Homeಕರ್ನಾಟಕಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

- Advertisement -
- Advertisement -

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಜೂ.6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ.

ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್‌ ಹಾಗೂ ಸತೀಶ್ಚಂದ್ರ ಶರ್ಮಾ ಅವರಿದ್ದ ಪೀಠ, ಒಂದು ವಾರದ ಒಳಗಾಗಿ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿ ಅವರಿಗೆ ನಿರ್ದೇಶನ ನೀಡಿದೆ.

ವಿನಯ್ ಕುಲಕರ್ಣಿ ತಮ್ಮ ಪತ್ನಿ, ಚಾಲಕ ಮತ್ತು ಗನ್‌ಮ್ಯಾನ್ ಮೊಬೈಲ್ ಫೋನ್ ಬಳಸಿ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಸಂಪರ್ಕಿಸಿದ್ದಾರೆ ಎಂದು ಸರ್ಕಾರ ಮತ್ತು ಸಿಬಿಐ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ವಾದಿಸಿದ್ದಾರೆ. ಆರೋಪಿಗಳು ಮತ್ತು ಪ್ರಕರಣದ ಪ್ರಮುಖ ವ್ಯಕ್ತಿಗಳ ನಂಟನ್ನು ಬಿಂಬಿಸುವ ಛಾಯಾಚಿತ್ರಗಳನ್ನು ಅವರು ಪೀಠಕ್ಕೆ ತೋರಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿನಯ್ ಕುಲಕರ್ಣಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್ , ಪ್ರತಿಕ್ರಿಯೆ ಸಲ್ಲಿಸಲು ಸೋಮವಾರದವರೆಗೆ ಸಮಯಾವಕಾಶ ಕೋರಿದ್ದರು. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ನಡೆಸಿರುವ ಬಗ್ಗೆ ಪುರಾವೆಗಳಿಲ್ಲ ಎಂದು ಅವರು ವಾದಿಸಿದ್ದರು. ಅಲ್ಲದೆ ತಮ್ಮ ಕಕ್ಷಿದಾರರು ಪ್ರಾಸಿಕ್ಯೂಷನ್‌ಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ ಹೇಳಿದ್ದರು.

ತಮ್ಮ ಕಕ್ಷಿದಾರ ವಿನಯ್‌ ಅವರ ರಾಜಕೀಯ ಜೀವನ ಮುಗಿದುಹೋಗಿದೆ. ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಹ ಕೃತ್ಯ ಎಸಗಿದ್ದರೆ ಕಾನೂನು ಅವರಿಗೆ ಶಿಕ್ಷಿಸಲಿ ಎಂದ ಸಿಂಗ್‌, ಜಾಮೀನು ಷರತ್ತುಗಳನ್ನು ವಿನಯ್‌ ಉಲ್ಲಂಘಿಸಿಲ್ಲ ಎಂಬುದಾಗಿ ಸಮರ್ಥಿಸಿಕೊಂಡಿದ್ದರು. ಆದರೆ, ಈ ವಾದಗಳನ್ನು ನ್ಯಾಯಾಲಯ ಒಪ್ಪಿಲ್ಲ ಎಂದು ವರದಿಯಾಗಿದೆ.

ಡಿಕೆಶಿ ಭೇಟಿಯಾದ ವಿನಯ್ ಕುಲಕರ್ಣಿ

ಜಾಮೀನು ರದ್ದುಗೊಂಡಿರುವ ಹಿನ್ನೆಲೆ, ವಿನಯ್ ಕುಲಕರ್ಣಿ ಬಂಧನ ಭೀತಿಯಲ್ಲಿದ್ದಾರೆ. ಹಾಗಾಗಿ, ಶನಿವಾರ ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕುಟುಂಬ ಸಮೇತ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಮನೆಯಿಂದಲೇ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಜೊತೆ ಜಾಮೀನು ರದ್ದಾಗಿರುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ನಿರ್ಧಾರಕ್ಕೆ ತಲೆ ಬಾಗುತ್ತೇನೆ : ವಿನಯ್ ಕುಲಕರ್ಣಿ

ಡಿಕೆಶಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, “ಜಾಮೀನು ರದ್ದು ಮಾಡಿಸಿರುವುದರ ಹಿಂದೆ ಹಲವಾರು ಜನ ಕೈವಾಡ ಇದೆ. ನ್ಯಾಯಾಲಯದ ನಿರ್ಧಾರಕ್ಕೆ ನಾನು ತಲೆಬಾಗುತ್ತೇನೆ. ಇನ್ನೆರಡು ವಾರ ಬಿಟ್ಟು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ. ಜಾಮೀನು ರದ್ದಾಗಿರುವ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡಲು ಆಗಮಿಸಿದ್ದೆ ಎಂದು ಹೇಳಿದ್ದಾರೆ.

2016ರ ಮೇ ತಿಂಗಳಲ್ಲಿ ಯೋಗೇಶ್‌ ಗೌಡ ಅವರ ಕೊಲೆ ನಡೆದಿತ್ತು. ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ಆರೋಪಿ ಚಂದ್ರಶೇಖರ ಇಂಡಿ  ಅಲಿಯಾಸ್ ಚಂದು ಮಾಮಾ ಅವರಿಗೆ ನೀಡಿದ್ದ ಜಾಮೀನನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ನಿರಾಕರಿಸಿತ್ತು. ವಿನಯ್ 2021ರ ಆಗಸ್ಟ್‌ 11ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶಗೌಡರನ್ನು 2016ರ ಜೂ. 15ರಂದು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು.

ಪ್ರಕರಣ ಸಂಬಂಧ ಆರಂಭದಲ್ಲಿ ಆರೋಪಿ ಬಸವರಾಜ್ ಮುತ್ತಗಿ ಹಾಗೂ ಆತನ ತಂಡವನ್ನು ಪೊಲೀಸರು ಬಂಧಿಸಿದ್ದರು. ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಪ್ರಕರಣವನ್ನು ಸಿಬಿಐಗೆ ನೀಡಿದರು. ತನಿಖೆ ಕೈಗೆತ್ತಿಕೊಂಡ ಸಿಬಿಐ 2020 ನವೆಂಬರ್ 5ರಂದು ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

9 ತಿಂಗಳು ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಆಗಸ್ಟ್ 11, 2021ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆಗಸ್ಟ್​ 13ರಂದು ಅವರು ಜೈಲಿನಿಂದ ಹೊರಗೆ ಬಂದಿದ್ದರು.  ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಅನೇಕ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಅನ್ನೋದು ಪ್ರಮುಖ ಷರತ್ತು. ಆದರೂ, ಈ ನಡುವೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ‘ನೈತಿಕ ಹೊಣೆ’ ಹೊತ್ತು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...