Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...