Homeಮುಖಪುಟಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

- Advertisement -
- Advertisement -

12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕೊಲಿಜಿಯಂ ನೀಡಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಆರೋಪಿಸಿವೆ.

ಒಟ್ಟು 68 ನ್ಯಾಯಮೂರ್ತಿಗಳ ನೇಮಕ ಮಾಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ನ್ಯಾಯಾವಾದಿ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಹೆಸರುಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಅನುಮೋದನೆ ನೀಡಿತ್ತು. ಆಗಸ್ಟ್‌ 31ರಂದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿದ್ದು, ಅಪೂತಪೂರ್ವ ಕ್ಷಣವೆಂದೇ ವಿಶ್ಲೇಷಿಸಲಾಗಿತ್ತು.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ವರದಿಯಲ್ಲಿ ಮತ್ತು ಜೂತೆಗೆ
    ಬಹಳವಾಗಿ advertisement ಬರಲಾರಂಬಿಸಿವೆ.
    ಅಪ್ಪಿ ತಪ್ಪೀ touch ಆದರೆ ಸಾಕು ನಿಮ್ಮ permanent ಆಗಿ ಹೊರಗಡೆ ಹೋಗಿಬಿಡುತ್ತೇವೆ.
    ಇದು ಒಳ್ಳೆಯ ಬೆಳವಣಿಗೆ ಅಲ್ಲ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...