Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...