇಂತಹ ಅಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ.

ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಮಾನವ ಘನತೆಯ ಮೂಲ ಪರಿಕಲ್ಪನೆಗೆ ವಿರುದ್ಧವಾದ ಇಂತಹ ಪದ್ಧತಿಗೆ ಅವಕಾಶ ನೀಡುವುದು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಸಾಂವಿಧಾನಿಕ ಭರವಸೆಗಳನ್ನು ಕುಂದಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ (ನೋಂದಣಿ) ವರ್ಸಸ್ ಪಂಜಾಬ್ ರಾಜ್ಯ ಮತ್ತು ಇತರೆ ಪ್ರಕರಣದ ತೀರ್ಪನ್ನು ಪೀಠವು ಉಲ್ಲೇಖಿಸಿದ್ದು, ಕೈಯಿಂದ ಎಳೆಯುವ ರಿಕ್ಷಾಗೆ ಅನುಮತಿಸುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ಹೊಂದಾಣಿಕೆಯಾಗುವುದಿಲ್ಲ ಎಂದಿದೆ.

“ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ ಪ್ರಕರಣದಲ್ಲಿ ಈ ನ್ಯಾಯಾಲಯವು ಅಭಿಪ್ರಾಯಗಳನ್ನು ತಿಳಿಸಿದ 45 ವರ್ಷಗಳ ನಂತರವೂ, ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಎಳೆಯುವ ಪದ್ಧತಿ ಮಥೆರಾನ್ ಪಟ್ಟಣದಲ್ಲಿ ಇನ್ನೂ ಪ್ರಚಲಿತದಲ್ಲಿದೆ ಎಂಬುದು ನಿಜಕ್ಕೂ ದುರದೃಷ್ಟಕರ” ಎಂದು ನ್ಯಾಯಾಲಯ ಹೇಳಿದೆ.

ಇಂದಿನ ಕಾಲದಲ್ಲೂ ಹಸ್ತಚಾಲಿತ ರಿಕ್ಷಾಗಳಿಗೆ ಅವಕಾಶ ನೀಡುವುದು ಭಾರತದ ಜನರು ತಮಗೆ ತಾವೆ ಅಳವಡಿಸಿಕೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಭರವಸೆಗೆ ದ್ರೋಹ ಬಗೆದಂತೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಸಂವಿಧಾನದ ವಿಧಿ 23ಕ್ಕೆ ವಿಸ್ತೃತ ವ್ಯಾಖ್ಯಾನ ಹೇಳಿದ ಪೀಪಲ್ ಆಫ್ ಇಂಡಿಯಾ ಫಾರ್ ಡೆಮಾಕ್ರಟಿಕ್ ರೈಟ್ಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನೂ ಕೂಡ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಈ ಪ್ರಕರಣವು 1982ರ ಏಷ್ಯನ್ ಕ್ರೀಡಾಕೂಟದ ನಿರ್ಮಾಣ ಯೋಜನೆಗಳ ಸಮಯದಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆಯ ವಿಷಯಕ್ಕೆ ಸಂಬಂಧಿಸಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸದಿರುವುದು ಬಲವಂತದ ದುಡಿಮೆಗೆ ಸಮಾನವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಕೈಯಿಂದ ಎಳೆಯುವ ರಿಕ್ಷಾ ಪದ್ದತಿಯನ್ನು ನಿಷೇಧ ಮಾಡಿದರೆ ಜನರು ಜೀವನೋಪಾಯಕ್ಕೆ ಏನು ಮಾಡುವುದು ಎಂಬ ಪ್ರಶ್ನೆಗೂ ಸುಪ್ರೀಂ ಕೋರ್ಟ್ ಉತ್ತರ ಕೊಟ್ಟಿದ್ದು, ಇ-ರಿಕ್ಷಾ ಇದಕ್ಕೆ ಪರ್ಯಾಯ ವ್ಯವಸ್ಥೆಯಾಗಿದ್ದು, ಈ ಸಂಬಂಧ ಯೋಜನೆ ಜಾರಿಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ಮಥೆರಾನ್ ಪಟ್ಟಣದಲ್ಲಿರುವ ಕೈ ರಿಕ್ಷಾ ಎಳೆಯುವವರಿಗೆ ಪುನರ್ವಸತಿ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಗುಜರಾತ್‌ನ ಕೆವಾಡಿಯಾದಲ್ಲಿ ಇರುವಂತೆ ಇ-ರಿಕ್ಷಾ ನೀತಿಯನ್ನು ಅಳವಡಿಸಿಕೊಳ್ಳುಲು ಸೂಚಿಸಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಹಣದ ಕೊರತೆಯು ಅಡ್ಡಿಯಾಗಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಪರಿಸರದ ಕಾಳಜಿಯಿಂದಾಗಿ ಮಥೆರಾನ್‌ನಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್‌ಗಳು ಮಾತ್ರ ಪಟ್ಟಣಕ್ಕೆ ಪ್ರವೇಶಿಸಬಹುದಾಗಿದೆ.

