Homeಕರ್ನಾಟಕಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

- Advertisement -
- Advertisement -

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಜೂ.6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ.

ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್‌ ಹಾಗೂ ಸತೀಶ್ಚಂದ್ರ ಶರ್ಮಾ ಅವರಿದ್ದ ಪೀಠ, ಒಂದು ವಾರದ ಒಳಗಾಗಿ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿ ಅವರಿಗೆ ನಿರ್ದೇಶನ ನೀಡಿದೆ.

ವಿನಯ್ ಕುಲಕರ್ಣಿ ತಮ್ಮ ಪತ್ನಿ, ಚಾಲಕ ಮತ್ತು ಗನ್‌ಮ್ಯಾನ್ ಮೊಬೈಲ್ ಫೋನ್ ಬಳಸಿ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಸಂಪರ್ಕಿಸಿದ್ದಾರೆ ಎಂದು ಸರ್ಕಾರ ಮತ್ತು ಸಿಬಿಐ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ವಾದಿಸಿದ್ದಾರೆ. ಆರೋಪಿಗಳು ಮತ್ತು ಪ್ರಕರಣದ ಪ್ರಮುಖ ವ್ಯಕ್ತಿಗಳ ನಂಟನ್ನು ಬಿಂಬಿಸುವ ಛಾಯಾಚಿತ್ರಗಳನ್ನು ಅವರು ಪೀಠಕ್ಕೆ ತೋರಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿನಯ್ ಕುಲಕರ್ಣಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್ , ಪ್ರತಿಕ್ರಿಯೆ ಸಲ್ಲಿಸಲು ಸೋಮವಾರದವರೆಗೆ ಸಮಯಾವಕಾಶ ಕೋರಿದ್ದರು. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ನಡೆಸಿರುವ ಬಗ್ಗೆ ಪುರಾವೆಗಳಿಲ್ಲ ಎಂದು ಅವರು ವಾದಿಸಿದ್ದರು. ಅಲ್ಲದೆ ತಮ್ಮ ಕಕ್ಷಿದಾರರು ಪ್ರಾಸಿಕ್ಯೂಷನ್‌ಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ ಹೇಳಿದ್ದರು.

ತಮ್ಮ ಕಕ್ಷಿದಾರ ವಿನಯ್‌ ಅವರ ರಾಜಕೀಯ ಜೀವನ ಮುಗಿದುಹೋಗಿದೆ. ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಹ ಕೃತ್ಯ ಎಸಗಿದ್ದರೆ ಕಾನೂನು ಅವರಿಗೆ ಶಿಕ್ಷಿಸಲಿ ಎಂದ ಸಿಂಗ್‌, ಜಾಮೀನು ಷರತ್ತುಗಳನ್ನು ವಿನಯ್‌ ಉಲ್ಲಂಘಿಸಿಲ್ಲ ಎಂಬುದಾಗಿ ಸಮರ್ಥಿಸಿಕೊಂಡಿದ್ದರು. ಆದರೆ, ಈ ವಾದಗಳನ್ನು ನ್ಯಾಯಾಲಯ ಒಪ್ಪಿಲ್ಲ ಎಂದು ವರದಿಯಾಗಿದೆ.

ಡಿಕೆಶಿ ಭೇಟಿಯಾದ ವಿನಯ್ ಕುಲಕರ್ಣಿ

ಜಾಮೀನು ರದ್ದುಗೊಂಡಿರುವ ಹಿನ್ನೆಲೆ, ವಿನಯ್ ಕುಲಕರ್ಣಿ ಬಂಧನ ಭೀತಿಯಲ್ಲಿದ್ದಾರೆ. ಹಾಗಾಗಿ, ಶನಿವಾರ ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕುಟುಂಬ ಸಮೇತ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಮನೆಯಿಂದಲೇ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಜೊತೆ ಜಾಮೀನು ರದ್ದಾಗಿರುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ನಿರ್ಧಾರಕ್ಕೆ ತಲೆ ಬಾಗುತ್ತೇನೆ : ವಿನಯ್ ಕುಲಕರ್ಣಿ

ಡಿಕೆಶಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, “ಜಾಮೀನು ರದ್ದು ಮಾಡಿಸಿರುವುದರ ಹಿಂದೆ ಹಲವಾರು ಜನ ಕೈವಾಡ ಇದೆ. ನ್ಯಾಯಾಲಯದ ನಿರ್ಧಾರಕ್ಕೆ ನಾನು ತಲೆಬಾಗುತ್ತೇನೆ. ಇನ್ನೆರಡು ವಾರ ಬಿಟ್ಟು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ. ಜಾಮೀನು ರದ್ದಾಗಿರುವ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡಲು ಆಗಮಿಸಿದ್ದೆ ಎಂದು ಹೇಳಿದ್ದಾರೆ.

2016ರ ಮೇ ತಿಂಗಳಲ್ಲಿ ಯೋಗೇಶ್‌ ಗೌಡ ಅವರ ಕೊಲೆ ನಡೆದಿತ್ತು. ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ಆರೋಪಿ ಚಂದ್ರಶೇಖರ ಇಂಡಿ  ಅಲಿಯಾಸ್ ಚಂದು ಮಾಮಾ ಅವರಿಗೆ ನೀಡಿದ್ದ ಜಾಮೀನನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ನಿರಾಕರಿಸಿತ್ತು. ವಿನಯ್ 2021ರ ಆಗಸ್ಟ್‌ 11ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶಗೌಡರನ್ನು 2016ರ ಜೂ. 15ರಂದು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು.

ಪ್ರಕರಣ ಸಂಬಂಧ ಆರಂಭದಲ್ಲಿ ಆರೋಪಿ ಬಸವರಾಜ್ ಮುತ್ತಗಿ ಹಾಗೂ ಆತನ ತಂಡವನ್ನು ಪೊಲೀಸರು ಬಂಧಿಸಿದ್ದರು. ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಪ್ರಕರಣವನ್ನು ಸಿಬಿಐಗೆ ನೀಡಿದರು. ತನಿಖೆ ಕೈಗೆತ್ತಿಕೊಂಡ ಸಿಬಿಐ 2020 ನವೆಂಬರ್ 5ರಂದು ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

9 ತಿಂಗಳು ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಆಗಸ್ಟ್ 11, 2021ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆಗಸ್ಟ್​ 13ರಂದು ಅವರು ಜೈಲಿನಿಂದ ಹೊರಗೆ ಬಂದಿದ್ದರು.  ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಅನೇಕ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಅನ್ನೋದು ಪ್ರಮುಖ ಷರತ್ತು. ಆದರೂ, ಈ ನಡುವೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ‘ನೈತಿಕ ಹೊಣೆ’ ಹೊತ್ತು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....