Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...