Homeಮುಖಪುಟಮುಚ್ಚಿದ ಕವರ್‌ಗಳಲ್ಲಿ ದಾಖಲೆ ಸಲ್ಲಿಸುವ ಕ್ರಮವನ್ನು ಟೀಕಿಸಿದ ಸುಪ್ರೀಂಕೋರ್ಟ್!

ಮುಚ್ಚಿದ ಕವರ್‌ಗಳಲ್ಲಿ ದಾಖಲೆ ಸಲ್ಲಿಸುವ ಕ್ರಮವನ್ನು ಟೀಕಿಸಿದ ಸುಪ್ರೀಂಕೋರ್ಟ್!

- Advertisement -
- Advertisement -

ಎರಡು ಪ್ರತ್ಯೇಕ ವಿಚಾರಣೆಗಳ ಸಂದರ್ಭದಲ್ಲಿ, ಸರ್ಕಾರಗಳ ‘ಮುಚ್ಚಿದ ಕವರ್‌ ನ್ಯಾಯಶಾಸ್ತ್ರ’ದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಟೀಕಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಕ್ರಮದಂತೆ ಸರ್ಕಾರಗಳು ಮತ್ತು ಅದರ ಏಜೆನ್ಸಿಗಳು ಮೊಹರು ಮಾಡಿದ ಲಕೋಟೆಗಳಲ್ಲಿ ದಾಖಲೆಗಳನ್ನು ನ್ಯಾಯಾಧೀಶರಿಗೆ ಸಲ್ಲಿಸುತ್ತವೆ. ಈ ದಾಖಲೆಗಳಲ್ಲಿ ಇರುವ ವಿಷಯಗಳನ್ನು ಎದುರು ವಾದಿಸುತ್ತಿರುವ ಪಕ್ಷದವರೊಂದಿಗೆ ಹಂಚಿಕೊಳ್ಳುವುದಿಲ್ಲ.

ದಿ ಹಿಂದೂ ಪ್ರಕಾರ, ಪ್ರಕರಣವು ಹೆಚ್ಚು ಸೂಕ್ಷ್ಮವಾಗಿದ್ದು, ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು ಎಂಬ ಆಧಾರದ ಮೇಲೆ ನಡೆಯನ್ನು ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್ 

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಬಿಹಾರ ಸರ್ಕಾರದ ವಿರುದ್ಧ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆ ನಡೆಸುವಾಗ, ಮುಚ್ಚಿದ ಕವರ್‌ನಲ್ಲಿ ದಾಖಲೆಗಳನ್ನು ಸ್ವೀಕರಿಸಲು ನಿರಾಕರಿಸಿದರು.

“ಯಾವುದೇ ಸೀಲ್ಡ್ ಕವರ್‌ಗಳನ್ನು ನೀಡಬೇಡಿ, ಅದನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ, ನನಗೆ ಯಾವುದೇ ಸೀಲ್ಡ್ ಕವರ್ ಬೇಡ” ಎಂದು ನ್ಯಾಯಮೂರ್ತಿ ರಮಣ ಹೇಳಿದ್ದಾರೆ ಎಂದು ಲೈಲಾ ವೆಬ್‌ಸೈಟ್‌ ವರದಿ ಮಾಡಿದೆ.

ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಟಿವಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆಯ ಸಮಯದಲ್ಲಿ ‘ಮುಚ್ಚಿದ ಕವರ್’ ಅನ್ನು ಅವಲಂಬಿಸುವುದು ಸರಿಯೆ ಎಂಬುವುದನ್ನು ಪರಿಶೀಲಿಸುವುದಾಗಿ ಹೇಳಿದೆ.

‘ಸೀಲ್ಡ್ ಕವರ್ ನ್ಯಾಯಶಾಸ್ತ್ರವನ್ನು ನಾನು ತುಂಬಾ ವಿರೋಧಿಸುತ್ತೇನೆ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ:  ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ಮೀಡಿಯಾ ಒನ್ ಪ್ರಕರಣದಲ್ಲಿ, ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಕೇರಳ ಹೈಕೋರ್ಟ್ ಮಾರ್ಚ್ 2 ರಂದು ಸುದ್ದಿ ವಾಹಿನಿಯ ಮೇಲಿನ ಒಕ್ಕೂಟ ಸರ್ಕಾರದ ನಿಷೇಧವನ್ನು ಎತ್ತಿ ಹಿಡಿದಿತ್ತು. ಒಕ್ಕೂಟ ಸರ್ಕಾರ ನೀಡಿರುವ ಕೆಲವು ಗೌಪ್ಯ ಕಡತಗಳು ಚಾನೆಲ್ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಹೇಳಿದ್ದರು.

ಇದರ ನಂತರ ಚಾನೆಲ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಮೀಡಿಯಾ ಒನ್ ಟಿವಿಯ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಫೈಲ್‌ಗಳನ್ನು ಪ್ರಸ್ತುತಪಡಿಸುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿತು. ಕಡತಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ನಿಷೇಧಕ್ಕೆ ತಡೆಯಾಜ್ಞೆ ನೀಡಿದೆ.

ಒಕ್ಕೂಟ ಸರ್ಕಾರವು ತಮ್ಮ ನಿರ್ಧಾರವನ್ನು ರಕ್ಷಿಸಿಕೊಳ್ಳುವ ಕಾರಣಗಳನ್ನು ಚಾನೆಲ್‌ಗೆ ಬಹಿರಂಗಪಡಿಸಬೇಕು ಎಂದು ನ್ಯಾಯಾಲಯವು ಸರ್ಕಾರಕ್ಕೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. “ಫೈಲ್‌ಗಳನ್ನು ಬಹಿರಂಗಪಡಿಸುವಲ್ಲಿ ತೊಂದರೆ ಏನಿದೆ?” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...