Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...