Homeಮುಖಪುಟನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಆದೇಶಿಸಿದ ರಾಷ್ಟ್ರಪತಿ

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಆದೇಶಿಸಿದ ರಾಷ್ಟ್ರಪತಿ

- Advertisement -
- Advertisement -

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದರು. ಸುಪ್ರೀಂಕೋರ್ಟ್‌ನ ಮುಂದಿನ

ನ್ಯಾಯಮೂರ್ತಿ ಚಂದ್ರಚೂಡ್ ಅವರು ನಿವೃತ್ತರಾದ ಒಂದು ದಿನದ ನಂತರ, ನವೆಂಬರ್ 11ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಗುರುವಾರ ಸಂಜೆ X ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ” ಎಂದು ಅವರ ಪೋಸ್ಟ್ ಹೇಳಿದೆ.

ನ್ಯಾಯಮೂರ್ತಿ ಖನ್ನಾ ಅವರನ್ನು 2019 ರಲ್ಲಿ ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ನೇಮಿಸಲಾಗಿತ್ತು. ಅವರು 2025ರ ಮೇ 13ರಂದು ನಿವೃತ್ತರಾಗಲಿದ್ದಾರೆ. ಅವರು ಕಳೆದ ವರ್ಷ ಭಾರತದ ಸಂವಿಧಾನದ 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು. ಸುಪ್ರೀಂಕೋರ್ಟ್‌ನ ಮುಂದಿನ

ಸುಪ್ರೀಂ ಕೋರ್ಟ್‌ನ ಭಾಗವಾಗಿ, ನ್ಯಾಯಮೂರ್ತಿ ಖನ್ನಾ ಅವರು ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಅವರು ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ಅನುಮತಿಸುವ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿದ ಸಂವಿಧಾನ ಪೀಠದ ಭಾಗವಾಗಿದ್ದರು.

ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.

ನ್ಯಾಯಮೂರ್ತಿ ಸಂಜೀವ್ ಖನ್ನಾ ವೃತ್ತಿ ಜೀವನದ ಪರಿಚಯ

ಮೇ 1960ರಲ್ಲಿ ಜನಿಸಿದ ಜಸ್ಟಿಸ್ ಖನ್ನಾ ಅವರು, 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ವಕೀಲರಾಗಿ ಸೇರಿಕೊಂಡರು. ದೆಹಲಿಯ ತೀಸ್ ಹಜಾರಿ ಸಂಕೀರ್ಣದಲ್ಲಿ ಜಿಲ್ಲಾ ನ್ಯಾಯಾಲಯಗಳ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ದೆಹಲಿ ಹೈಕೋರ್ಟ್‌ವರೆಗೂ ಕೆಲಸ ಮಾಡಿದ್ದಾರೆ.

ಖನ್ನಾ ಅವರು ಸಾಂವಿಧಾನಿಕ ಕಾನೂನು, ನೇರ ತೆರಿಗೆ, ಮಧ್ಯಸ್ಥಿಕೆ, ವಾಣಿಜ್ಯ ಕಾನೂನು, ಕಂಪನಿ ಕಾನೂನು, ಭೂ ಕಾನೂನು, ಪರಿಸರ ಕಾನೂನು ಮತ್ತು ವೈದ್ಯಕೀಯ ನಿರ್ಲಕ್ಷ್ಯವನ್ನು ಒಳಗೊಂಡ ವಿವಿಧ ನ್ಯಾಯಮಂಡಳಿಗಳ ಭಾಗವಾಗಿದ್ದರು. ಹೆಚ್ಚುವರಿಯಾಗಿ, ಅವರು ದೀರ್ಘಾವಧಿಯವರೆಗೆ ಆದಾಯ ತೆರಿಗೆ ಇಲಾಖೆಯ ಹಿರಿಯ ಸ್ಥಾಯಿ ವಕೀಲರ ಹುದ್ದೆಯನ್ನು ಹೊಂದಿದ್ದರು.

2004 ರಲ್ಲಿ, ನ್ಯಾಯಮೂರ್ತಿ ಖನ್ನಾ ಅವರನ್ನು ದೆಹಲಿಯ ಸ್ಥಾಯಿ ವಕೀಲರಾಗಿ (ಸಿವಿಲ್) ನೇಮಿಸಲಾಯಿತು. ಅಲ್ಲಿ ಅವರ ಅಧಿಕಾರಾವಧಿಯಲ್ಲಿ, ಅವರು ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿಯಾಗಿ ಹಲವಾರು ಕ್ರಿಮಿನಲ್ ಮೊಕದ್ದಮೆಗಳನ್ನು ವಿಚಾರಣೆ ನಡೆಸಿದ್ದಾರೆ.

2005 ರಲ್ಲಿ, ಖನ್ನಾ ಅವರು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 2006 ರಲ್ಲಿ ಖಾಯಂ ನ್ಯಾಯಾಧೀಶರಾದರು. ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ ಖನ್ನಾ ಅವರು ದೆಹಲಿ ನ್ಯಾಯಾಂಗ ಅಕಾಡೆಮಿ, ದೆಹಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳ ಅಧ್ಯಕ್ಷ/ಪ್ರಭಾರ ನ್ಯಾಯಾಧೀಶರೂ ಆಗಿದ್ದರು.

ಜನವರಿ 18,2019 ರಂದು, ನ್ಯಾಯಮೂರ್ತಿ ಖನ್ನಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನ ಅಧಿಕಾರಾವಧಿಯಲ್ಲಿ, ಅವರು ಜೂನ್ 2023 ರಿಂದ ಡಿಸೆಂಬರ್ 2023 ರವರೆಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹುದ್ದೆಯನ್ನು ನಿಭಾಯಿಸಿದ್ದರು.

ಪ್ರಸ್ತುತ, ಅವರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದಾರೆ ಮತ್ತು ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ಆಡಳಿತ ಸಲಹೆಗಾರರ ​​​​ಸದಸ್ಯರಾಗಿದ್ದಾರೆ.

ನ್ಯಾಯಮೂರ್ತಿ ಖನ್ನಾ ಅವರು ಮೇ 2025ರಲ್ಲಿ ನಿವೃತ್ತರಾಗಲಿದ್ದಾರೆ. ನವೆಂಬರ್‌ನಲ್ಲಿ ಸಿಜೆಐ ಹುದ್ದೆಗೇರಲಿರುವ ಅವರು, ಆರು ತಿಂಗಳ ಕಾಲ ಆ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...