Homeಮುಖಪುಟ'ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ': ಸುಪ್ರೀಂ ಕೋರ್ಟ್‌

‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್‌

ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆ ಎಂದ ಕೋರ್ಟ್, ಮಥೆರಾನ್‌ನಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳು ನಿಷೇಧ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ, ಕೈಯಿಂದ ಎಳೆಯುವ ಬಂಡಿಗಳು/ರಿಕ್ಷಾಗಳ ಪದ್ಧತಿ ಮುಂದುವರೆದಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, “ಇದು ಅಮಾನವೀಯ, ರದ್ದುಗೊಳಿಸುವ ಅಗತ್ಯವಿದೆ” ಎಂದು ಬುಧವಾರ (ಆ.6) ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರದ ಮಥೆರಾನ್ ಬೆಟ್ಟದ ಪಟ್ಟಣದಲ್ಲಿ ಪ್ರಾಯೋಗಿಕ ಇ-ರಿಕ್ಷಾ ಯೋಜನೆಯ ಕುರಿತಾದ ಸಮಸ್ಯೆಗಳನ್ನು ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಆಲಿಸಿತು.

ಸ್ವಾತಂತ್ರ್ಯ ಬಂದು 78 ವರ್ಷಗಳ ನಂತರವೂ ಕೈಯಿಂದ ಎಳೆಯುವ ಬಂಡಿಗಳ ಪದ್ಧತಿ ಮುಂದುವರೆದಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಜೀವನೋಪಾಯಕ್ಕಾಗಿ ಜನರು ಇಂತಹ ಅಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ.

ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಮಾನವ ಘನತೆಯ ಮೂಲ ಪರಿಕಲ್ಪನೆಗೆ ವಿರುದ್ಧವಾದ ಇಂತಹ ಪದ್ಧತಿಗೆ ಅವಕಾಶ ನೀಡುವುದು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಸಾಂವಿಧಾನಿಕ ಭರವಸೆಗಳನ್ನು ಕುಂದಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ (ನೋಂದಣಿ) ವರ್ಸಸ್ ಪಂಜಾಬ್ ರಾಜ್ಯ ಮತ್ತು ಇತರೆ ಪ್ರಕರಣದ ತೀರ್ಪನ್ನು ಪೀಠವು ಉಲ್ಲೇಖಿಸಿದ್ದು, ಕೈಯಿಂದ ಎಳೆಯುವ ರಿಕ್ಷಾಗೆ ಅನುಮತಿಸುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ಹೊಂದಾಣಿಕೆಯಾಗುವುದಿಲ್ಲ ಎಂದಿದೆ.

“ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ ಪ್ರಕರಣದಲ್ಲಿ ಈ ನ್ಯಾಯಾಲಯವು ಅಭಿಪ್ರಾಯಗಳನ್ನು ತಿಳಿಸಿದ 45 ವರ್ಷಗಳ ನಂತರವೂ, ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಎಳೆಯುವ ಪದ್ಧತಿ ಮಥೆರಾನ್ ಪಟ್ಟಣದಲ್ಲಿ ಇನ್ನೂ ಪ್ರಚಲಿತದಲ್ಲಿದೆ ಎಂಬುದು ನಿಜಕ್ಕೂ ದುರದೃಷ್ಟಕರ” ಎಂದು ನ್ಯಾಯಾಲಯ ಹೇಳಿದೆ.

ಇಂದಿನ ಕಾಲದಲ್ಲೂ ಹಸ್ತಚಾಲಿತ ರಿಕ್ಷಾಗಳಿಗೆ ಅವಕಾಶ ನೀಡುವುದು ಭಾರತದ ಜನರು ತಮಗೆ ತಾವೆ ಅಳವಡಿಸಿಕೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಭರವಸೆಗೆ ದ್ರೋಹ ಬಗೆದಂತೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಸಂವಿಧಾನದ ವಿಧಿ 23ಕ್ಕೆ ವಿಸ್ತೃತ ವ್ಯಾಖ್ಯಾನ ಹೇಳಿದ ಪೀಪಲ್ ಆಫ್ ಇಂಡಿಯಾ ಫಾರ್ ಡೆಮಾಕ್ರಟಿಕ್ ರೈಟ್ಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನೂ ಕೂಡ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಈ ಪ್ರಕರಣವು 1982ರ ಏಷ್ಯನ್ ಕ್ರೀಡಾಕೂಟದ ನಿರ್ಮಾಣ ಯೋಜನೆಗಳ ಸಮಯದಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆಯ ವಿಷಯಕ್ಕೆ ಸಂಬಂಧಿಸಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸದಿರುವುದು ಬಲವಂತದ ದುಡಿಮೆಗೆ ಸಮಾನವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಕೈಯಿಂದ ಎಳೆಯುವ ರಿಕ್ಷಾ ಪದ್ದತಿಯನ್ನು ನಿಷೇಧ ಮಾಡಿದರೆ ಜನರು ಜೀವನೋಪಾಯಕ್ಕೆ ಏನು ಮಾಡುವುದು ಎಂಬ ಪ್ರಶ್ನೆಗೂ ಸುಪ್ರೀಂ ಕೋರ್ಟ್ ಉತ್ತರ ಕೊಟ್ಟಿದ್ದು, ಇ-ರಿಕ್ಷಾ ಇದಕ್ಕೆ ಪರ್ಯಾಯ ವ್ಯವಸ್ಥೆಯಾಗಿದ್ದು, ಈ ಸಂಬಂಧ ಯೋಜನೆ ಜಾರಿಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ಮಥೆರಾನ್ ಪಟ್ಟಣದಲ್ಲಿರುವ ಕೈ ರಿಕ್ಷಾ ಎಳೆಯುವವರಿಗೆ ಪುನರ್ವಸತಿ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಗುಜರಾತ್‌ನ ಕೆವಾಡಿಯಾದಲ್ಲಿ ಇರುವಂತೆ ಇ-ರಿಕ್ಷಾ ನೀತಿಯನ್ನು ಅಳವಡಿಸಿಕೊಳ್ಳುಲು ಸೂಚಿಸಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಹಣದ ಕೊರತೆಯು ಅಡ್ಡಿಯಾಗಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಪರಿಸರದ ಕಾಳಜಿಯಿಂದಾಗಿ ಮಥೆರಾನ್‌ನಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್‌ಗಳು ಮಾತ್ರ ಪಟ್ಟಣಕ್ಕೆ ಪ್ರವೇಶಿಸಬಹುದಾಗಿದೆ.

