Homeಮುಖಪುಟಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ...

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿದೆ.

ಗುಜರಾತ್ ಸರ್ಕಾರ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಇದರಿಂದಾಗಿ ಎಲ್ಲ 11 ಅಪರಾಧಿಗಳು ಮತ್ತೆ ಜೈಲಿಗೆ ಹೋಗಬೇಕಾಗಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿದೆ. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದು ಪ್ರತಿಪಕ್ಷಗಳು, ಮತ್ತು ನಾಗರಿಕ ಸಮಾಜದಿಂದ ಖಂಡನೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.

ಜೈಲಿನಿಂದ ಬಿಡುಗಡೆಯಾದ ಅಪರಾಧಿಗಳಿಗೆ ಅದ್ದೂರಿ ಸ್ವಾಗತ ಮಾಡಲಾಗಿತ್ತು. ಆ ಬಳಿಕ ಅಪರಾಧಿಗಳು ಬಿಜೆಪಿ ಸಂಸದ ಮತ್ತು ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಕೂಡ ಕಂಡುಬಂದಿದೆ. ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ವಕೀಲಿ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದನ್ನು ಸುಪ್ರೀಂಕೋರ್ಟ್‌ನ ಗಮನಕ್ಕೆ ತರಲಾಗಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

1992ರ ಶಿಕ್ಷೆ ಕಡಿತ ನೀತಿಯಾನುಸಾರ ಗುಜರಾತ್‌ ಸರ್ಕಾರ ಅಪರಾಧಿಗಳನ್ನು ಬಿಡುಗಡೆಗೊಳಿಸಿತ್ತು. ಆದರೆ ಈ ಕಾನೂನಿನ ಸ್ಥಾನದಲ್ಲಿ 2014ರಲ್ಲಿ ಜಾರಿಗೊಳಿಸಲಾದ ಕಾನೂನಿನ ಪ್ರಕಾರ ದೊಡ್ಡ ಶಿಕ್ಷೆ ಎದುರಿಸುವ ಪ್ರಕರಣಗಳಲ್ಲಿ ಶಿಕ್ಷೆ ಕಡಿತಗೊಳಿಸುವುದನ್ನು ನಿಷೇಧಿಸಲಾಗಿದೆ.

1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ. ಬಿಲ್ಕಿಸ್ ಬಾನು ಪ್ರಕರಣವನ್ನು ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ಆದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರವೇ ಹೊರತು ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಲು ಅರ್ಹತೆ ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. 2004ರಲ್ಲಿ ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮುಂಬೈಗೆ ವರ್ಗಾಯಿಸಲಾಗಿತ್ತು.

ಜೈಲಿನಲ್ಲಿ 14 ವರ್ಷಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ವಯಸ್ಸು, ಅಪರಾಧದ ಸ್ವರೂಪ, ಜೈಲಿನಲ್ಲಿನ ನಡವಳಿಕೆ ಮುಂತಾದ ಅಂಶಗಳಿಂದಾಗಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜ್ ಕುಮಾರ್ ಹೇಳಿದ್ದರು.

ಇದನ್ನು ಓದಿ; ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...