ಗಮನಾರ್ಹವಾಗಿ, ಫೆಬ್ರವರಿಯಲ್ಲಿ, ಪಾದಚಾರಿ ಬೆಟ್ಟದ ಪಟ್ಟಣವಾದ ಮಥೆರಾನ್‌ನಲ್ಲಿ ಮೂಲ ಕೈಗಾಡಿ ಎಳೆಯುವವರಿಗೆ 20 ಇ-ರಿಕ್ಷಾ ಪರವಾನಗಿಗಳನ್ನು ನೀಡುವ ಪ್ರಕ್ರಿಯೆಯನ್ನು ಮರುಪರಿಶೀಲಿಸುವ ಪ್ರಸ್ತಾವನೆಯನ್ನು ಸಲ್ಲಿಸಲು ನ್ಯಾಯಾಲಯವು ಮಹಾರಾಷ್ಟ್ರ ರಾಜ್ಯಕ್ಕೆ 2 ವಾರಗಳ ಕಾಲಾವಕಾಶ ನೀಡಿತ್ತು.

ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ಸಹ ನೀಡಿದೆ:

(1) ದಸ್ತೂರಿ ನಾಕಾ (ಬಸ್ ನಿಲ್ದಾಣ) ದಿಂದ ಮಥೆರಾನ್‌ನಲ್ಲಿರುವ ಶಿವಾಜಿ ಪ್ರತಿಮೆಯವರೆಗೆ ರಾಜ್ಯ ಸರ್ಕಾರ ಪೇವರ್ ಬ್ಲಾಕ್‌ಗಳನ್ನು ಹಾಕಬಹುದು.

(2) ಆಂತರಿಕ ರಸ್ತೆ ಮತ್ತು ವ್ಯಾಪಾರ ಮಾರ್ಗಗಳಲ್ಲಿ ಯಾವುದೇ ಪೇವರ್ ಬ್ಲಾಕ್‌ಗಳನ್ನು ಹಾಕಬಾರದು.

(3) ಇಂದಿನಿಂದ (ಆ.6) 6 ತಿಂಗಳ ಅವಧಿಯಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳ ಪದ್ದತಿಯನ್ನು ಹಂತ ಹಂತವಾಗಿ ನಿಲ್ಲಿಸಬೇಕು.

(4) ಮಹಾರಾಷ್ಟ್ರ ಸರ್ಕಾರ ಗುಜರಾತ್‌ನ ಕೆವಾಡಿಯಾದಲ್ಲಿರುವಂತೆ ಇ-ರಿಕ್ಷಾಗಳನ್ನು ಖರೀದಿಸಿ ನಿಜವಾದ ರಿಕ್ಷಾ ಎಳೆಯುವವರಿಗೆ ಬಾಡಿಗೆ ಆಧಾರದ ಮೇಲೆ ನೀಡುವ ಯೋಜನೆಯಂತೆ ಒಂದು ಯೋಜನೆಯನ್ನು ರೂಪಿಸಬೇಕು.

(5) ನಿಜವಾದ ರಿಕ್ಷಾ ಚಾಲಕರನ್ನು ಗುರುತಿಸಲು ಪರಿಸರ ಸೂಕ್ಷ್ಮ ವಲಯದ ಅಡಿಯಲ್ಲಿ ರಚಿಸಲಾದ ಮಥೆರಾನ್ ಕಲೆಕ್ಟರ್ ಅಧ್ಯಕ್ಷತೆಯ ಮಥೆರಾನ್ ಮೇಲ್ವಿಚಾರಣಾ ಸಮಿತಿ ಮೂಲಭೂತ ವಾಸ್ತವಗಳನ್ನು ಪರಿಗಣಿಸಿದ ನಂತರ ಅಗತ್ಯವಿರುವ ಇ-ರಿಕ್ಷಾಗಳ ಸಂಖ್ಯೆಯನ್ನು ನಿರ್ಧರಿಸಬೇಕು. 

(6) ಉಳಿದ ಇ-ರಿಕ್ಷಾಗಳನ್ನು ಬುಡಕಟ್ಟು ಮಹಿಳೆಯರು ಮತ್ತು ಮಥೆರಾನ್‌ನ ಇತರ ವ್ಯಕ್ತಿಗಳಿಗೆ ಹಂಚಿಕೆ ಮಾಡುವುದರಿಂದ ಅವರ ಜೀವನೋಪಾಯ ಸ್ಥಿರವಾಗಿರುತ್ತದೆ. 

(7) ಈಗಾಗಲೇ ಹಾಕಿರುವ ಕಾಂಕ್ರೀಟ್ ಬ್ಲಾಕ್‌ಗಳನ್ನು ಪೇವರ್ ಬ್ಲಾಕ್‌ಗಳಿಗೆ ಬದಲಾಯಿಸಬೇಕು. 

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...