ಗಮನಾರ್ಹವಾಗಿ, ಫೆಬ್ರವರಿಯಲ್ಲಿ, ಪಾದಚಾರಿ ಬೆಟ್ಟದ ಪಟ್ಟಣವಾದ ಮಥೆರಾನ್‌ನಲ್ಲಿ ಮೂಲ ಕೈಗಾಡಿ ಎಳೆಯುವವರಿಗೆ 20 ಇ-ರಿಕ್ಷಾ ಪರವಾನಗಿಗಳನ್ನು ನೀಡುವ ಪ್ರಕ್ರಿಯೆಯನ್ನು ಮರುಪರಿಶೀಲಿಸುವ ಪ್ರಸ್ತಾವನೆಯನ್ನು ಸಲ್ಲಿಸಲು ನ್ಯಾಯಾಲಯವು ಮಹಾರಾಷ್ಟ್ರ ರಾಜ್ಯಕ್ಕೆ 2 ವಾರಗಳ ಕಾಲಾವಕಾಶ ನೀಡಿತ್ತು.

ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ಸಹ ನೀಡಿದೆ:

(1) ದಸ್ತೂರಿ ನಾಕಾ (ಬಸ್ ನಿಲ್ದಾಣ) ದಿಂದ ಮಥೆರಾನ್‌ನಲ್ಲಿರುವ ಶಿವಾಜಿ ಪ್ರತಿಮೆಯವರೆಗೆ ರಾಜ್ಯ ಸರ್ಕಾರ ಪೇವರ್ ಬ್ಲಾಕ್‌ಗಳನ್ನು ಹಾಕಬಹುದು.

(2) ಆಂತರಿಕ ರಸ್ತೆ ಮತ್ತು ವ್ಯಾಪಾರ ಮಾರ್ಗಗಳಲ್ಲಿ ಯಾವುದೇ ಪೇವರ್ ಬ್ಲಾಕ್‌ಗಳನ್ನು ಹಾಕಬಾರದು.

(3) ಇಂದಿನಿಂದ (ಆ.6) 6 ತಿಂಗಳ ಅವಧಿಯಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳ ಪದ್ದತಿಯನ್ನು ಹಂತ ಹಂತವಾಗಿ ನಿಲ್ಲಿಸಬೇಕು.

(4) ಮಹಾರಾಷ್ಟ್ರ ಸರ್ಕಾರ ಗುಜರಾತ್‌ನ ಕೆವಾಡಿಯಾದಲ್ಲಿರುವಂತೆ ಇ-ರಿಕ್ಷಾಗಳನ್ನು ಖರೀದಿಸಿ ನಿಜವಾದ ರಿಕ್ಷಾ ಎಳೆಯುವವರಿಗೆ ಬಾಡಿಗೆ ಆಧಾರದ ಮೇಲೆ ನೀಡುವ ಯೋಜನೆಯಂತೆ ಒಂದು ಯೋಜನೆಯನ್ನು ರೂಪಿಸಬೇಕು.

(5) ನಿಜವಾದ ರಿಕ್ಷಾ ಚಾಲಕರನ್ನು ಗುರುತಿಸಲು ಪರಿಸರ ಸೂಕ್ಷ್ಮ ವಲಯದ ಅಡಿಯಲ್ಲಿ ರಚಿಸಲಾದ ಮಥೆರಾನ್ ಕಲೆಕ್ಟರ್ ಅಧ್ಯಕ್ಷತೆಯ ಮಥೆರಾನ್ ಮೇಲ್ವಿಚಾರಣಾ ಸಮಿತಿ ಮೂಲಭೂತ ವಾಸ್ತವಗಳನ್ನು ಪರಿಗಣಿಸಿದ ನಂತರ ಅಗತ್ಯವಿರುವ ಇ-ರಿಕ್ಷಾಗಳ ಸಂಖ್ಯೆಯನ್ನು ನಿರ್ಧರಿಸಬೇಕು. 

(6) ಉಳಿದ ಇ-ರಿಕ್ಷಾಗಳನ್ನು ಬುಡಕಟ್ಟು ಮಹಿಳೆಯರು ಮತ್ತು ಮಥೆರಾನ್‌ನ ಇತರ ವ್ಯಕ್ತಿಗಳಿಗೆ ಹಂಚಿಕೆ ಮಾಡುವುದರಿಂದ ಅವರ ಜೀವನೋಪಾಯ ಸ್ಥಿರವಾಗಿರುತ್ತದೆ. 

(7) ಈಗಾಗಲೇ ಹಾಕಿರುವ ಕಾಂಕ್ರೀಟ್ ಬ್ಲಾಕ್‌ಗಳನ್ನು ಪೇವರ್ ಬ್ಲಾಕ್‌ಗಳಿಗೆ ಬದಲಾಯಿಸಬೇಕು. 

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...