Homeಕರ್ನಾಟಕಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

- Advertisement -
- Advertisement -

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಜೂ.6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ.

ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್‌ ಹಾಗೂ ಸತೀಶ್ಚಂದ್ರ ಶರ್ಮಾ ಅವರಿದ್ದ ಪೀಠ, ಒಂದು ವಾರದ ಒಳಗಾಗಿ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿ ಅವರಿಗೆ ನಿರ್ದೇಶನ ನೀಡಿದೆ.

ವಿನಯ್ ಕುಲಕರ್ಣಿ ತಮ್ಮ ಪತ್ನಿ, ಚಾಲಕ ಮತ್ತು ಗನ್‌ಮ್ಯಾನ್ ಮೊಬೈಲ್ ಫೋನ್ ಬಳಸಿ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಸಂಪರ್ಕಿಸಿದ್ದಾರೆ ಎಂದು ಸರ್ಕಾರ ಮತ್ತು ಸಿಬಿಐ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ವಾದಿಸಿದ್ದಾರೆ. ಆರೋಪಿಗಳು ಮತ್ತು ಪ್ರಕರಣದ ಪ್ರಮುಖ ವ್ಯಕ್ತಿಗಳ ನಂಟನ್ನು ಬಿಂಬಿಸುವ ಛಾಯಾಚಿತ್ರಗಳನ್ನು ಅವರು ಪೀಠಕ್ಕೆ ತೋರಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿನಯ್ ಕುಲಕರ್ಣಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್ , ಪ್ರತಿಕ್ರಿಯೆ ಸಲ್ಲಿಸಲು ಸೋಮವಾರದವರೆಗೆ ಸಮಯಾವಕಾಶ ಕೋರಿದ್ದರು. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ನಡೆಸಿರುವ ಬಗ್ಗೆ ಪುರಾವೆಗಳಿಲ್ಲ ಎಂದು ಅವರು ವಾದಿಸಿದ್ದರು. ಅಲ್ಲದೆ ತಮ್ಮ ಕಕ್ಷಿದಾರರು ಪ್ರಾಸಿಕ್ಯೂಷನ್‌ಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ ಹೇಳಿದ್ದರು.

ತಮ್ಮ ಕಕ್ಷಿದಾರ ವಿನಯ್‌ ಅವರ ರಾಜಕೀಯ ಜೀವನ ಮುಗಿದುಹೋಗಿದೆ. ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಹ ಕೃತ್ಯ ಎಸಗಿದ್ದರೆ ಕಾನೂನು ಅವರಿಗೆ ಶಿಕ್ಷಿಸಲಿ ಎಂದ ಸಿಂಗ್‌, ಜಾಮೀನು ಷರತ್ತುಗಳನ್ನು ವಿನಯ್‌ ಉಲ್ಲಂಘಿಸಿಲ್ಲ ಎಂಬುದಾಗಿ ಸಮರ್ಥಿಸಿಕೊಂಡಿದ್ದರು. ಆದರೆ, ಈ ವಾದಗಳನ್ನು ನ್ಯಾಯಾಲಯ ಒಪ್ಪಿಲ್ಲ ಎಂದು ವರದಿಯಾಗಿದೆ.

ಡಿಕೆಶಿ ಭೇಟಿಯಾದ ವಿನಯ್ ಕುಲಕರ್ಣಿ

ಜಾಮೀನು ರದ್ದುಗೊಂಡಿರುವ ಹಿನ್ನೆಲೆ, ವಿನಯ್ ಕುಲಕರ್ಣಿ ಬಂಧನ ಭೀತಿಯಲ್ಲಿದ್ದಾರೆ. ಹಾಗಾಗಿ, ಶನಿವಾರ ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕುಟುಂಬ ಸಮೇತ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಮನೆಯಿಂದಲೇ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಜೊತೆ ಜಾಮೀನು ರದ್ದಾಗಿರುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ನಿರ್ಧಾರಕ್ಕೆ ತಲೆ ಬಾಗುತ್ತೇನೆ : ವಿನಯ್ ಕುಲಕರ್ಣಿ

ಡಿಕೆಶಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, “ಜಾಮೀನು ರದ್ದು ಮಾಡಿಸಿರುವುದರ ಹಿಂದೆ ಹಲವಾರು ಜನ ಕೈವಾಡ ಇದೆ. ನ್ಯಾಯಾಲಯದ ನಿರ್ಧಾರಕ್ಕೆ ನಾನು ತಲೆಬಾಗುತ್ತೇನೆ. ಇನ್ನೆರಡು ವಾರ ಬಿಟ್ಟು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ. ಜಾಮೀನು ರದ್ದಾಗಿರುವ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡಲು ಆಗಮಿಸಿದ್ದೆ ಎಂದು ಹೇಳಿದ್ದಾರೆ.

2016ರ ಮೇ ತಿಂಗಳಲ್ಲಿ ಯೋಗೇಶ್‌ ಗೌಡ ಅವರ ಕೊಲೆ ನಡೆದಿತ್ತು. ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ಆರೋಪಿ ಚಂದ್ರಶೇಖರ ಇಂಡಿ  ಅಲಿಯಾಸ್ ಚಂದು ಮಾಮಾ ಅವರಿಗೆ ನೀಡಿದ್ದ ಜಾಮೀನನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ನಿರಾಕರಿಸಿತ್ತು. ವಿನಯ್ 2021ರ ಆಗಸ್ಟ್‌ 11ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶಗೌಡರನ್ನು 2016ರ ಜೂ. 15ರಂದು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು.

ಪ್ರಕರಣ ಸಂಬಂಧ ಆರಂಭದಲ್ಲಿ ಆರೋಪಿ ಬಸವರಾಜ್ ಮುತ್ತಗಿ ಹಾಗೂ ಆತನ ತಂಡವನ್ನು ಪೊಲೀಸರು ಬಂಧಿಸಿದ್ದರು. ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಪ್ರಕರಣವನ್ನು ಸಿಬಿಐಗೆ ನೀಡಿದರು. ತನಿಖೆ ಕೈಗೆತ್ತಿಕೊಂಡ ಸಿಬಿಐ 2020 ನವೆಂಬರ್ 5ರಂದು ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

9 ತಿಂಗಳು ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಆಗಸ್ಟ್ 11, 2021ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆಗಸ್ಟ್​ 13ರಂದು ಅವರು ಜೈಲಿನಿಂದ ಹೊರಗೆ ಬಂದಿದ್ದರು.  ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಅನೇಕ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಅನ್ನೋದು ಪ್ರಮುಖ ಷರತ್ತು. ಆದರೂ, ಈ ನಡುವೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ‘ನೈತಿಕ ಹೊಣೆ’ ಹೊತ್ತು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...