Homeಮುಖಪುಟಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ.

ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ ಸಿಂಗ್ ಅವರ ಪೀಠವು, ದೃಢವಾದ ಪುರಾವೆಗಳಿಲ್ಲದೆ ಮಧ್ಯಪ್ರವೇಶಿಸಲು ಒಲವು ತೋರಿಲ್ಲ ಎಂದು ವರದಿಯಾಗಿದೆ.

“ಪ್ರತಿ ಬಾರಿಯೂ ನಿಮ್ಮದೊಂದು ಹೊಸ ಕಥೆ ಸಿದ್ದವಾಗುತ್ತದೆ. ಈ ಬಾರಿ ಈ ಸುಂದರವಾದ ರಚಿಸಿದ್ದೀರಿ. ಸಮುದ್ರಕ್ಕೆ ತಳ್ಳಿದ್ದರ ಫೋಟೋ, ವಿಡಿಯೋ ತೆಗೆದವರು ಯಾರು? ಅವರು ವಾಪಸ್ ಬಂದಿದ್ದು ಹೇಗೆ? ಏನು ದಾಖಲೆ ಇದೆ?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

“ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ನೀವು ಈ ಕಾಲ್ಪನಿಕ ಅರ್ಜಿ ಸಲ್ಲಿಸಿದ್ದೀರಿ” ನ್ಯಾಯಾಧೀಶರು ಹೇಳಿದ್ದಾರೆ. ಈ ಮೂಲಕ ಅವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದರ ನಂತರದ ಘಟನೆಗಳನ್ನು ಉಲ್ಲೇಖಿಸಿರಬಹುದು ಎಂದು barandbench.com ವರದಿ ತಿಳಿಸಿದೆ.

ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು, ಅರ್ಜಿದಾರರಿಗೆ ಆಪಾದಿತ ಘಟನೆಗಳ ಬಗ್ಗೆ ಮಾಹಿತಿ ನೀಡುವ ಫೋನ್ ಕರೆಗಳು ಬಂದಿವೆ. ವಿಶ್ವಾಸಾರ್ಹ ಸುದ್ದಿ ವರದಿಗಳೂ ಇವೆ ಎಂದು ಹೇಳಿದ್ದಾರೆ.

“ಅವರನ್ನು (ರೋಹಿಂಗ್ಯಾ ನಿರಾಶ್ರಿತರನ್ನು) ಅಂಡಮಾನ್‌ಗೆ ಕರೆದೊಯ್ದು. ಲೈಫ್ ಜಾಕೆಟ್‌ ತೊಡಿಸಿ ಸಮುದ್ರಕ್ಕೆ ತಳ್ಳಲಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನಿಂದ ಕರೆ ಬಂದಿದೆ. ಅವರು (ಅರ್ಜಿದಾರರು) ದೆಹಲಿಯಲ್ಲಿದ್ದಾರೆ, ಅವರಿಗೆ ಫೋನ್‌ನಲ್ಲಿ ವಿಷಯ ತಿಳಿಸಲಾಗಿದೆ. ನಮ್ಮ ಬಳಿ ಫೋನ್ ಕರೆಯ ಅನುವಾದವೂ ಇದೆ. ದಯವಿಟ್ಟು ವಿದೇಶಿ ಮಾಧ್ಯಮ ವರದಿಗಳನ್ನು ನೋಡಿ… ಅದು ವಿಶ್ವಾಸಾರ್ಹ ವರದಿಗಳೆಂದು ಹೇಳುತ್ತದೆ” ಎಂದು ವಕೀಲ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ನ್ಯಾಯಾಲಯ ಈ ಬಗ್ಗೆ ಯಾವುದೇ ಆದೇಶ ನೀಡಲು ಒಲವು ತೋರಿಲ್ಲ.

“ಆ ಕರೆಗಳನ್ನು ಯಾರು ಪರಿಶೀಲಿಸಿದ್ದಾರೆ ಮತ್ತು ಯಾರಿಗೆ ಇದೆಲ್ಲದರ ಬಗ್ಗೆ ವೈಯಕ್ತಿಕ ಜ್ಞಾನವಿದೆ ಎಂಬುದನ್ನು ನಮಗೆ ತೋರಿಸಿ. ಯಾರಾದರೂ ನಿಂತು ಇದನ್ನು ವೀಕ್ಷಿಸದ, ಅರ್ಜಿದಾರರು ಅದನ್ನು ನೈಜ ಸಮಯದಲ್ಲಿ ನೋಡದ ಹೊರತು ನೀವು ಇದನ್ನು ಹೇಗೆ ದೃಢೀಕರಿಸುತ್ತೀರಿ? ಈ ವರದಿಗಳನ್ನು ದಾಖಲೆಯಲ್ಲಿ ಇರಿಸಿ… ನಾವು ನೋಡುತ್ತೇವೆ. ಹೊರಗೆ ಕುಳಿತಿರುವ ಈ ಎಲ್ಲಾ ಜನರು ನಮ್ಮ ಸಾರ್ವಭೌಮತ್ವ ಮತ್ತು ನಮ್ಮ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ರೋಹಿಂಗ್ಯಾ ನಿರಾಶ್ರಿತರನ್ನು ರಕ್ಷಿಸಬೇಕು ಎಂಬುದನ್ನು ಪರಿಗಣಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ.

“ದಯವಿಟ್ಟು ಅಂತಾರಾಷ್ಟ್ರೀಯ ನ್ಯಾಯಾಲಯವು ರೋಹಿಂಗ್ಯಾಗಳ ಬಗ್ಗೆ ಏನು ಹೇಳಿದೆ ಮತ್ತು ರೋಹಿಂಗ್ಯಾಗಳನ್ನು ಏಕೆ ವಾಪಸ್ ಕಳಿಸಬಾರದು ಎಂಬುದನ್ನು ನೋಡಿ… ವಲಸಿಗರನ್ನು ವಾಪಸ್ ಕಳಿಸಬಹುದು. ಆದರೆ, ರೋಹಿಂಗ್ಯಾಗಳನ್ನು ಕಳುಹಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅರ್ಜಿದಾರರು ಮಾಡಿರುವ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳಿದ್ದರೆ ಮಾತ್ರ ಮಧ್ಯಪ್ರವೇಶಿಸಬಹುದು ಎಂದಿದೆ.

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...