Homeಮುಖಪುಟದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ...

ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಡಿ ಉದ್ಯೋಗ ಪಡೆಯಲು ಹಿಂದೂ ಧರ್ಮಕ್ಕೆ ಮತಾಂತರವಾದ ಕ್ರೈಸ್ತ ಮಹಿಳೆಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ನ.26) ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಸಿ ಸೆಲ್ವರಾಣಿ ಎಂಬವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಆರ್. ಮಹದೇವನ್ ಅವರ ಪೀಠ “ಮೀಸಲಾತಿ ಪ್ರಯೋಜನಗಳನ್ನು ಪಡೆಯುವ ಉದ್ದೇಶದಿಂದಲೇ ಮತಾಂತರಗೊಂಡರೆ ಅಥವಾ ಮರು ಮತಾಂತರವಾದರೆ, ಅದನ್ನು ಅನುಮತಿಸಲಾಗದು” ಎಂದಿದೆ.

ವರದಿಗಳ ಪ್ರಕಾರ, ಸೆಲ್ವರಾಣಿ ಹಿಂದೂ ಧರ್ಮದ ವಲ್ಲುವನ್ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಪರಿಶಿಷ್ಟ ಜಾತಿಯಡಿ ಮೀಸಲಾತಿ ಕೋರಿ ಗುಮಾಸ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರ ಅರ್ಜಿ ಪರಿಶೀಲಿಸಿದಾಗ, ಆಕೆ ಹುಟ್ಟಿನಿಂದ ಕ್ರೈಸ್ತ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿತ್ತು. ಆಕೆಯ ಪೋಷಕರ ವಿವಾಹವನ್ನು ಭಾರತೀಯ ಕ್ರೈಸ್ತ ವಿವಾಹ ಕಾಯ್ದೆಯಡಿ ನೋಂದಾಯಿಸಲಾಗಿದೆ. ಆಕೆಯ ಬ್ಯಾಪ್ಟಿಸಮ್ ಮತ್ತು ಚರ್ಚ್ ಹಾಜರಾತಿಯ ದಾಖಲೆಗಳು ಆಕೆ ಕ್ರೈಸ್ತ ಸಮುದಾಯಕ್ಕೆ ಸೇರಿದವರು ಎನ್ನುವುದಕ್ಕೆ ಪುರಾವೆ ನೀಡಿದ್ದವು.

ಗುಮಾಸ್ತೆ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡು ಸರ್ಕಾರದ ಕ್ರಮವನ್ನು ಮದ್ರಾಸ್ ಹೈಕೋರ್ಟ್ 2023ರ ಜನವರಿಯಲ್ಲಿ ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. “ಸೆಲ್ವರಾಣಿ ಅವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

“ಧರ್ಮವನ್ನು ಅಳವಡಿಸಿಕೊಳ್ಳದೇ, ಕೇವಲ ಮೀಸಲಾತಿಯ ಉದ್ದೇಶಕ್ಕಾಗಿ ಮತಾಂತರವಾಗುವುದನ್ನು ಅನುಮತಿಸಲಾಗುವುದಿಲ್ಲ. ಈ ರೀತಿಯ ಮೀಸಲಾತಿಯಿಂದ ಸಾಮಾಜಿಕ ನೀತಿಗೆ ಹಿನ್ನಡೆಯಾಗಲಿದೆ. ಸಾಂವಿಧಾನಿಕವಾಗಿ ಇದು ವಂಚನೆಗೆ ಕಾರಣವಾಗಲಿದೆ” ಎಂದು ಪೀಠವು ಉಲ್ಲೇಖಿಸಿದೆ.

“ಸೆಲ್ವರಾಣಿ ಅವರು ಹಿಂದೂ ಧರ್ಮಕ್ಕೆ ಮರುಮತಾಂತರಗೊಂಡಿದ್ದಕ್ಕೆ ಸಂಬಂಧಿಸಿದ ಯಾವುದೇ ಪುರಾವೆಗಳು ಪ್ರಕರಣದಲ್ಲಿ ಕಂಡುಬಂದಿಲ್ಲ. ಮರು ಮತಾಂತರವಾಗಬೇಕಾದರೆ ಸಮಾರಂಭಗಳು, ಸಾರ್ವಜನಿಕವಾಗಿ ಪ್ರಚಾರಗಳು ಅಥವಾ ಆರ್ಯ ಸಮಾಜದಂತಹ ಸಂಸ್ಥೆಗಳೊಂದಿಗೆ ಸಂಬಂಧದ ಅಗತ್ಯವಿದೆ. ಈ ಪ್ರಕರಣದಲ್ಲಿ ಅದು ಯಾವುದೂ ನಡೆದಂತಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

“ಭಾರತದ ಜಾತ್ಯತೀತ ಚೌಕಟ್ಟಿನಲ್ಲಿ, ಪ್ರತಿಯೊಬ್ಬ ನಾಗರಿಕರಿಗೂ ಅವರ ಆಯ್ಕೆಯ ಧರ್ಮವನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಹಕ್ಕಿದೆ. ಆದರೆ, ಧರ್ಮದ ಮೇಲಿನ ದ್ವಂದ್ವ ಆಯ್ಕೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮೇಲ್ಮನವಿದಾರರು ಬ್ಯಾಪ್ಟಿಸಮ್ ಅನುಸರಿಸಿದ ನಂತರ ಮೀಸಲಾತಿ ಪ್ರಯೋಜನಗಳಿಗಾಗಿ ಹಿಂದೂ ಎಂದು ಗುರುತಿಸಲು ಆಗುವುದಿಲ್ಲ” ಎಂದು ಪೀಠವು ಹೇಳಿದೆ.

ಸೆಲ್ವರಾಣಿ ಪರ ಹಿರಿಯ ವಕೀಲ ಎನ್.ಎಸ್ನ ಪ್ಪಿನೈ, ವಕೀಲರಾದ ವಿ.ಬಾಲಾಜಿ, ಅಸೈತಂಬಿ ಎಂ.ಎಸ್ಎಂ ಮತ್ತಿತರರು ವಾದ ಮಂಡಿಸಿದ್ದರು. ತಮಿಳುನಾಡು ಸರ್ಕಾರದ ಪರ ವಕೀಲರಾದ ಅರವಿಂದ್ ಎಸ್, ಅಕ್ಷಯ್ ಗುಪ್ತಾ, ಅಬ್ಬಾಸ್ ಬಿ ಮತ್ತು ಥರಾಣೆ ಎಸ್. ಹಾಜರಾಗಿದ್ದರು.

ಇದನ್ನೂ ಓದಿ : ‘ಸನಾತನ ಧರ್ಮ ಸಂರಕ್ಷಣಾ ಮಂಡಳಿ’ ಸ್ಥಾಪನೆಗೆ ಅರ್ಜಿ : ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...