Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...