Homeಮುಖಪುಟಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ.

ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ ಸಿಂಗ್ ಅವರ ಪೀಠವು, ದೃಢವಾದ ಪುರಾವೆಗಳಿಲ್ಲದೆ ಮಧ್ಯಪ್ರವೇಶಿಸಲು ಒಲವು ತೋರಿಲ್ಲ ಎಂದು ವರದಿಯಾಗಿದೆ.

“ಪ್ರತಿ ಬಾರಿಯೂ ನಿಮ್ಮದೊಂದು ಹೊಸ ಕಥೆ ಸಿದ್ದವಾಗುತ್ತದೆ. ಈ ಬಾರಿ ಈ ಸುಂದರವಾದ ರಚಿಸಿದ್ದೀರಿ. ಸಮುದ್ರಕ್ಕೆ ತಳ್ಳಿದ್ದರ ಫೋಟೋ, ವಿಡಿಯೋ ತೆಗೆದವರು ಯಾರು? ಅವರು ವಾಪಸ್ ಬಂದಿದ್ದು ಹೇಗೆ? ಏನು ದಾಖಲೆ ಇದೆ?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

“ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ನೀವು ಈ ಕಾಲ್ಪನಿಕ ಅರ್ಜಿ ಸಲ್ಲಿಸಿದ್ದೀರಿ” ನ್ಯಾಯಾಧೀಶರು ಹೇಳಿದ್ದಾರೆ. ಈ ಮೂಲಕ ಅವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದರ ನಂತರದ ಘಟನೆಗಳನ್ನು ಉಲ್ಲೇಖಿಸಿರಬಹುದು ಎಂದು barandbench.com ವರದಿ ತಿಳಿಸಿದೆ.

ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು, ಅರ್ಜಿದಾರರಿಗೆ ಆಪಾದಿತ ಘಟನೆಗಳ ಬಗ್ಗೆ ಮಾಹಿತಿ ನೀಡುವ ಫೋನ್ ಕರೆಗಳು ಬಂದಿವೆ. ವಿಶ್ವಾಸಾರ್ಹ ಸುದ್ದಿ ವರದಿಗಳೂ ಇವೆ ಎಂದು ಹೇಳಿದ್ದಾರೆ.

“ಅವರನ್ನು (ರೋಹಿಂಗ್ಯಾ ನಿರಾಶ್ರಿತರನ್ನು) ಅಂಡಮಾನ್‌ಗೆ ಕರೆದೊಯ್ದು. ಲೈಫ್ ಜಾಕೆಟ್‌ ತೊಡಿಸಿ ಸಮುದ್ರಕ್ಕೆ ತಳ್ಳಲಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನಿಂದ ಕರೆ ಬಂದಿದೆ. ಅವರು (ಅರ್ಜಿದಾರರು) ದೆಹಲಿಯಲ್ಲಿದ್ದಾರೆ, ಅವರಿಗೆ ಫೋನ್‌ನಲ್ಲಿ ವಿಷಯ ತಿಳಿಸಲಾಗಿದೆ. ನಮ್ಮ ಬಳಿ ಫೋನ್ ಕರೆಯ ಅನುವಾದವೂ ಇದೆ. ದಯವಿಟ್ಟು ವಿದೇಶಿ ಮಾಧ್ಯಮ ವರದಿಗಳನ್ನು ನೋಡಿ… ಅದು ವಿಶ್ವಾಸಾರ್ಹ ವರದಿಗಳೆಂದು ಹೇಳುತ್ತದೆ” ಎಂದು ವಕೀಲ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ನ್ಯಾಯಾಲಯ ಈ ಬಗ್ಗೆ ಯಾವುದೇ ಆದೇಶ ನೀಡಲು ಒಲವು ತೋರಿಲ್ಲ.

“ಆ ಕರೆಗಳನ್ನು ಯಾರು ಪರಿಶೀಲಿಸಿದ್ದಾರೆ ಮತ್ತು ಯಾರಿಗೆ ಇದೆಲ್ಲದರ ಬಗ್ಗೆ ವೈಯಕ್ತಿಕ ಜ್ಞಾನವಿದೆ ಎಂಬುದನ್ನು ನಮಗೆ ತೋರಿಸಿ. ಯಾರಾದರೂ ನಿಂತು ಇದನ್ನು ವೀಕ್ಷಿಸದ, ಅರ್ಜಿದಾರರು ಅದನ್ನು ನೈಜ ಸಮಯದಲ್ಲಿ ನೋಡದ ಹೊರತು ನೀವು ಇದನ್ನು ಹೇಗೆ ದೃಢೀಕರಿಸುತ್ತೀರಿ? ಈ ವರದಿಗಳನ್ನು ದಾಖಲೆಯಲ್ಲಿ ಇರಿಸಿ… ನಾವು ನೋಡುತ್ತೇವೆ. ಹೊರಗೆ ಕುಳಿತಿರುವ ಈ ಎಲ್ಲಾ ಜನರು ನಮ್ಮ ಸಾರ್ವಭೌಮತ್ವ ಮತ್ತು ನಮ್ಮ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ರೋಹಿಂಗ್ಯಾ ನಿರಾಶ್ರಿತರನ್ನು ರಕ್ಷಿಸಬೇಕು ಎಂಬುದನ್ನು ಪರಿಗಣಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ.

“ದಯವಿಟ್ಟು ಅಂತಾರಾಷ್ಟ್ರೀಯ ನ್ಯಾಯಾಲಯವು ರೋಹಿಂಗ್ಯಾಗಳ ಬಗ್ಗೆ ಏನು ಹೇಳಿದೆ ಮತ್ತು ರೋಹಿಂಗ್ಯಾಗಳನ್ನು ಏಕೆ ವಾಪಸ್ ಕಳಿಸಬಾರದು ಎಂಬುದನ್ನು ನೋಡಿ… ವಲಸಿಗರನ್ನು ವಾಪಸ್ ಕಳಿಸಬಹುದು. ಆದರೆ, ರೋಹಿಂಗ್ಯಾಗಳನ್ನು ಕಳುಹಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅರ್ಜಿದಾರರು ಮಾಡಿರುವ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳಿದ್ದರೆ ಮಾತ್ರ ಮಧ್ಯಪ್ರವೇಶಿಸಬಹುದು ಎಂದಿದೆ.

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...