Homeಮುಖಪುಟಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

- Advertisement -
- Advertisement -

ಜನವರಿ 30ರಂದು ನಡೆದಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ ಕುಲದೀಪ್ ಕುಮಾರ್ ಅವರು ಕಾನೂನುಬದ್ಧ ವಿಜೇತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಘೋಷಣೆ ಮಾಡಿದೆ.

ಈ ಮೂಲಕ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಅವರು ಎಎಪಿ ಸದಸ್ಯರ ಎಂಟು ಮತಗಳನ್ನು ಉದ್ದೇಶಪೂರ್ವಕವಾಗಿ ಅಮಾನ್ಯಗೊಳಿಸಿದ್ದರಿಂದ ಉಂಟಾಗಿದ್ದ ವಿವಾದಕ್ಕೆ ಅಂತ್ಯ ಹಾಡಿದೆ.

ಚುನಾವಣೆಯಲ್ಲಿ ಅಕ್ರಮ ಎಸಗಿದ ಬಿಜೆಪಿ ಅಲ್ಪಸಂಖ್ಯಾತ ಸೆಲ್‌ನ ಮಾಜಿ ಸದಸ್ಯರಾಗಿರುವ ಚುನಾವಣಾಧಿಕಾರಿ ಅನಿಲ್ ಮಾಸಿಹ್ ವಿರುದ್ದ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. 8 ಮತಪತ್ರಗಳು ವಿರೂಪಗೊಂಡಿದ್ದರಿಂದ ಅವುಗಳ ಮೇಲೆ ಗುರುತು ಹಾಕಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಅನಿಲ್ ಮಾಸಿಹ್ ವಿರುದ್ದ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪಿನಿಂದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪಣ ತೊಟ್ಟಿರುವ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಮಟ್ಟದ ಗೆಲುವು ಸಿಕ್ಕಿದಂತಾಗಿದೆ. ಏಕೆಂದರೆ, ಚಂಡೀಗಢ ಮೇಯರ್ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದ ಮೊದಲ ಸವಾಲು ಎಂದು ಪರಿಗಣಿಸಲಾಗಿತ್ತು.

ಚುನಾವಣಾಧಿಕಾರಿ ಅನಿಲ್ ಮಾಸಿಹ್ ಅವರು ಅಸಿಂಧು ಎಂದು ಘೋಷಿಸಿದ್ದ ಎಎಪಿ ಸದಸ್ಯರ ಎಂಟು ಮತಗಳನ್ನು ಮಾನ್ಯವೆಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಈ ಮೂಲಕ ಎಎಪಿ-ಕಾಂಗ್ರೆಸ್‌ನ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು 20 ಮತಗಳೊಂದಿಗೆ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ : ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...