Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...