Homeಮುಖಪುಟಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

- Advertisement -
- Advertisement -

12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕೊಲಿಜಿಯಂ ನೀಡಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಆರೋಪಿಸಿವೆ.

ಒಟ್ಟು 68 ನ್ಯಾಯಮೂರ್ತಿಗಳ ನೇಮಕ ಮಾಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ನ್ಯಾಯಾವಾದಿ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಹೆಸರುಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಅನುಮೋದನೆ ನೀಡಿತ್ತು. ಆಗಸ್ಟ್‌ 31ರಂದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿದ್ದು, ಅಪೂತಪೂರ್ವ ಕ್ಷಣವೆಂದೇ ವಿಶ್ಲೇಷಿಸಲಾಗಿತ್ತು.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ವರದಿಯಲ್ಲಿ ಮತ್ತು ಜೂತೆಗೆ
    ಬಹಳವಾಗಿ advertisement ಬರಲಾರಂಬಿಸಿವೆ.
    ಅಪ್ಪಿ ತಪ್ಪೀ touch ಆದರೆ ಸಾಕು ನಿಮ್ಮ permanent ಆಗಿ ಹೊರಗಡೆ ಹೋಗಿಬಿಡುತ್ತೇವೆ.
    ಇದು ಒಳ್ಳೆಯ ಬೆಳವಣಿಗೆ ಅಲ್ಲ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...