Homeಮುಖಪುಟದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ...

ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಡಿ ಉದ್ಯೋಗ ಪಡೆಯಲು ಹಿಂದೂ ಧರ್ಮಕ್ಕೆ ಮತಾಂತರವಾದ ಕ್ರೈಸ್ತ ಮಹಿಳೆಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ನ.26) ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಸಿ ಸೆಲ್ವರಾಣಿ ಎಂಬವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಆರ್. ಮಹದೇವನ್ ಅವರ ಪೀಠ “ಮೀಸಲಾತಿ ಪ್ರಯೋಜನಗಳನ್ನು ಪಡೆಯುವ ಉದ್ದೇಶದಿಂದಲೇ ಮತಾಂತರಗೊಂಡರೆ ಅಥವಾ ಮರು ಮತಾಂತರವಾದರೆ, ಅದನ್ನು ಅನುಮತಿಸಲಾಗದು” ಎಂದಿದೆ.

ವರದಿಗಳ ಪ್ರಕಾರ, ಸೆಲ್ವರಾಣಿ ಹಿಂದೂ ಧರ್ಮದ ವಲ್ಲುವನ್ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಪರಿಶಿಷ್ಟ ಜಾತಿಯಡಿ ಮೀಸಲಾತಿ ಕೋರಿ ಗುಮಾಸ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರ ಅರ್ಜಿ ಪರಿಶೀಲಿಸಿದಾಗ, ಆಕೆ ಹುಟ್ಟಿನಿಂದ ಕ್ರೈಸ್ತ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿತ್ತು. ಆಕೆಯ ಪೋಷಕರ ವಿವಾಹವನ್ನು ಭಾರತೀಯ ಕ್ರೈಸ್ತ ವಿವಾಹ ಕಾಯ್ದೆಯಡಿ ನೋಂದಾಯಿಸಲಾಗಿದೆ. ಆಕೆಯ ಬ್ಯಾಪ್ಟಿಸಮ್ ಮತ್ತು ಚರ್ಚ್ ಹಾಜರಾತಿಯ ದಾಖಲೆಗಳು ಆಕೆ ಕ್ರೈಸ್ತ ಸಮುದಾಯಕ್ಕೆ ಸೇರಿದವರು ಎನ್ನುವುದಕ್ಕೆ ಪುರಾವೆ ನೀಡಿದ್ದವು.

ಗುಮಾಸ್ತೆ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡು ಸರ್ಕಾರದ ಕ್ರಮವನ್ನು ಮದ್ರಾಸ್ ಹೈಕೋರ್ಟ್ 2023ರ ಜನವರಿಯಲ್ಲಿ ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. “ಸೆಲ್ವರಾಣಿ ಅವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

“ಧರ್ಮವನ್ನು ಅಳವಡಿಸಿಕೊಳ್ಳದೇ, ಕೇವಲ ಮೀಸಲಾತಿಯ ಉದ್ದೇಶಕ್ಕಾಗಿ ಮತಾಂತರವಾಗುವುದನ್ನು ಅನುಮತಿಸಲಾಗುವುದಿಲ್ಲ. ಈ ರೀತಿಯ ಮೀಸಲಾತಿಯಿಂದ ಸಾಮಾಜಿಕ ನೀತಿಗೆ ಹಿನ್ನಡೆಯಾಗಲಿದೆ. ಸಾಂವಿಧಾನಿಕವಾಗಿ ಇದು ವಂಚನೆಗೆ ಕಾರಣವಾಗಲಿದೆ” ಎಂದು ಪೀಠವು ಉಲ್ಲೇಖಿಸಿದೆ.

“ಸೆಲ್ವರಾಣಿ ಅವರು ಹಿಂದೂ ಧರ್ಮಕ್ಕೆ ಮರುಮತಾಂತರಗೊಂಡಿದ್ದಕ್ಕೆ ಸಂಬಂಧಿಸಿದ ಯಾವುದೇ ಪುರಾವೆಗಳು ಪ್ರಕರಣದಲ್ಲಿ ಕಂಡುಬಂದಿಲ್ಲ. ಮರು ಮತಾಂತರವಾಗಬೇಕಾದರೆ ಸಮಾರಂಭಗಳು, ಸಾರ್ವಜನಿಕವಾಗಿ ಪ್ರಚಾರಗಳು ಅಥವಾ ಆರ್ಯ ಸಮಾಜದಂತಹ ಸಂಸ್ಥೆಗಳೊಂದಿಗೆ ಸಂಬಂಧದ ಅಗತ್ಯವಿದೆ. ಈ ಪ್ರಕರಣದಲ್ಲಿ ಅದು ಯಾವುದೂ ನಡೆದಂತಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

“ಭಾರತದ ಜಾತ್ಯತೀತ ಚೌಕಟ್ಟಿನಲ್ಲಿ, ಪ್ರತಿಯೊಬ್ಬ ನಾಗರಿಕರಿಗೂ ಅವರ ಆಯ್ಕೆಯ ಧರ್ಮವನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಹಕ್ಕಿದೆ. ಆದರೆ, ಧರ್ಮದ ಮೇಲಿನ ದ್ವಂದ್ವ ಆಯ್ಕೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮೇಲ್ಮನವಿದಾರರು ಬ್ಯಾಪ್ಟಿಸಮ್ ಅನುಸರಿಸಿದ ನಂತರ ಮೀಸಲಾತಿ ಪ್ರಯೋಜನಗಳಿಗಾಗಿ ಹಿಂದೂ ಎಂದು ಗುರುತಿಸಲು ಆಗುವುದಿಲ್ಲ” ಎಂದು ಪೀಠವು ಹೇಳಿದೆ.

ಸೆಲ್ವರಾಣಿ ಪರ ಹಿರಿಯ ವಕೀಲ ಎನ್.ಎಸ್ನ ಪ್ಪಿನೈ, ವಕೀಲರಾದ ವಿ.ಬಾಲಾಜಿ, ಅಸೈತಂಬಿ ಎಂ.ಎಸ್ಎಂ ಮತ್ತಿತರರು ವಾದ ಮಂಡಿಸಿದ್ದರು. ತಮಿಳುನಾಡು ಸರ್ಕಾರದ ಪರ ವಕೀಲರಾದ ಅರವಿಂದ್ ಎಸ್, ಅಕ್ಷಯ್ ಗುಪ್ತಾ, ಅಬ್ಬಾಸ್ ಬಿ ಮತ್ತು ಥರಾಣೆ ಎಸ್. ಹಾಜರಾಗಿದ್ದರು.

ಇದನ್ನೂ ಓದಿ : ‘ಸನಾತನ ಧರ್ಮ ಸಂರಕ್ಷಣಾ ಮಂಡಳಿ’ ಸ್ಥಾಪನೆಗೆ ಅರ್ಜಿ : ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...