Homeಮುಖಪುಟಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ.

ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ ಸಿಂಗ್ ಅವರ ಪೀಠವು, ದೃಢವಾದ ಪುರಾವೆಗಳಿಲ್ಲದೆ ಮಧ್ಯಪ್ರವೇಶಿಸಲು ಒಲವು ತೋರಿಲ್ಲ ಎಂದು ವರದಿಯಾಗಿದೆ.

“ಪ್ರತಿ ಬಾರಿಯೂ ನಿಮ್ಮದೊಂದು ಹೊಸ ಕಥೆ ಸಿದ್ದವಾಗುತ್ತದೆ. ಈ ಬಾರಿ ಈ ಸುಂದರವಾದ ರಚಿಸಿದ್ದೀರಿ. ಸಮುದ್ರಕ್ಕೆ ತಳ್ಳಿದ್ದರ ಫೋಟೋ, ವಿಡಿಯೋ ತೆಗೆದವರು ಯಾರು? ಅವರು ವಾಪಸ್ ಬಂದಿದ್ದು ಹೇಗೆ? ಏನು ದಾಖಲೆ ಇದೆ?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

“ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ನೀವು ಈ ಕಾಲ್ಪನಿಕ ಅರ್ಜಿ ಸಲ್ಲಿಸಿದ್ದೀರಿ” ನ್ಯಾಯಾಧೀಶರು ಹೇಳಿದ್ದಾರೆ. ಈ ಮೂಲಕ ಅವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದರ ನಂತರದ ಘಟನೆಗಳನ್ನು ಉಲ್ಲೇಖಿಸಿರಬಹುದು ಎಂದು barandbench.com ವರದಿ ತಿಳಿಸಿದೆ.

ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು, ಅರ್ಜಿದಾರರಿಗೆ ಆಪಾದಿತ ಘಟನೆಗಳ ಬಗ್ಗೆ ಮಾಹಿತಿ ನೀಡುವ ಫೋನ್ ಕರೆಗಳು ಬಂದಿವೆ. ವಿಶ್ವಾಸಾರ್ಹ ಸುದ್ದಿ ವರದಿಗಳೂ ಇವೆ ಎಂದು ಹೇಳಿದ್ದಾರೆ.

“ಅವರನ್ನು (ರೋಹಿಂಗ್ಯಾ ನಿರಾಶ್ರಿತರನ್ನು) ಅಂಡಮಾನ್‌ಗೆ ಕರೆದೊಯ್ದು. ಲೈಫ್ ಜಾಕೆಟ್‌ ತೊಡಿಸಿ ಸಮುದ್ರಕ್ಕೆ ತಳ್ಳಲಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನಿಂದ ಕರೆ ಬಂದಿದೆ. ಅವರು (ಅರ್ಜಿದಾರರು) ದೆಹಲಿಯಲ್ಲಿದ್ದಾರೆ, ಅವರಿಗೆ ಫೋನ್‌ನಲ್ಲಿ ವಿಷಯ ತಿಳಿಸಲಾಗಿದೆ. ನಮ್ಮ ಬಳಿ ಫೋನ್ ಕರೆಯ ಅನುವಾದವೂ ಇದೆ. ದಯವಿಟ್ಟು ವಿದೇಶಿ ಮಾಧ್ಯಮ ವರದಿಗಳನ್ನು ನೋಡಿ… ಅದು ವಿಶ್ವಾಸಾರ್ಹ ವರದಿಗಳೆಂದು ಹೇಳುತ್ತದೆ” ಎಂದು ವಕೀಲ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ನ್ಯಾಯಾಲಯ ಈ ಬಗ್ಗೆ ಯಾವುದೇ ಆದೇಶ ನೀಡಲು ಒಲವು ತೋರಿಲ್ಲ.

“ಆ ಕರೆಗಳನ್ನು ಯಾರು ಪರಿಶೀಲಿಸಿದ್ದಾರೆ ಮತ್ತು ಯಾರಿಗೆ ಇದೆಲ್ಲದರ ಬಗ್ಗೆ ವೈಯಕ್ತಿಕ ಜ್ಞಾನವಿದೆ ಎಂಬುದನ್ನು ನಮಗೆ ತೋರಿಸಿ. ಯಾರಾದರೂ ನಿಂತು ಇದನ್ನು ವೀಕ್ಷಿಸದ, ಅರ್ಜಿದಾರರು ಅದನ್ನು ನೈಜ ಸಮಯದಲ್ಲಿ ನೋಡದ ಹೊರತು ನೀವು ಇದನ್ನು ಹೇಗೆ ದೃಢೀಕರಿಸುತ್ತೀರಿ? ಈ ವರದಿಗಳನ್ನು ದಾಖಲೆಯಲ್ಲಿ ಇರಿಸಿ… ನಾವು ನೋಡುತ್ತೇವೆ. ಹೊರಗೆ ಕುಳಿತಿರುವ ಈ ಎಲ್ಲಾ ಜನರು ನಮ್ಮ ಸಾರ್ವಭೌಮತ್ವ ಮತ್ತು ನಮ್ಮ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ರೋಹಿಂಗ್ಯಾ ನಿರಾಶ್ರಿತರನ್ನು ರಕ್ಷಿಸಬೇಕು ಎಂಬುದನ್ನು ಪರಿಗಣಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ.

“ದಯವಿಟ್ಟು ಅಂತಾರಾಷ್ಟ್ರೀಯ ನ್ಯಾಯಾಲಯವು ರೋಹಿಂಗ್ಯಾಗಳ ಬಗ್ಗೆ ಏನು ಹೇಳಿದೆ ಮತ್ತು ರೋಹಿಂಗ್ಯಾಗಳನ್ನು ಏಕೆ ವಾಪಸ್ ಕಳಿಸಬಾರದು ಎಂಬುದನ್ನು ನೋಡಿ… ವಲಸಿಗರನ್ನು ವಾಪಸ್ ಕಳಿಸಬಹುದು. ಆದರೆ, ರೋಹಿಂಗ್ಯಾಗಳನ್ನು ಕಳುಹಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅರ್ಜಿದಾರರು ಮಾಡಿರುವ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳಿದ್ದರೆ ಮಾತ್ರ ಮಧ್ಯಪ್ರವೇಶಿಸಬಹುದು ಎಂದಿದೆ.

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....