Homeಮುಖಪುಟಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ.

ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ ಸಿಂಗ್ ಅವರ ಪೀಠವು, ದೃಢವಾದ ಪುರಾವೆಗಳಿಲ್ಲದೆ ಮಧ್ಯಪ್ರವೇಶಿಸಲು ಒಲವು ತೋರಿಲ್ಲ ಎಂದು ವರದಿಯಾಗಿದೆ.

“ಪ್ರತಿ ಬಾರಿಯೂ ನಿಮ್ಮದೊಂದು ಹೊಸ ಕಥೆ ಸಿದ್ದವಾಗುತ್ತದೆ. ಈ ಬಾರಿ ಈ ಸುಂದರವಾದ ರಚಿಸಿದ್ದೀರಿ. ಸಮುದ್ರಕ್ಕೆ ತಳ್ಳಿದ್ದರ ಫೋಟೋ, ವಿಡಿಯೋ ತೆಗೆದವರು ಯಾರು? ಅವರು ವಾಪಸ್ ಬಂದಿದ್ದು ಹೇಗೆ? ಏನು ದಾಖಲೆ ಇದೆ?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

“ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ನೀವು ಈ ಕಾಲ್ಪನಿಕ ಅರ್ಜಿ ಸಲ್ಲಿಸಿದ್ದೀರಿ” ನ್ಯಾಯಾಧೀಶರು ಹೇಳಿದ್ದಾರೆ. ಈ ಮೂಲಕ ಅವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದರ ನಂತರದ ಘಟನೆಗಳನ್ನು ಉಲ್ಲೇಖಿಸಿರಬಹುದು ಎಂದು barandbench.com ವರದಿ ತಿಳಿಸಿದೆ.

ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು, ಅರ್ಜಿದಾರರಿಗೆ ಆಪಾದಿತ ಘಟನೆಗಳ ಬಗ್ಗೆ ಮಾಹಿತಿ ನೀಡುವ ಫೋನ್ ಕರೆಗಳು ಬಂದಿವೆ. ವಿಶ್ವಾಸಾರ್ಹ ಸುದ್ದಿ ವರದಿಗಳೂ ಇವೆ ಎಂದು ಹೇಳಿದ್ದಾರೆ.

“ಅವರನ್ನು (ರೋಹಿಂಗ್ಯಾ ನಿರಾಶ್ರಿತರನ್ನು) ಅಂಡಮಾನ್‌ಗೆ ಕರೆದೊಯ್ದು. ಲೈಫ್ ಜಾಕೆಟ್‌ ತೊಡಿಸಿ ಸಮುದ್ರಕ್ಕೆ ತಳ್ಳಲಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನಿಂದ ಕರೆ ಬಂದಿದೆ. ಅವರು (ಅರ್ಜಿದಾರರು) ದೆಹಲಿಯಲ್ಲಿದ್ದಾರೆ, ಅವರಿಗೆ ಫೋನ್‌ನಲ್ಲಿ ವಿಷಯ ತಿಳಿಸಲಾಗಿದೆ. ನಮ್ಮ ಬಳಿ ಫೋನ್ ಕರೆಯ ಅನುವಾದವೂ ಇದೆ. ದಯವಿಟ್ಟು ವಿದೇಶಿ ಮಾಧ್ಯಮ ವರದಿಗಳನ್ನು ನೋಡಿ… ಅದು ವಿಶ್ವಾಸಾರ್ಹ ವರದಿಗಳೆಂದು ಹೇಳುತ್ತದೆ” ಎಂದು ವಕೀಲ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ನ್ಯಾಯಾಲಯ ಈ ಬಗ್ಗೆ ಯಾವುದೇ ಆದೇಶ ನೀಡಲು ಒಲವು ತೋರಿಲ್ಲ.

“ಆ ಕರೆಗಳನ್ನು ಯಾರು ಪರಿಶೀಲಿಸಿದ್ದಾರೆ ಮತ್ತು ಯಾರಿಗೆ ಇದೆಲ್ಲದರ ಬಗ್ಗೆ ವೈಯಕ್ತಿಕ ಜ್ಞಾನವಿದೆ ಎಂಬುದನ್ನು ನಮಗೆ ತೋರಿಸಿ. ಯಾರಾದರೂ ನಿಂತು ಇದನ್ನು ವೀಕ್ಷಿಸದ, ಅರ್ಜಿದಾರರು ಅದನ್ನು ನೈಜ ಸಮಯದಲ್ಲಿ ನೋಡದ ಹೊರತು ನೀವು ಇದನ್ನು ಹೇಗೆ ದೃಢೀಕರಿಸುತ್ತೀರಿ? ಈ ವರದಿಗಳನ್ನು ದಾಖಲೆಯಲ್ಲಿ ಇರಿಸಿ… ನಾವು ನೋಡುತ್ತೇವೆ. ಹೊರಗೆ ಕುಳಿತಿರುವ ಈ ಎಲ್ಲಾ ಜನರು ನಮ್ಮ ಸಾರ್ವಭೌಮತ್ವ ಮತ್ತು ನಮ್ಮ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ರೋಹಿಂಗ್ಯಾ ನಿರಾಶ್ರಿತರನ್ನು ರಕ್ಷಿಸಬೇಕು ಎಂಬುದನ್ನು ಪರಿಗಣಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ.

“ದಯವಿಟ್ಟು ಅಂತಾರಾಷ್ಟ್ರೀಯ ನ್ಯಾಯಾಲಯವು ರೋಹಿಂಗ್ಯಾಗಳ ಬಗ್ಗೆ ಏನು ಹೇಳಿದೆ ಮತ್ತು ರೋಹಿಂಗ್ಯಾಗಳನ್ನು ಏಕೆ ವಾಪಸ್ ಕಳಿಸಬಾರದು ಎಂಬುದನ್ನು ನೋಡಿ… ವಲಸಿಗರನ್ನು ವಾಪಸ್ ಕಳಿಸಬಹುದು. ಆದರೆ, ರೋಹಿಂಗ್ಯಾಗಳನ್ನು ಕಳುಹಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅರ್ಜಿದಾರರು ಮಾಡಿರುವ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳಿದ್ದರೆ ಮಾತ್ರ ಮಧ್ಯಪ್ರವೇಶಿಸಬಹುದು ಎಂದಿದೆ.

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...