Homeಕರ್ನಾಟಕಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

- Advertisement -
- Advertisement -

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಜೂ.6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ.

ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್‌ ಹಾಗೂ ಸತೀಶ್ಚಂದ್ರ ಶರ್ಮಾ ಅವರಿದ್ದ ಪೀಠ, ಒಂದು ವಾರದ ಒಳಗಾಗಿ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿ ಅವರಿಗೆ ನಿರ್ದೇಶನ ನೀಡಿದೆ.

ವಿನಯ್ ಕುಲಕರ್ಣಿ ತಮ್ಮ ಪತ್ನಿ, ಚಾಲಕ ಮತ್ತು ಗನ್‌ಮ್ಯಾನ್ ಮೊಬೈಲ್ ಫೋನ್ ಬಳಸಿ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಸಂಪರ್ಕಿಸಿದ್ದಾರೆ ಎಂದು ಸರ್ಕಾರ ಮತ್ತು ಸಿಬಿಐ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ವಾದಿಸಿದ್ದಾರೆ. ಆರೋಪಿಗಳು ಮತ್ತು ಪ್ರಕರಣದ ಪ್ರಮುಖ ವ್ಯಕ್ತಿಗಳ ನಂಟನ್ನು ಬಿಂಬಿಸುವ ಛಾಯಾಚಿತ್ರಗಳನ್ನು ಅವರು ಪೀಠಕ್ಕೆ ತೋರಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿನಯ್ ಕುಲಕರ್ಣಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್ , ಪ್ರತಿಕ್ರಿಯೆ ಸಲ್ಲಿಸಲು ಸೋಮವಾರದವರೆಗೆ ಸಮಯಾವಕಾಶ ಕೋರಿದ್ದರು. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ನಡೆಸಿರುವ ಬಗ್ಗೆ ಪುರಾವೆಗಳಿಲ್ಲ ಎಂದು ಅವರು ವಾದಿಸಿದ್ದರು. ಅಲ್ಲದೆ ತಮ್ಮ ಕಕ್ಷಿದಾರರು ಪ್ರಾಸಿಕ್ಯೂಷನ್‌ಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ ಹೇಳಿದ್ದರು.

ತಮ್ಮ ಕಕ್ಷಿದಾರ ವಿನಯ್‌ ಅವರ ರಾಜಕೀಯ ಜೀವನ ಮುಗಿದುಹೋಗಿದೆ. ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಹ ಕೃತ್ಯ ಎಸಗಿದ್ದರೆ ಕಾನೂನು ಅವರಿಗೆ ಶಿಕ್ಷಿಸಲಿ ಎಂದ ಸಿಂಗ್‌, ಜಾಮೀನು ಷರತ್ತುಗಳನ್ನು ವಿನಯ್‌ ಉಲ್ಲಂಘಿಸಿಲ್ಲ ಎಂಬುದಾಗಿ ಸಮರ್ಥಿಸಿಕೊಂಡಿದ್ದರು. ಆದರೆ, ಈ ವಾದಗಳನ್ನು ನ್ಯಾಯಾಲಯ ಒಪ್ಪಿಲ್ಲ ಎಂದು ವರದಿಯಾಗಿದೆ.

ಡಿಕೆಶಿ ಭೇಟಿಯಾದ ವಿನಯ್ ಕುಲಕರ್ಣಿ

ಜಾಮೀನು ರದ್ದುಗೊಂಡಿರುವ ಹಿನ್ನೆಲೆ, ವಿನಯ್ ಕುಲಕರ್ಣಿ ಬಂಧನ ಭೀತಿಯಲ್ಲಿದ್ದಾರೆ. ಹಾಗಾಗಿ, ಶನಿವಾರ ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕುಟುಂಬ ಸಮೇತ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಮನೆಯಿಂದಲೇ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಜೊತೆ ಜಾಮೀನು ರದ್ದಾಗಿರುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ನಿರ್ಧಾರಕ್ಕೆ ತಲೆ ಬಾಗುತ್ತೇನೆ : ವಿನಯ್ ಕುಲಕರ್ಣಿ

ಡಿಕೆಶಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, “ಜಾಮೀನು ರದ್ದು ಮಾಡಿಸಿರುವುದರ ಹಿಂದೆ ಹಲವಾರು ಜನ ಕೈವಾಡ ಇದೆ. ನ್ಯಾಯಾಲಯದ ನಿರ್ಧಾರಕ್ಕೆ ನಾನು ತಲೆಬಾಗುತ್ತೇನೆ. ಇನ್ನೆರಡು ವಾರ ಬಿಟ್ಟು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ. ಜಾಮೀನು ರದ್ದಾಗಿರುವ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡಲು ಆಗಮಿಸಿದ್ದೆ ಎಂದು ಹೇಳಿದ್ದಾರೆ.

2016ರ ಮೇ ತಿಂಗಳಲ್ಲಿ ಯೋಗೇಶ್‌ ಗೌಡ ಅವರ ಕೊಲೆ ನಡೆದಿತ್ತು. ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ಆರೋಪಿ ಚಂದ್ರಶೇಖರ ಇಂಡಿ  ಅಲಿಯಾಸ್ ಚಂದು ಮಾಮಾ ಅವರಿಗೆ ನೀಡಿದ್ದ ಜಾಮೀನನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ನಿರಾಕರಿಸಿತ್ತು. ವಿನಯ್ 2021ರ ಆಗಸ್ಟ್‌ 11ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶಗೌಡರನ್ನು 2016ರ ಜೂ. 15ರಂದು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು.

ಪ್ರಕರಣ ಸಂಬಂಧ ಆರಂಭದಲ್ಲಿ ಆರೋಪಿ ಬಸವರಾಜ್ ಮುತ್ತಗಿ ಹಾಗೂ ಆತನ ತಂಡವನ್ನು ಪೊಲೀಸರು ಬಂಧಿಸಿದ್ದರು. ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಪ್ರಕರಣವನ್ನು ಸಿಬಿಐಗೆ ನೀಡಿದರು. ತನಿಖೆ ಕೈಗೆತ್ತಿಕೊಂಡ ಸಿಬಿಐ 2020 ನವೆಂಬರ್ 5ರಂದು ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

9 ತಿಂಗಳು ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಆಗಸ್ಟ್ 11, 2021ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆಗಸ್ಟ್​ 13ರಂದು ಅವರು ಜೈಲಿನಿಂದ ಹೊರಗೆ ಬಂದಿದ್ದರು.  ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಅನೇಕ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಅನ್ನೋದು ಪ್ರಮುಖ ಷರತ್ತು. ಆದರೂ, ಈ ನಡುವೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ‘ನೈತಿಕ ಹೊಣೆ’ ಹೊತ್ತು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...