Homeಮುಖಪುಟದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ...

ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಡಿ ಉದ್ಯೋಗ ಪಡೆಯಲು ಹಿಂದೂ ಧರ್ಮಕ್ಕೆ ಮತಾಂತರವಾದ ಕ್ರೈಸ್ತ ಮಹಿಳೆಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ನ.26) ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಸಿ ಸೆಲ್ವರಾಣಿ ಎಂಬವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಆರ್. ಮಹದೇವನ್ ಅವರ ಪೀಠ “ಮೀಸಲಾತಿ ಪ್ರಯೋಜನಗಳನ್ನು ಪಡೆಯುವ ಉದ್ದೇಶದಿಂದಲೇ ಮತಾಂತರಗೊಂಡರೆ ಅಥವಾ ಮರು ಮತಾಂತರವಾದರೆ, ಅದನ್ನು ಅನುಮತಿಸಲಾಗದು” ಎಂದಿದೆ.

ವರದಿಗಳ ಪ್ರಕಾರ, ಸೆಲ್ವರಾಣಿ ಹಿಂದೂ ಧರ್ಮದ ವಲ್ಲುವನ್ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಪರಿಶಿಷ್ಟ ಜಾತಿಯಡಿ ಮೀಸಲಾತಿ ಕೋರಿ ಗುಮಾಸ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರ ಅರ್ಜಿ ಪರಿಶೀಲಿಸಿದಾಗ, ಆಕೆ ಹುಟ್ಟಿನಿಂದ ಕ್ರೈಸ್ತ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿತ್ತು. ಆಕೆಯ ಪೋಷಕರ ವಿವಾಹವನ್ನು ಭಾರತೀಯ ಕ್ರೈಸ್ತ ವಿವಾಹ ಕಾಯ್ದೆಯಡಿ ನೋಂದಾಯಿಸಲಾಗಿದೆ. ಆಕೆಯ ಬ್ಯಾಪ್ಟಿಸಮ್ ಮತ್ತು ಚರ್ಚ್ ಹಾಜರಾತಿಯ ದಾಖಲೆಗಳು ಆಕೆ ಕ್ರೈಸ್ತ ಸಮುದಾಯಕ್ಕೆ ಸೇರಿದವರು ಎನ್ನುವುದಕ್ಕೆ ಪುರಾವೆ ನೀಡಿದ್ದವು.

ಗುಮಾಸ್ತೆ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡು ಸರ್ಕಾರದ ಕ್ರಮವನ್ನು ಮದ್ರಾಸ್ ಹೈಕೋರ್ಟ್ 2023ರ ಜನವರಿಯಲ್ಲಿ ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. “ಸೆಲ್ವರಾಣಿ ಅವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

“ಧರ್ಮವನ್ನು ಅಳವಡಿಸಿಕೊಳ್ಳದೇ, ಕೇವಲ ಮೀಸಲಾತಿಯ ಉದ್ದೇಶಕ್ಕಾಗಿ ಮತಾಂತರವಾಗುವುದನ್ನು ಅನುಮತಿಸಲಾಗುವುದಿಲ್ಲ. ಈ ರೀತಿಯ ಮೀಸಲಾತಿಯಿಂದ ಸಾಮಾಜಿಕ ನೀತಿಗೆ ಹಿನ್ನಡೆಯಾಗಲಿದೆ. ಸಾಂವಿಧಾನಿಕವಾಗಿ ಇದು ವಂಚನೆಗೆ ಕಾರಣವಾಗಲಿದೆ” ಎಂದು ಪೀಠವು ಉಲ್ಲೇಖಿಸಿದೆ.

“ಸೆಲ್ವರಾಣಿ ಅವರು ಹಿಂದೂ ಧರ್ಮಕ್ಕೆ ಮರುಮತಾಂತರಗೊಂಡಿದ್ದಕ್ಕೆ ಸಂಬಂಧಿಸಿದ ಯಾವುದೇ ಪುರಾವೆಗಳು ಪ್ರಕರಣದಲ್ಲಿ ಕಂಡುಬಂದಿಲ್ಲ. ಮರು ಮತಾಂತರವಾಗಬೇಕಾದರೆ ಸಮಾರಂಭಗಳು, ಸಾರ್ವಜನಿಕವಾಗಿ ಪ್ರಚಾರಗಳು ಅಥವಾ ಆರ್ಯ ಸಮಾಜದಂತಹ ಸಂಸ್ಥೆಗಳೊಂದಿಗೆ ಸಂಬಂಧದ ಅಗತ್ಯವಿದೆ. ಈ ಪ್ರಕರಣದಲ್ಲಿ ಅದು ಯಾವುದೂ ನಡೆದಂತಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

“ಭಾರತದ ಜಾತ್ಯತೀತ ಚೌಕಟ್ಟಿನಲ್ಲಿ, ಪ್ರತಿಯೊಬ್ಬ ನಾಗರಿಕರಿಗೂ ಅವರ ಆಯ್ಕೆಯ ಧರ್ಮವನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಹಕ್ಕಿದೆ. ಆದರೆ, ಧರ್ಮದ ಮೇಲಿನ ದ್ವಂದ್ವ ಆಯ್ಕೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮೇಲ್ಮನವಿದಾರರು ಬ್ಯಾಪ್ಟಿಸಮ್ ಅನುಸರಿಸಿದ ನಂತರ ಮೀಸಲಾತಿ ಪ್ರಯೋಜನಗಳಿಗಾಗಿ ಹಿಂದೂ ಎಂದು ಗುರುತಿಸಲು ಆಗುವುದಿಲ್ಲ” ಎಂದು ಪೀಠವು ಹೇಳಿದೆ.

ಸೆಲ್ವರಾಣಿ ಪರ ಹಿರಿಯ ವಕೀಲ ಎನ್.ಎಸ್ನ ಪ್ಪಿನೈ, ವಕೀಲರಾದ ವಿ.ಬಾಲಾಜಿ, ಅಸೈತಂಬಿ ಎಂ.ಎಸ್ಎಂ ಮತ್ತಿತರರು ವಾದ ಮಂಡಿಸಿದ್ದರು. ತಮಿಳುನಾಡು ಸರ್ಕಾರದ ಪರ ವಕೀಲರಾದ ಅರವಿಂದ್ ಎಸ್, ಅಕ್ಷಯ್ ಗುಪ್ತಾ, ಅಬ್ಬಾಸ್ ಬಿ ಮತ್ತು ಥರಾಣೆ ಎಸ್. ಹಾಜರಾಗಿದ್ದರು.

ಇದನ್ನೂ ಓದಿ : ‘ಸನಾತನ ಧರ್ಮ ಸಂರಕ್ಷಣಾ ಮಂಡಳಿ’ ಸ್ಥಾಪನೆಗೆ ಅರ್ಜಿ : ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...